ಪಿಎಂ ಕಿಸಾನ್‌ ರೈತರಿಗೆ ವರದಾನ


Team Udayavani, Dec 16, 2022, 6:30 AM IST

ಪಿಎಂ ಕಿಸಾನ್‌ ರೈತರಿಗೆ ವರದಾನ

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಹಲವು ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿಯೇ ಇರುವುದಿಲ್ಲ. ಎಷ್ಟೋ ಯೋಜನೆಗಳು ಮಾಹಿತಿ ಇದ್ದವರ ಅಥವಾ ಪ್ರಭಾವಿಗಳ ಪಾಲಾಗುತ್ತವೆ. ಕೆಲವು ಸಂದರ್ಭಗಳಲ್ಲಿ ಅಗತ್ಯವಿರುವ ಜನರಿಗೆ ಈ ಮಾಹಿತಿಗಳು ತಲುಪುವುದೇ ಇಲ್ಲ. ಅರ್ಹರಿಗೆ ವಿವಿಧ ಯೋಜನೆಗಳ ಪ್ರಯೋಜನ ಸಿಗಬೇಕೆನ್ನುವ ಉದ್ದೇಶದಿಂದ ಈ “ಪ್ರಯೋಜನ’ ಅಂಕಣ.

ರೈತರ ಆರ್ಥಿಕ ಸಶಕ್ತೀಕರಣಕ್ಕೆ ಪಿಎಂ ಕಿಸಾನ್‌ ಯೋಜನೆ ಸಹಕಾರಿಯಾಗಿದೆ.
2019ರಲ್ಲಿ ಆರಂಭವಾದ ಈ ಯೋಜನೆಯಡಿ 2 ಎಕ್ರೆಗಿಂತ ಒಳಗಡೆ ಇರುವ ರೈತರು ದಾಖಲಾತಿ ಸಲ್ಲಿಸಿ ಯೋಜನೆಯ ಫ‌ಲಾನುಭವಿಗಳಾಗಬಹುದು. ಈ ಯೋಜನೆಯಡಿ ವಾರ್ಷಿಕ 3 ಕಂತುಗಳಂತೆ ಕೇಂದ್ರ ಸರಕಾರ 6 ಸಾವಿರ ರೂ., ರಾಜ್ಯ ಸರಕಾರ 2 ಸಾವಿರದಂತೆ ವಾರ್ಷಿಕ ಎರಡು ಕಂತುಗಳಲ್ಲಿ 4 ಸಾವಿರ ರೂ.ಗಳನ್ನು ರೈತರ ಖಾತೆಗೆ ಜಮೆ ಮಾಡಲಿದೆ. ಈಗಾಗಲೇ ಕೇಂದ್ರ ಸರಕಾರ 53.83 ಲಕ್ಷ, ರಾಜ್ಯ ಸರಕಾರ 34.26 ಲಕ್ಷ ರೈತರಿಗೆ ಆರ್ಥಿಕ ನೆರವು ನೀಡಿದೆ. ವಿವಿಧ ಕಾರಣಗಳಿಂದಾಗಿ ಬಿಟ್ಟು ಹೋಗಿದ್ದ ರೈತರು ಸಮರ್ಪಕ ದಾಖಲಾತಿ ಒದಗಿಸುತ್ತಿದ್ದು ಫ‌ಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ.

ಅರ್ಜಿ ಸಲ್ಲಿಕೆ ಮಾಡುವ ಕೇಂದ್ರಗಳು ಯಾವುವು?
– ಬಾಪೂಜಿ ಸೇವಾ ಕೇಂದ್ರ
– ರೈತ ಸಂಪರ್ಕ ಕೇಂದ್ರ
– ಅಟಲ್‌ ಜೀ ಜನಸ್ನೇಹಿ ಕೇಂದ್ರ
– ಇತರ ಯಾವುದೇ ಸರಕಾರಿ ಸೇವಾ ಕೇಂದ್ರ

ಖಾತೆಗೆ ಹಣ ಬರದಿದ್ದರೆ ಏನು ಮಾಡಬೇಕು?
– http://pmkisan.gov.in ವೆಬ್‌ಸೈಟ್‌ ಅನ್ನು ತೆರೆಯಿರಿ
– ವೆಬ್‌ಸೈಟ್‌ ಮುಖಪುಟದಲ್ಲಿ ರೈತರ ಕಾರ್ನರ್‌ ಎಂಬ ಪ್ರತ್ಯೇಕ ವಿಭಾಗ ಸಿಗಲಿದೆ
– ರೈತರ ಕಾರ್ನರ್‌ ಎಂಬ ವಿಭಾಗದಲ್ಲಿ “ಫ‌ಲಾನು ಭವಿ ಸ್ಥಿತಿ’ ಎಂಬ ಟ್ಯಾಬ್‌ ಇದ್ದು ಕ್ಲಿಕ್‌ ಮಾಡಿ
– ಇದಕ್ಕೆ ಪರ್ಯಾಯವಾಗಿ, ನೀವು ನೇರವಾಗಿ https://pmkisan.gov.in/Beneficiary Status.aspx ಲಿಂಕ್‌ ತೆರೆಯಬಹುದು
– ಅನಂತರ ಆಧಾರ್‌ ಸಂಖ್ಯೆ, ಪಿಎಂ ಕಿಸಾನ್‌ ಖಾತೆ ಸಂಖ್ಯೆ ಅಥವಾ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆ ನಮೂದಿಸಿ
– ವಿವರ ಭರ್ತಿ ಮಾಡಿ, ಗೆಟ್‌ ಡೇಟಾ ಆಯ್ಕೆ ಮೇಲೆ ಕ್ಲಿಕ್‌ ಮಾಡಿದರೆ ಫ‌ಲಾನುಭವಿ ಸ್ಥಿತಿ ನೋಡಲು ಸಾಧ್ಯವಾಗುತ್ತದೆ.

ಅರ್ಹತೆ/ ದಾಖಲೆ ಏನೇನು ಬೇಕು?
– ಸಣ್ಣ ಪ್ರಮಾಣದ ಭೂ ಹಿಡುವಳಿ ಹೊಂದಿರುವ ರೈತರಾಗಿರಬೇಕು
– ಭೂಮಿ ಹೊಂದಿರುವ ಸಂಘ/ ಸಂಸ್ಥೆಗಳು
– ಪಹಣಿ
– ಆಧಾರ್‌ ನಂಬರ್‌ ಲಿಂಕ್‌ ಹೊಂದಿರುವ ಬ್ಯಾಂಕ್‌ ಖಾತೆ ಸಂಖ್ಯೆ

ಹಣ ಬರದಿದ್ದರೆ ದೂರು ನೀಡುವುದು ಹೇಗೆ?
ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ 2,000ರೂ. ಹಣ ನಿಮ್ಮ ಖಾತೆಗೆ ಜಮೆ ಆಗದೆ ಇದ್ದರೆ ಮೊದಲು ನಿಮ್ಮ ಪ್ರದೇಶದ ಲೆಕ್ಕಾಧಿಕಾರಿ ಅಥವಾ ಕೃಷಿ ಅಧಿಕಾರಿಯನ್ನು ಸಂಪರ್ಕಿಸಬೇಕು. ಒಂದು ವೇಳೆ ಇವರಿಂದ ಸೂಕ್ತ ಸ್ಪಂದನೆ ಬಾರದಿದ್ದರೆ, ಇದಕ್ಕೆ ಸಂಬಂಧಿಸಿದಂತೆ ಇರುವ ಸಹಾಯವಾಣಿಗೆ ಕರೆ ಮಾಡಬಹುದು. ಸೋಮವಾರದಿಂದ ಶುಕ್ರವಾರದವರೆಗೆ PM&KISAN Help Desk ಗೆ ಕರೆ ಮಾಡಿ ನಿಮ್ಮ ಖಾತೆಗೆ ಹಣ ಜಮಾವಣೆ ಆಗಿಲ್ಲ ಎಂಬ ಮಾಹಿತಿ ನೀಡಬಹುದು. ಅಲ್ಲದೆ ನಿಮ್ಮ ಸ್ಥಳೀಯ ಕೃಷಿ ಅಧಿಕಾರಿ ನಿಮಗೆ ಸ್ಪಂದನೆ ಮಾಡಿಲ್ಲ ಎಂಬ ದೂರನ್ನೂ ನೀಡಬಹುದು. ಇದನ್ನು ಹೊರತುಪಡಿಸಿದರೆ ನೀವು pmkisan&ictgov.in ಇ-ಮೇಲ್‌ ಮೂಲಕವೂ ಸಂಪರ್ಕಿಸಬಹುದು. ಆಗಲೂ ಕ್ರಮ ಕೈಗೊಳ್ಳದಿದ್ದರೆ 011-23381092 (ನೇರ ಸಹಾಯವಾಣಿ) ಸಂಖ್ಯೆಗೆ ಕರೆ ಮಾಡಿ ನಿಮ್ಮ ಖಾತೆಗೆ ಹಣ ಜಮಾವಣೆ ಆಗದೇ ಇರುವ ವಿಷಯವನ್ನು ತಿಳಿಸಬಹುದು.

– ಹಾಗೆಯೇ ದಿಲ್ಲಿ (Delhi)ಯಲ್ಲಿರುವ ಕಚೇರಿ ನಂ. 011-23382401 ಕ್ಕೆ ಸಂಪರ್ಕಿಸಬಹುದು, ಇ-ಮೇಲ್‌ ಐಡಿ (ಟಞkಜಿsಚn-ಜಟ್ಟಿsಜಟv.ಜಿn) ಮೂಲಕವೂ ದೂರು ಸಲ್ಲಿಸಬಹುದು.

– ಹರೀಶ್‌ ಹಾಡೋನಹಳ್ಳಿ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.