ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು
Team Udayavani, Dec 15, 2022, 6:00 AM IST
ಉಡುಪಿ : ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿ ಬ್ರಹ್ಮಾವರ ನಾಲ್ಕುದ್ರು ನಿವಾಸಿ ಭಾಸ್ಕರ ನಾಯ್ಕಗೆ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ, ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿದೆ.
ಟ್ಯಾಕ್ಸಿಕ್ಯಾಬ್ ಬಾಡಿಗೆ ನಡೆಸುತ್ತಿದ್ದ ಈತ ಶಾಲಾ ವಿದ್ಯಾರ್ಥಿಗಳನ್ನು ಶಾಲೆಗೆ ಬಿಡುವ ಕೆಲಸ ಮಾಡುತ್ತಿದ್ದನು. 2020ರ ಎ.18ರಂದು ಈತ ನೊಂದ ಬಾಲಕಿಯ ಸಂಬಂಧಿಕರ ಮನೆಗೆ ಶುಭ ಸಮಾರಂಭಕ್ಕೆ ತನ್ನ ಕ್ಯಾಬ್ನೊಂದಿಗೆ ಬಾಡಿಗೆಗೆ ಬಂದಿದ್ದ. ನೊಂದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಮೊಬೈಲ್ ನಂಬರ್ ಪಡೆದು ಸಂಪರ್ಕಿಸಿದ್ದ. ಅನಂತರ ಆಕೆಯನ್ನು ಹೆದರಿಸಿ ಸಂತೆಕಟ್ಟೆ -ಪೆರ್ಡೂರು ರಸ್ತೆ ಬದಿಯಲ್ಲಿ ತನ್ನ ವಾಹನದಲ್ಲಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿದ್ದ. ಅನಂತರ ಆಕೆ ಶಾಲೆಗೆ ಹೋಗುತ್ತಿರುವಾಗ ತನ್ನ ಕ್ಯಾಬ್ ನಲ್ಲಿ ಕರೆದೊಯ್ದು ಬಾರಕೂರು-ಹಾಲಾಡಿ ರಸ್ತೆ ಬದಿ ಮತ್ತು ಆಲ್ತಾರು ಕ್ರಾಸ್ ಬಳಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿದ್ದ.
ಈ ವಿಚಾರವನ್ನು ಯಾರಲ್ಲೂ ಹೇಳದಂತೆ ಬೆದರಿಕೆ ಹಾಕಿದ್ದ. ನೊಂದ ಬಾಲಕಿಯು ತಾಯಿ ಬಳಿ ವಿಚಾರ ತಿಳಿಸಿದ್ದು, ಅದರಂತೆ ದೂರು ದಾಖಲು ಮಾಡಲಾಗಿತ್ತು. ಅನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ. ಮಹಿಳಾ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಸಂಪತ್ ಕುಮಾರ್ ತನಿಖೆ ನಡೆಸಿದ್ದು, ಅನಂತರ ಪೊಲೀಸ್ ನಿರೀಕ್ಷಕ ಸೀತಾರಾಮ್ ಆರೋಪಿ ವಿರುದ್ಧ
ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
28 ಸಾಕ್ಷಿಗಳ ಪೈಕಿ 17 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಆರೋಪಿಯ ಮೇಲಿನ ಆರೋಪ ಸಾಬೀತಾಗಿರುವುದಾಗಿ ಅಭಿಪ್ರಾಯ ಪಟ್ಟ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು 20 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದರು. ಪ್ರಾಸಿಕ್ಯೂಶನ್ ಪರ ಉಡುಪಿ ಪೋಕ್ಸೋ ನ್ಯಾಯಾಲಯ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ