ಎಂ.ಬಿ.ಪಾಟೀಲ್ ಸಿ.ಎಂ ಆಗಲೆಂದು ಹರಕೆ ಹೊತ್ತು ಶಬರಿ ಮಲೆಗೆ ಪಾದಯಾತ್ರೆ ಹೊರಟ ಅಯ್ಯಪ್ಪ ಭಕ್ತ


Team Udayavani, Dec 13, 2022, 6:06 PM IST

ಎಂ.ಬಿ.ಪಾಟೀಲ ಸಿ.ಎಂ ಆಗಲೆಂದು ಹರಕೆ ಹೊತ್ತು ಶಬರಿಗೆ ಪಾದಯಾತ್ರೆ ಹೊರಟ ಅಯ್ಯಪ್ಪ ಭಕ್ತ

ವಿಜಯಪುರ : ಬಬಲೇಶ್ವರ ಕ್ಷೇತ್ರದ ಶಾಸಕರೂ ಆಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಮುಖ್ಯಮಂತ್ರಿ ಆಗಲೆಂದು ಜಿಲ್ಲೆಯ ಅಯ್ಯಪ್ಪಸ್ವಾಮಿ ಭಕ್ತರೊಬ್ಬರು ಹರಕೆಹೊತ್ತು, ಶಬರಿಗೆ ಆದಯಾತ್ರೆ ಹೊರಟಿದ್ದಾರೆ.

ಬಬಲೇಶ್ವರ ಕ್ಷೇತ್ರ ವ್ಯಾಪ್ತಿಯ ತಿಕೋಟಾ ತಾಲೂಕಿನ ಬಾಬಾನಗರದ ರೈತ ರಾಜಕುಮಾರ ರವೀಂದ್ರ ಹೊನವಾಡ (28) ಎಂಬ ಮಾಲಾಧಾರಿ ಅಯ್ಯಪ್ಪಸ್ವಾಮಿ ಭಕ್ತರನೇ ಎಂ.ಬಿ.ಪಾಟೀಲ ಅವರು ಮುಖ್ಯಮಂತ್ರಿ ಆಗಲೆಂದು ಹರಕೆ ಹೊತ್ತು, ಶಬರಿಗೆ ಪಾದಯಾತ್ರೆ ಹೊರಟ ಯುವಕ.

ಸುಮಾರು 1300 ಕಿ. ಮೀ. ಪಾದಯಾತ್ರೆ ಕೈಗೊಂಡಿರುವ ರಾಜಕುಮಾರ ಏಕಾಂಗಿಯಾಗಿ ಶಬರಿಗೆ ಹೊರಟಿದ್ದಾರೆ. ಅಯ್ಯಪ್ಪಸ್ವಾಮಿ ಸನ್ನಿಧಾನಕ್ಕೆ ಹರಕೆ ಹೊತ್ತು ಹೊರಟಿರುವ ನನಗೆ ಯಾವ ಸಮಸ್ಯೆ ಆಗದು ಎಂಬುದು ಈ ಭಕ್ತನ ಆಶಯ.

ಡಿ.6 ರಿಂದ ಬಾಬಾನಗರದಿಂದ ಶಬರಿಮಲೈಗೆ ಪಾದಯಾತ್ರೆ ಕೈಗೊಂಡಿರುವ ಯುವಭಕ್ತ, ನಿತ್ಯವೂ ಸುಮಾರು 40 ಕಿ.ಮೀ. ಪಾದಯಾತ್ರೆ ನಡೆಸುತ್ತಾರೆ. ಇದೀಗ ಉತ್ತರ ಕನ್ನಡ ಜಿಲ್ಲೆಯ ಕಾರವಾರ ದಾಟಿರುವ ಅಯ್ಯಪ್ಪ ಮಾಲಾಧಾರಿ, ತಲೆ ಮೇಲೆ ಇರುಮುಡಿ ಹೊತ್ತು, ಕೊರಳಲ್ಲಿ ಅಯ್ಯಪ್ಪಸ್ವಾಮಿ, ವಿಪಕ್ಷ ನಾಯಕರ ಸಿದ್ಧರಾಮಯ್ಯ ಅವರ ಸಾಂಕೇತಿಕ ಹಾಗೂ ಎಂ.ಬಿ.ಪಾಟೀಲ ಅವರ ಪ್ರಧಾನ ಚಿತ್ರ ಹಾಕಿಕೊಂಡ ಫೋಟೋ ಕೊರಳಲ್ಲಿ ಹಝಾಕಿಕೊಂಡು ಪಾದಯಾತ್ರೆ ನಡೆಸಿದ್ದಾರೆ.

ಸಾವಿರಾರು ಅಡಿ ಹತ್ತಾರು ಕೊಳವೆಭಾವಿ ಕೊರೆಸಿದರೂ ಬೊಗಸೆ ನೀರು ಸಿಗದ ದುಸ್ಥಿತಿ ನಮ್ಮ ಭಾಗದಲ್ಲಿತ್ತು. ಎಂ.ಬಿ.ಪಾಟೀಲ ಅವರು ಜಲಸಂಪನ್ಮೂಲ ಸಚಿವರಾಗುವ ಮೂಲಕ ನಮ್ಮ ಭಾಗದಲ್ಲಿ ರೈತರ ಜಮೀನಿಗೆ ನೀರು ಹರಿಸಿ ಸಂಕಷ್ಟ ನೀಗಿದ್ದಾರೆ.

ತಿಕೋಟಾ, ಬಬಲೇಶ್ವರ ಮಾತ್ರವಲ್ಲ ಇಡೀ ಜಿಲ್ಲೆಯ ರೈತರು ನೆಮ್ಮದಿಯ ಜೀವನ ನಡೆಸಲು ಸಹಕಾರಿ ಆಗಿದೆ. ಹೀಗಾಗಿ ಎಂ.ಬಿ.ಪಾಟೀಲ ಅವರು ಮುಖ್ಯಮಂತ್ರಿ ಸ್ಥಾನ ಸಿಗಲಿ ಎಂಬ ಹರಕೆ ಹೊತ್ತು ಅಯ್ಯಪ್ಪ ಸನ್ನಿಧಿಗೆ ಪಾದಯಾತ್ರೆ ಹೊರಟಿದ್ದೇನೆ ಎಂದು ವಿವರಿಸಿದರು.

ನನಗೆ 5.5 ಎಕರೆ ಜಮೀನಿದ್ದು, ದ್ರಾಕ್ಷಿ ಬೆಳೆದಿರುವ ನನಗೆ ಬೆಳೆಗೆ ನೀರು ಹೊಂದಿಸುವುದು ಕಷ್ಟವಾಗಿ, ಟ್ಯಾಂಕರ್ ಮೂಲಕ ನೀರು ಹಾಕಿಸುತ್ತಿದ್ದೆ. ಎಂ.ಬಿ.ಪಾಟೀಲ ಅವರ ರೈತ ಪರ ಕಾಳಜಿಯ ಬದ್ಧತೆಯ ಪರಿಣಾಮ ನನ್ನ ಕೊಳವೆ ಬಾವಿಗಳಲ್ಲಿ ಜೀವಸೆಲೆ ಉಕ್ಕುತ್ತಿದ್ದು, ತೋಟಗಾರಿಕೆ ಬೆಳೆ ಬೆಳೆದು ನೆಮ್ಮದಿಯಿಂದ ಜೀವನ ನಡೆಸಲು ಸಹಕಾರಿ ಆಗಿದೆ. ಇದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸಲು ಅಯ್ಯಪ್ಪ ದೇವರಿಗೆ ಹರಕೆ ಹೊತ್ತಿದ್ದೇನೆ ಎಂದು ರಾಜಕುಮಾರ ಹೇಳುತ್ತಾರೆ.

ತಮ್ಮೂರಿನ ಯುವಕನ ಈ ವಿಶಿಷ್ಟ ಹರಕೆ ಹಾಗೂ ಸಾಹಸದ ಪಾದಯಾತ್ರೆಗೆ ಬಾಬಾನಗರ ಗ್ರಾಮಸ್ಥರು ಏಕಾಂಗಿ ಪಾದಯಾತ್ರೆ ಬೇಡ ಎಂದರೂ ಛಲಗಾರಿಕೆಯಿಂದ ಪಾದಯಾತ್ರೆ ಆರಂಭಿಸಿದ್ದಾಗಿ ಶಂಕರಗೌಡ ಗುರನಗೌಡ ಬಿರಾದಾರ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಕುಣಿಗಲ್: ಪ್ರತ್ಯೇಕ ಘಟನೆ; ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಇಬ್ಬರು ಸಾವು

ಟಾಪ್ ನ್ಯೂಸ್

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.