ಸಾಲ ತೀರಿಸಲು ರಕ್ತ ಚಂದನ ದಂಧೆಗಿಳಿದ ಯುವಕ

ಸ್ನೇಹಿತನ ಸಲಹೆಯಂತೆ ಆರೋಪಿಯು ರಕ್ತ ಚಂದನ ಮಾರಾಟಕ್ಕೆ ಮುಂದಾಗಿದ್ದ.

Team Udayavani, Dec 15, 2022, 11:39 AM IST

ಸಾಲ ತೀರಿಸಲು ರಕ್ತ ಚಂದನ ದಂಧೆಗಿಳಿದ ಯುವಕ

ಬೆಂಗಳೂರು: ರಕ್ತ ಚಂದನ ಮಾರಾಟ ದಂಧೆ ಕಥಾಹಂದರವುಳ್ಳ ಪುಷ್ಪಾ ಸಿನಿಮಾ ರೀತಿ ರಕ್ತ ಚಂದನ ಮಾರಾಟಕ್ಕೆ ಇಳಿದಿದ್ದ ಯುವಕನೊಬ್ಬ ಬಾಣಸವಾಡಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ರಾಮನಗರ ಚನ್ನಪಟ್ಟಣದ ನಿವಾಸಿ ಕೂಟಕಲ್ಲೇಗೌಡ ಅಲಿಯಾಸ್‌ ಅಭಿ (27) ಬಂಧಿತ. ಆತನಿಂದ 12 ಲಕ್ಷ ರೂ. ಮೌಲ್ಯದ 1 ಕ್ವಿಂಟಲ್‌ ತೂಕದ ರಕ್ತ ಚಂದನ ಹಾಗೂ ಟೊಯೋಟಾ ಇಟಿಯೋಸ್‌ ಕಾರನ್ನು ಜಪ್ತಿ ಮಾಡಲಾಗಿದೆ.

ಆರೋಪಿ ಅಭಿ ಚನ್ನಪಟ್ಟಣದಲ್ಲಿ ಜಿಮ್‌ ತೆರೆದಿದ್ದ. ಇದಕ್ಕೆ 25 ಲಕ್ಷ ರೂ. ಸಾಲ ಮಾಡಿದ್ದ. ಆದರೆ, ಜಿಮ್‌ನಲ್ಲಿ ಆತ ನಿರೀಕ್ಷಿಸಿದಷ್ಟು ವ್ಯವಹಾರ ನಡೆಯದ ಕಾರಣ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲ ಕೊಟ್ಟವರು ಸಾಲ ಹಿಂತಿರುಗಿಸುವಂತೆ ಒತ್ತಡ ಹಾಕುತ್ತಿದ್ದರು. ಈ ವಿಚಾರವನ್ನು ರಾಮನಗರದಲ್ಲಿರುವ ತನ್ನ ಸ್ನೇಹಿತನೊಬ್ಬನ ಬಳಿ ಹೇಳಿಕೊಂಡಿದ್ದ.

ಆರೋಪಿ ಅಭಿಯ ಸ್ಥಿತಿ ಕಂಡು ಅನುಕಂಪದಿಂದ ಆತನ ಸ್ನೇಹಿತ ತನ್ನ ಬಳಿಯಿದ್ದ ರಕ್ತ ಚಂದದ ತುಂಡುಗಳನ್ನು ಕೊಟ್ಟಿದ್ದ. ಇದಕ್ಕೆ ಬೆಂಗಳೂರಿನಲ್ಲಿ ಹೆಚ್ಚಿನ ಬೇಡಿಕೆ ಇದೆ. ಯಾರಿಗೂ ತಿಳಿಯದಂತೆ ರಾಮನಗರದಿಂದ ಕಾರಿನಲ್ಲಿ ಬೆಂಗಳೂರಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುವಂತೆ ಸಲಹೆ ನೀಡಿದ್ದ. ಇದಾದ ಕೆಲ ದಿನಗಳಲ್ಲಿ ಆತನ ಸ್ನೇಹಿತ ಅನಾರೋಗ್ಯದಿಂದ ಮೃತಪಟ್ಟಿದ್ದ. ಇತ್ತ ಸ್ನೇಹಿತನ ಸಲಹೆಯಂತೆ ಆರೋಪಿಯು ರಕ್ತ ಚಂದನ ಮಾರಾಟಕ್ಕೆ ಮುಂದಾಗಿದ್ದ.

ಗಿರಾಕಿಗಳನ್ನು ಹುಡುಕುತ್ತಿದ್ದಾಗ ಸಿಕ್ಕಿಬಿದ್ದ:
ಡಿ.12ರಂದು ಸಂಜೆ 4 ಗಂಟೆಗೆ ಬಾಣಸವಾಡಿ ಮುಖ್ಯ ರಸ್ತೆಯನ್ನು ಅಗ್ನಿಶಾಮಕ ದಳ ಠಾಣೆಯ ಸಮೀಪದ ಪೂಜಾ ದೋಸೆ ಕ್ಯಾಂಪ್‌ ರಸ್ತೆಯಲ್ಲಿ ಟಾಟಾ ಇಟಿಯೋಸ್‌ ಕಾರಿನಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಇಟ್ಟುಕೊಂಡು ಮಾರಾಟ ಮಾಡಲು ಗಿರಾಕಿಗಳನ್ನು ಹುಡುಕುತ್ತಿದ್ದ. ವ್ಯಕ್ತಿ ಯೊಬ್ಬ ಅನುಮಾನಾಸ್ಪದ ವಸ್ತುಗಳನ್ನು ಕಾರಿನಲ್ಲಿಟ್ಟು ತಿರುಗಾಡುತ್ತಿರುವ ಬಗ್ಗೆ ಬಾಣಸವಾಡಿ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಈ ಸುಳಿವಿನ ಆಧಾರದ ಮೇಲೆ ಬಾಣಸವಾಡಿ ಮುಖ್ಯರಸ್ತೆಯ ಕೆಲ ಭಾಗಗಳಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸಿದ್ದರು. ಆರೋಪಿಯ ಕಾರಿನ ಡಿಕ್ಕಿ ಪರಿಶೀಲಿಸಿದಾಗ ರಕ್ತ ಚಂದನ ಪತ್ತೆಯಾಗಿದೆ.

ರಕ್ತ ಚಂದನದ ಮೂಲ ಪತ್ತೆ ಹಚ್ಚುವುದೇ ಸವಾಲು
ತನ್ನ ಸ್ನೇಹಿತನಿಗೆ ರಕ್ತ ಚಂದನದ ತುಂಡು ಎಲ್ಲಿಂದ ಸಿಕ್ಕಿದೆ ಎಂಬುದು ನನಗೂ ತಿಳಿದಿಲ್ಲ ಎಂದು ವಿಚಾರಣೆ ವೇಳೆ ಆರೋಪಿಯು ಪೊಲೀಸರಿಗೆ ತಿಳಿಸಿದ್ದಾನೆ. ಇದೀಗ ಆತನ ಸ್ನೇಹಿತ ಮೃತಪಟ್ಟಿರುವ ಕಾರಣ ರಕ್ತ ಚಂದನದ ಮೂಲ ಪತ್ತೆ ಹಚ್ಚುವುದೇ ಪೊಲೀಸರಿಗೆ ಸವಾಲಾಗಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.