ಬಿಎಂಟಿಸಿಯಲ್ಲಿ ಹೊಸ ಮಾದರಿ ಲಂಚಾವತಾರ


Team Udayavani, Dec 14, 2022, 3:42 PM IST

TDY-16

ಬೆಂಗಳೂರು: ಬಿಎಂಟಿಸಿ ಡಿಪೋ ಹಂತಗಳಲ್ಲಿ ನಡೆಯುತ್ತಿರುವ ಲಂಚಾವತಾರಕ್ಕೆ ಕಡಿವಾಣ ಹಾಕಲು ಮೇಲಧಿಕಾರಿಗಳು ಚಾಪೆ ಕೆಳಗೆ ನುಗ್ಗಿದರೆ, ಕೆಳಹಂತದ ಅಧಿಕಾರಿಗಳು ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ.

ರಜೆ ಮಂಜೂರು, ಮಾರ್ಗಗಳ ನಿಯೋಜನೆ ಮತ್ತಿತರ ಕಾರಣಗಳಿಗೆ ಈ ಮೊದಲು ಸಾರಿಗೆ ನೌಕರರಿಂದ ನೇರವಾಗಿ ಘಟಕಗಳಲ್ಲಿನ ಸಹಾಯಕರು ಸೇರಿದಂತೆ ಅಧಿಕಾರಿಗಳಿಗೆ ಗೂಗಲ್‌ ಪೇ, ಫೋನ್‌ ಪೇ ಮೂಲಕ ನೇರವಾಗಿ ಹಣ ವರ್ಗಾವಣೆ ಆಗುತ್ತಿತ್ತು. ಆದರೆ, ಇದರಲ್ಲಿ ಸಿಕ್ಕಿಬೀಳುವ ಸಾಧ್ಯತೆಗಳು ಕಂಡುಬರುತ್ತಿರುವುದರಿಂದ ಈ “ಕಮಿಷನ್‌ ಜಾಲ’ವು ಸುತ್ತಲಿನ ಟೀ-ಕಾಫಿ ಶಾಪ್‌ ಮತ್ತು ಪಾನ್‌ಶಾಪ್‌ಗ ಗೆ ವಿಸ್ತರಣೆಯಾಗಿದೆ! ರಜೆ, ತುರ್ತುರಜೆ ಮತ್ತಿತರ ಸೌಲಭ್ಯಗಳಿಗೆ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಸೇರಿ ಸಂಬಂಧಪಟ್ಟ ಅಧಿಕಾರಿಗಳು ಈಗ ಡಿಪೋಗಳಿಗೆ ಹತ್ತಿರದಲ್ಲಿರುವ ಅಂಗಡಿ ಮಾಲೀಕರ ನಂಬರ್‌ ನೀಡುತ್ತಾರೆ. ಆ ಸಂಖ್ಯೆಗೆ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಫೋನ್‌ ಪೇ, ಗೂಗಲ್‌ ಪೇ ಮೂಲಕ ಲಂಚ ನೀಡುವ “ಟ್ರೆಂಡ್‌’ ಶುರುವಾಗಿದೆ. ಇದನ್ನು ಪತ್ತೆಹಚ್ಚುವುದು ಮೇಲಧಿಕಾರಿಗಳಿಗೆ ಮತ್ತೂಂದು ರೀತಿಯ ತಲೆನೋವಾಗಿ ಪರಿಣಮಿಸಿದೆ.

ಗೂಗಲ್‌ ಪೇ, ಫೋನ್‌ ಪೇನಲ್ಲಿ ಕೆಳಹಂತದ ನೌಕರರಿಂದ ವಿನಾಕಾರಣ ಅಧಿಕಾರಿಗಳ ಮೊಬೈಲ್‌ಗಳಿಗೆ ಹಣ ವರ್ಗಾವಣೆ ಆಗುತ್ತಿರುವುದು ದಾಖಲೆಗಳಿಂದ ಸುಲಭವಾಗಿ ಪತ್ತೆಯಾಗು ತ್ತಿದೆ. ಅದನ್ನು ಆಧರಿಸಿ ಅಧಿಕಾರಿಗಳ ವಿರುದ್ಧ ವರ್ಗಾವಣೆ, ಅಮಾನತಿನಂತಹ ಶಿಸ್ತುಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಈಚೆಗೆ ಒಂದೇ ಘಟಕ (ಡಿಪೋ- 8)ದ ಆರು ಜನರನ್ನು ಅಮಾನತುಗೊಳಿಸಲಾಗಿದೆ. ಅಷ್ಟೇ ಅಲ್ಲ, ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ “ಡಿಜಿಟಲ್‌ ಲಂಚ’ ತೆಗೆದುಕೊಳ್ಳುವವರ ವಿರುದ್ಧ ಕಾರ್ಯಾಚರಣೆ ಸದ್ದಿಲ್ಲದೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅನ್ಯಮಾರ್ಗಗಳ ಮೂಲಕ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ ಎಂದು ಹೆಸರು ಹೇಳಲಿಚ್ಛಿಸದ ಬಿಎಂಟಿಸಿ ಭದ್ರತಾ ಮತ್ತು ಜಾಗೃತ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹೀಗೆ ಶಾಪ್‌ಗಳ ಮಾಲೀಕರಿಗೆ ಹಾಕಿಸಿಕೊಳ್ಳಲಾಗುತ್ತದೆ. ಅಲ್ಲಿಂದ ನಂತರದಲ್ಲಿ ನಗದು ಅಥವಾ ಡಿಜಿಟಲ್‌ ರೂಪದಲ್ಲಿ ತಮ್ಮ ಖಾತೆಗೆ ವರ್ಗಾಯಿಸಿಕೊಳ್ಳಲಾಗುತ್ತದೆ. ಇದಕ್ಕೆ ಪ್ರತಿಯಾಗಿ ಕೆಲವೆಡೆ ಆಯಾ ಅಂಗಡಿ ಮಾಲಿಕರಿಗೆ ಕಮಿಷನ್‌ ಕೂಡ ಇದೆ. ಈ ಜಾಲ ಪತ್ತೆಗೂ ಕಾರ್ಯಪ್ರವೃತ್ತರಾಗಿದ್ದೇವೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

“ಟೀ ಶಾಪ್‌ಗಳ ಮೇಲೆ ನಿಗಾ’: “ಚಾಲನಾ ಸಿಬ್ಬಂದಿ ಸೇರಿದಂತೆ ಡಿಪೋಗಳಲ್ಲಿ ಕಾರ್ಯನಿರ್ವ ಹಿಸುವ ಕೆಳಹಂತದ ಸಿಬ್ಬಂದಿಯಿಂದ ರಜೆ ಮಂಜೂರು ಮಾಡಲು, ಅನುಕೂಲಕರವಾದ ಮಾರ್ಗ ಅಥವಾ ಪಾಳಿ ಹಾಕಿಸಿಕೊಳ್ಳಲು ಲಂಚ ಪಡೆಯುತ್ತಿದ್ದು, ಇದಕ್ಕಾಗಿ ಹತ್ತಿರದ ಟೀ-ಕಾμ ಶಾಪ್‌ಗ್ಳನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಅಂತಹ ಡಿಪೋಗಳ ಸುತ್ತ ನಿಗಾ ಇಡಲಾಗಿದೆ. ಅವುಗಳಿಗೂ ಶೀಘ್ರ ಕಡಿವಾಣ ಹಾಕಲಾಗುವುದು’ ಎಂದು ಬಿಎಂಟಿಸಿ ನಿರ್ದೇಶಕಿ (ಭದ್ರತಾ ಮತ್ತು ಜಾಗೃತ) ರಾಧಿಕಾ “ಉದಯವಾಣಿ’ಗೆ ತಿಳಿಸಿದರು.

“ಕಳೆದ ವಾರವಷ್ಟೇ ಗೂಗಲ್‌ ಪೇ, ಫೋನ್‌ ಪೇ ಮೂಲಕ ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ಆರು ಜನ ನೌಕರರನ್ನು ಅಮಾನತುಗೊಳಿಸಲಾಗಿದೆ. ಇನ್ನೂ ಕೆಲವರ ವಿರುದ್ಧ ತನಿಖೆ ಮುಂದುವರಿದಿದೆ. ದೃಢಪಟ್ಟ ತಕ್ಷಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಇದರ ಜತೆಗೆ ಮುಂಬರುವ ದಿನಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು ಇದಕ್ಕೆ ಕಡಿವಾಣ ಹಾಕಲಿಕ್ಕೂ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.