75 ದಿನಗಳ ನೀಲ ನಕ್ಷೆ: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ “ಕಣ’ಕಹಳೆ
ಬಿಜೆಪಿಗೆ ಪ್ರತಿತಂತ್ರ ಹೆಣೆಯಲು ಖರ್ಗೆ ತಂತ್ರಗಾರಿಕೆ
Team Udayavani, Dec 13, 2022, 6:35 AM IST
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ದಿಲ್ಲಿಯಿಂದ ರಣಕಹಳೆ ಮೊಳಗಿಸಿದ್ದು, 75 ದಿನಗಳ “ವಿಸ್ತೃತ ನೀಲ ನಕ್ಷೆ’ (ರೋಡ್ ಮ್ಯಾಪ್) ಸಿದ್ಧಪಡಿಸಿದೆ. ಗುಜರಾತ್ ಫಲಿತಾಂಶದ ಬಳಿಕ ಬಿಜೆಪಿ ರಣತಂತ್ರ ವೇಗ ಪಡೆದುಕೊಂಡ ಬೆನ್ನಲ್ಲೇ ಪ್ರತಿತಂತ್ರ ಹೆಣೆಯಲು ಕಾಂಗ್ರೆಸ್ ಸಜ್ಜಾಗಿದೆ. ಅಷ್ಟೇ ಅಲ್ಲ, ಸಿಎಂ ಚರ್ಚೆಗೆ ಬ್ರೇಕ್ ಹಾಕುವಂತೆಯೂ ಹೈಕಮಾಂಡ್ ರಾಜ್ಯ ನಾಯಕರಿಗೆ ಸ್ಪಷ್ಟ ಸೂಚನೆ ನೀಡಿದೆ.
ತವರು ರಾಜ್ಯ ಕರ್ನಾಟಕವನ್ನು ತೆಕ್ಕೆಗೆ ತೆಗೆದು ಕೊಳ್ಳಲು ಖುದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಂಗಪ್ರವೇಶ ಮಾಡಿದ್ದಾರೆ. ಅವರ ಸಾರಥ್ಯದಲ್ಲಿ ದಿಲ್ಲಿಯಲ್ಲಿ ಸೋಮವಾರ ನಡೆದ ರಾಜ್ಯ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ಯಲ್ಲಿ ರೋಡ್ ಮ್ಯಾಪ್ ತೀರ್ಮಾನ ತೆಗೆದು ಕೊಳ್ಳಲಾಗಿದೆ. ಇದರಂತೆ ನಾಲ್ಕು ಬೃಹತ್ ಸಮಾವೇಶಗಳು ಮತ್ತು ಸಾಮೂಹಿಕವಾಗಿ ಬಸ್ ಯಾತ್ರೆ ಕೈಗೊಳ್ಳಲು ನಿರ್ಧರಿಸಲಾಗಿದೆ.
ಏನಿದು ವಿಸ್ತೃತ ನೀಲ ನಕ್ಷೆ?
ಬೊಮ್ಮಾಯಿ ನೇತೃತ್ವದ 40 ಪರ್ಸೆಂಟ್ ಭ್ರಷ್ಟ ಸರಕಾರದ ವಿರುದ್ಧ ಹೋರಾಟ ನಡೆಸಲು ಹಾಗೂ ಜನರಿಗೆ ಅಭಿವೃದ್ಧಿಯ ವಿಚಾರಗಳನ್ನು ತಿಳಿಸಲು, ಅಭಿವೃದ್ಧಿ ಮತ್ತು ಸಮೃದ್ಧಿಯ ಹೊಸ ದಿಕ್ಸೂಚಿ ತೋರಿಸಲು 75 ದಿನಗಳ ವಿಸ್ತೃತ ನೀಲ ನಕ್ಷೆ ರೂಪಿಸಲಾಗಿದೆ. ಬೆಳಗಾವಿ ಅಧಿವೇಶನದ ಬಳಿಕ ಯೋಜನಾಬದ್ಧ ರೀತಿಯಲ್ಲಿ ಕಾರ್ಯ ರಂಗಕ್ಕಿಳಿಯಲು ಪಣ ತೊಡಲಾಗಿದೆ ಎಂದು ರಣದೀಪ್ ಸುಜೇìವಾಲ ತಿಳಿಸಿದ್ದಾರೆ.
ಯಾರೆಲ್ಲ ಸಭೆಯಲ್ಲಿ ಭಾಗಿ?
ಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸಹಿತ ಹಲವು ನಾಯಕರು ಭಾಗವಹಿಸಿದ್ದರು.
ಜಂಟಿ ಬಸ್ ಯಾತ್ರೆ
ಮೊದಲ ಹಂತದಲ್ಲಿ 20 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಮಾಡಲಿದ್ದೇವೆ ಎಂದು ಸಭೆ ಅನಂತರ ಸಿದ್ದರಾಮಯ್ಯ ಹೇಳಿದ್ದಾರೆ. ಇದರಲ್ಲಿ ನಾನು, ಕೆಪಿಸಿಸಿ ಅಧ್ಯಕ್ಷರು ಸೇರಿ ಎಲ್ಲರೂ ಪಾಲ್ಗೊಳ್ಳುತ್ತೇವೆ. ಇದಾದ ಬಳಿಕ ಎರಡು ತಂಡಗಳನ್ನು ಮಾಡಿ, ಪ್ರತ್ಯೇಕವಾಗಿ ವಿಧಾನಸಭಾ ಕ್ಷೇತ್ರದ ಯಾತ್ರೆ ನಡೆಸುತ್ತೇವೆ ಎಂದು ಹೇಳಿದರು.
ಸಿಎಂ ಮಾತು ಬೇಡ
ಮುಂದಿನ ಸಿಎಂ ಕುರಿತ ಹೇಳಿಕೆಗಳಿಗೆ ತಡೆ ಹಾಕಿರುವ ಹೈಕಮಾಂಡ್, ಎಲ್ಲರೂ ಒಟ್ಟಾಗಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಮೊದಲ ಆದ್ಯತೆ ಯಾಗಬೇಕು. ಈ ಸಂಬಂಧ ನಾಯಕರು ತಮ್ಮ ಬೆಂಬಲಿಗರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಏನೇ ಸಮಸ್ಯೆ ಬಂದರೂ ಹಿರಿಯ ನಾಯಕರ ಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡು ಕೊಳ್ಳಬೇಕು ಎಂದು ಸ್ಪಷ್ಟ ಸೂಚನೆ ನೀಡಿದೆ ಎನ್ನಲಾಗಿದೆ.
ನಾಲ್ಕು ಬೃಹತ್ ಸಮಾವೇಶಗಳು
01 ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಬಿಜೆಪಿ ಸರಕಾರದ ಸುಳ್ಳುಗಳು, ಕಾಂಗ್ರೆಸ್ ಬದ್ಧತೆ ತಿಳಿಸುವ ಸಮಾವೇಶ
ಸ್ಥಳ: ವಿಜಯಪುರ lದಿನಾಂಕ: ಡಿ. 30
02. ಮಹದಾಯಿ ವಿಚಾರ
ಸ್ಥಳ: ಹುಬ್ಬಳ್ಳಿ l ದಿನಾಂಕ: ಜ. 02
03.ಮೀಸಲಾತಿ ವಿಚಾರದಲ್ಲಿ ಬಿಜೆಪಿ ದಾರಿ ತಪ್ಪಿಸುತ್ತಿರುವ ಬಗ್ಗೆ ಅರಿವು ಮೂಡಿಸಲು ಎಸ್ಸಿ-ಎಸ್ಟಿ ಸಮಾವೇಶ
ಸ್ಥಳ: ಚಿತ್ರದುರ್ಗ l ದಿನಾಂಕ: ಜ. 08
04. ಒಬಿಸಿ ಸಮಾವೇಶ
ಸ್ಥಳ, ದಿನಾಂಕ l ನಿಗದಿಯಾಗಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ