ಗಂಗಾವತಿ: ಹೊರ ವಲಯದ ಐಟಿಐ ಕಾಲೇಜ್ ಹಿಂಭಾಗದ ಗುಡ್ಡದಲ್ಲಿ ಚಿರತೆಗಳ ಪ್ರತ್ಯಕ್ಷ
Team Udayavani, Dec 15, 2022, 9:44 AM IST
ಗಂಗಾವತಿ: ನಗರದ ಹೊರವಲಯದ ಐಟಿಐ ಕಾಲೇಜು ಹಿಂಭಾಗದ ಗುಡ್ಡಪ್ರದೇಶದಲ್ಲಿ ಗುರುವಾರ ಬೆಳ್ಳಂಬೆಳ್ಳಿಗ್ಗೆ ವಾಕಿಂಗ್ ಗೆ ತೆರಳಿದವರಿಗೆ ಚಿರತೆಗಳು ಪ್ರತ್ಯಕ್ಷವಾಗಿದ್ದು, ಐಟಿಐ ಕಾಲೇಜು ರಸ್ತೆಯಲ್ಲಿ ವಾಕಿಂಗ್ ಗೆ ತೆರಳುವವರು ಆತಂಕಗೊಂಡಿದ್ದಾರೆ.
ಐಟಿಐ ಕಾಲೇಜು ಹಿಂಭಾಗದ ಗುಡ್ಡ, ಸಿದ್ದಿಕೇರಿ, ಸೂರ್ಯನಾಯಕನ ತಾಂಡ, ವಾಣೀಭದ್ರೇಶ್ವರ ಗುಡ್ಡ ಸೇರಿದಂತೆ ಇಲ್ಲಿ ಗುಡ್ಡ ಬೆಟ್ಟಗಳಲ್ಲಿ ಚಿರತೆಗಳು ಕಂಡುಬಂದಿದ್ದು, ಕೆಲ ಗ್ರಾಮಗಳಲ್ಲಿ ಜನಜಾನುವಾರುಗಳ ಮೇಲೆ ದಾಂಧಲೆ ನಡೆಸಿವೆ.
ಅರಣ್ಯ ಇಲಾಖೆ ಚಿರತೆ ಮತ್ತು ಕರಡಿಗಳನ್ನು ಸೆರೆ ಹಿಡಿಯಲು ಬೋನ್ ಗಳನ್ನು ಇರಿಸಿದ್ದು, ಕಳೆದ ವಾರ ಉಡುಮಕಲ್ ಗಡ್ಡಿ ಗ್ರಾಮದ ಹೊರಗೆ ಇರಿಸಿದ್ದ ಬೋನ್ ಗೆ ಚಿರತೆ ಬಿದ್ದಿತ್ತು. ಇದೀಗ ಸಂಗಾಪೂರ ಮತ್ತು ಅಂಜನಾದ್ರಿ, ಪಂಪಾಸರೋವರ ಭಾಗದಲ್ಲಿ ಚಿರತೆಗಳು ಹಗಲಿನಲ್ಲಿಯೇ ಪ್ರತ್ಯಕ್ಷವಾಗಿ ಜನರಿಗೆ ಆತಂಕ ಉಂಟು ಮಾಡಿವೆ.
ಅರಣ್ಯ ಇಲಾಖೆ ವೈಜ್ಞಾನಿಕ ತಂತ್ರಗಳನ್ನು ಬಳಸಿ ಕಾಡು ಪ್ರಾಣಿಗಳಿಂದ ಜನ-ಜಾನುವಾರುಗಳಿಗೆ ರಕ್ಷಣೆ ನೀಡಬೇಕೆಂದು ಗುರುವಾರ ಬೆಳ್ಳಿಗ್ಗೆ ಗುಡ್ಡದ ಬಂಡೆಯ ಮೇಲೆ ಮಲಗಿದ್ದ ಚಿರತೆಯನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದ ವಿರೇಶ ಆರತಿ ಎಂಬವರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ