ಚೀನಾ ದಾಳಿ ಹೀಗೆ ಮುಂದುವರೆದರೆ ಮುಂದೊಂದು ದಿನ ಸಿಯಾಚಿನ್ ಕೂಡ ಕೈ ತಪ್ಪಲಿದೆ: ಓವೈಸಿ ಕಿಡಿ
ಪ್ರಧಾನಿ ಆಕ್ರಮಣವನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ
Team Udayavani, Dec 13, 2022, 4:36 PM IST
ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯ ನಂತರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಚೀನಾ ನಿಧಾನವಾಗಿ ದಾಳಿ ನಡೆಸುತ್ತಿದೆ ಎಂದ ಅವರು, ಇದೇ ರೀತಿ ಮುಂದುವರಿದರೆ ಮುಂದೊಂದು ದಿನ ಸಿಯಾಚಿನ್ ಕೂಡ ಭಾರತದ ಕೈ ತಪ್ಪಲಿದೆ ಎಂದು ಕಿಡಿಕಾರಿದ್ದಾರೆ.
ಡೋಕ್ಲಾಮ್, ಡೆಪ್ಸಾಂಗ್, ಗಾಲ್ವಾನ್ ಮತ್ತು ಡೆಮ್ಚೋಕ್ನ ಅನುಭವಗಳಿಂದ ಚೀನಾ ಹೆಚ್ಚು ಕಲಿತಿದ್ದು, ಪ್ರಧಾನಿ ಮೋದಿ ಈ ಆಕ್ರಮಣವನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು. ಈ ಕಾರಣಕ್ಕಾಗಿ ಚೀನಾ ಸದ್ದುಗದ್ದಲವಿಲ್ಲದೆ ನಿಧಾನವಾಗಿ ದಾಳಿ ನಡೆಸುತ್ತಲೇ ಬಂದಿದೆ ಎಂದರು.
ಟ್ವೀಟ್ ಮೂಲಕ ಸರ್ಕಾರವನ್ನು ಪ್ರಶ್ನಿಸಿರುವ ಅವರು, ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೈನಿಕರು ತಮ್ಮ ಸೇನಾ ನೆಲೆಯನ್ನು ನಿರ್ಮಿಸಲು ಏಕೆ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ. “ಚೀನಾ 2017 ರಲ್ಲಿ ಡೋಕ್ಲಾಮ್ನಲ್ಲಿ ಮತ್ತು 2020 ರ ಏಪ್ರಿಲ್ನಲ್ಲಿ ಲಡಾಖ್ನಲ್ಲಿ ಅದೇ ರೀತಿ ಮಾಡಿತು. ನಾವೇಕೆ ಇನ್ನೂ ನಮ್ಮ ಶಕ್ತಿಯನ್ನು ಹೆಚ್ಚಿಸಿಕೊಂಡಿಲ್ಲ?” ಘರ್ಷಣೆಯ ಬಗ್ಗೆ ಸಂಸತ್ತಿನಲ್ಲಿ ಸಂಪೂರ್ಣ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: ಬೆಚ್ಚಿ ಬೀಳಿಸುವ ಘಟನೆ: ಚಲಿಸುತ್ತಿದ್ದ ಬಸ್ಸಿನ ಚಕ್ರಕ್ಕೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ