ಸಾಮಾಜಿಕ ಮಾಧ್ಯಮಗಳ ಮೂಲಕ ಉಗ್ರವಾದ ವಿಸ್ತರಣೆ

ಲೋಕಸಭೆಗೆ ಕೇಂದ್ರ ಸರಕಾರ ಮಾಹಿತಿ ; ದೇಶದಲ್ಲಿ ಹೆಚ್ಚಿದೆ ಕ್ಯಾನ್ಸರ್‌ ಪ್ರಕರಣಗಳು

Team Udayavani, Dec 14, 2022, 6:20 AM IST

ಸಾಮಾಜಿಕ ಮಾಧ್ಯಮಗಳ ಮೂಲಕ ಉಗ್ರವಾದ ವಿಸ್ತರಣೆ

ಹೊಸದಿಲ್ಲಿ: ಸಾಮಾಜಿಕ ಮಾಧ್ಯಮಗಳ ಬಳಕೆಯ ಮುಖಾಂತರ ಭಯೋತ್ಪಾದನೆ ಹಬ್ಬುವ ಸಾಧ್ಯತೆ ಈಗ ಹಿಂದೆಂದಿಗಿಂತಲೂ ಹೆಚ್ಚಿದೆ. ಲೋಕಸಭೆ­ಯಲ್ಲಿ ಕೇಂದ್ರ ಸಚಿವ ನಿತ್ಯಾನಂದ ರಾಯ್‌ ಈ ಆಘಾತಕಾರಿ ಮಾಹಿತಿ ನೀಡಿದ್ದಾರೆ.

ಗಡಿರಹಿತ ಸೈಬರ್‌ಸ್ಪೇಸ್‌ನೊಂದಿಗೆ ತ್ವರಿತ ಸಂವ­ಹನವೂ ಜತೆಗೂಡಿರುವ ಕಾರಣ ಹಿಂದೆಂದಿ­ಗಿಂ­ತಲೂ ಹೆಚ್ಚು ವೇಗದಲ್ಲಿ ಉಗ್ರವಾದವು ವ್ಯಾಪಿ­ಸಲಾ­ರಂಭಿಸಿದೆ. ಇದು ದೇಶದ ಸಾರ್ವ­ಭೌಮತೆ ಮತ್ತು ಸಮಗ್ರತೆಗೆ ಅಪಾಯವೊಡ್ಡಿದೆ ಎಂದಿದ್ದಾರೆ. ಕಳೆದ 3 ವರ್ಷಗಳಲ್ಲಿ ಪ್ರತೀದಿನ ಸುಮಾರು 1,500 ರಷ್ಟು ಸೈಬರ್‌ ಅಪರಾಧ ಪ್ರಕರಣಗಳು ದಾಖಲಾ­ಗಿವೆ. ಈ ಪೈಕಿ ಶೇ.2ರಷ್ಟು ಪ್ರಕರಣಗಳಲ್ಲಿ ಮಾತ್ರ ಎಫ್ಐಆರ್‌ ದಾಖಲಾಗಿದೆ ಎಂದೂ ಸರಕಾರ ತಿಳಿಸಿದೆ.

ಕ್ಯಾನ್ಸರ್‌ ಕೇಸ್‌, ಸಾವು ಹೆಚ್ಚಳ: 2020- 2022ರ ನಡುವೆ ದೇಶದಲ್ಲಿ ಕ್ಯಾನ್ಸರ್‌ ಪ್ರಕರಣಗಳು ಮತ್ತು ಅದರಿಂದಾದ ಸಾವು ಪ್ರಕರಣಗಳು ಗಣನೀಯ­ವಾಗಿ ಹೆಚ್ಚಳವಾಗಿವೆ. 2020ರಲ್ಲಿ 13,92,179 ರಷ್ಟಿದ್ದ ಪ್ರಕರಣಗಳು, 2022ರ ವೇಳೆಗೆ 15,61,427 ಕ್ಕೇರಿಕೆಯಾಗಿವೆ. ಸಾವು 7,70,230 ಇದ್ದಿದ್ದು, ಎರಡೇ ವರ್ಷದಲ್ಲಿ 8,08,558­ಕ್ಕೇರಿಕೆ­ಯಾಗಿದೆ.

ಈ ನಡುವೆ, 2021-22ರಲ್ಲಿ ಲಭ್ಯವಿದ್ದ 60,202 ವೈದ್ಯ ಪಿಜಿ ಸೀಟುಗಳ ಪೈಕಿ 3,733 ಸೀಟುಗಳು ಕೌನ್ಸೆಲಿಂಗ್‌ ಬಳಿಕವೂ ಭರ್ತಿಯಾಗಿಲ್ಲ ಎಂದು ಆರೋಗ್ಯ ಸಚಿವ ಮಾಂಡವೀಯಾ ತಿಳಿಸಿದ್ದಾರೆ.

ಸಮುದ್ರದ ಮೂಲಕ: ಭಾರತಕ್ಕೆ ಕಳ್ಳಸಾಗಣೆ ಮೂಲಕ ತರಲಾಗುತ್ತಿರುವ ಹೆರಾಯಿನ್‌, ಕೊಕೇನ್‌, ಹಶೀಶ್‌ನಂತಹ ಮಾದಕದ್ರವ್ಯಗಳ ಪೈಕಿ ಅತೀ ಹೆಚ್ಚು ಡ್ರಗ್ಸ್‌ ಸಮುದ್ರದ ಮೂಲಕ ಸಾಗಣೆ­ಯಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾ­ರಾಮನ್‌ ರಾಜ್ಯಸಭೆಗೆ ಲಿಖೀತ ಮಾಹಿತಿ ನೀಡಿದ್ದಾರೆ. ಪ್ರಸಕ್ತ ವರ್ಷದ ನ.30ರ ವರೆಗೆ 3,017 ಕೆ.ಜಿ. ಹೆರಾಯಿನ್‌, 122 ಕೆಜಿ ಕೊಕೇನ್‌ ವಶಪಡಿಸಿ­ಕೊಳ್ಳಲಾಗಿದ್ದು, ಈ ಪೈಕಿ ಕ್ರಮವಾಗಿ ಶೇ.55 ಮತ್ತು ಶೇ.84ರಷ್ಟು ಡ್ರಗ್ಸ್‌ ಸಮುದ್ರದ ಮೂಲಕ ಕಳ್ಳಸಾಗಣೆಯಾಗಿದ್ದು ಎಂದಿದ್ದಾರೆ ನಿರ್ಮಲಾ.

ಪ್ರಚಾರಕ್ಕೆ 168 ಕೋಟಿ: ಪ್ರಸಕ್ತ ವಿತ್ತೀಯ ವರ್ಷದಲ್ಲಿ ಇದುವರೆಗೆ ಕೇಂದ್ರ ಸರಕಾರ ಪ್ರಚಾರ ಮತ್ತು ಜಾಹೀರಾತಿಗಾಗಿ 168.8 ಕೋಟಿ ವೆಚ್ಚ ಮಾಡಿದೆ ಎಂದು ತಿಳಿಸಿದೆ. ವಿದ್ಯುನ್ಮಾನ ಮಾಧ್ಯಮ ಗಳಲ್ಲಿ ಜಾಹೀರಾತಿಗಾಗಿ 76.84 ಕೋಟಿ ರೂ. ವಿನಿಯೋಗಿಸಲಾಗಿದೆ.

2,302 ಕೊರೊನಾ ವೀರರ ಕುಟುಂಬಕ್ಕೆ ಪರಿಹಾರ
ಕೊರೊನಾ ವಿರುದ್ಧದ ಹೋರಾಟದ ವೇಳೆ ಮಡಿದ ಆರೋಗ್ಯ ಸಿಬಂದಿಯ ಕುಟುಂಬಕ್ಕೆ ತಲಾ 10 ಲಕ್ಷ ರೂ. ವಿಮೆ ನೀಡುವ ಯೋಜನೆಯ ಅನ್ವಯ ಈವರೆಗೆ 2,302 ಮಂದಿಗೆ ತಲಾ 50 ಲಕ್ಷ ರೂ.ಗಳನ್ನು ವಿತರಿಸಲಾಗಿದೆ. ಹೀಗೆಂದು ರಾಜ್ಯಸಭೆಗೆ ಕೇಂದ್ರ ಆರೋಗ್ಯ ಖಾತೆ ಸಹಾಯಕ ಸಚಿವೆ ಭಾರತಿ ಪ್ರವೀಣ್‌ ಪವಾರ್‌ ಲಿಖೀತ ಮಾಹಿತಿ ನೀಡಿದ್ದಾರೆ.

ಕರ್ನಾಟಕದ 38 ಮಂದಿಯ ಸಹಿತ ಒಟ್ಟು 2,302 ಮಂದಿ ಕೊರೊನಾ ವೀರರ ಕುಟುಂಬಕ್ಕೆ ತಲಾ 50 ಲಕ್ಷ ರೂ. ವಿಮೆ ಮೊತ್ತ ಪಾವತಿಸಲಾಗಿದೆ. ಈ ಪೈಕಿ 465 ಕ್ಲೇಮುಗಳು ವೈದ್ಯರ ಕುಟುಂಬಗಳಿಗೆ ಸಂಬಂಧಿಸಿದ್ದು ಎಂದೂ ಸಚಿವೆ ಭಾರತಿ ತಿಳಿಸಿದ್ದಾರೆ. ಬಿಹಾರದ 53, ಉತ್ತರಪ್ರದೇಶದ 64, ಮಹಾರಾಷ್ಟ್ರದ 43, ತಮಿಳುನಾಡು ಮತ್ತು ಆಂಧ್ರಪ್ರದೇಶದ ತಲಾ 37 ವೈದ್ಯರ ಕುಟುಂಬಗಳಿಗೆ ವಿಮೆಯ ಮೊತ್ತ ಪಾವತಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.