ಡ್ರೋನ್‌ ಮೇಲೆ ಕಣ್ಗಾವಲು ಬಿಗಿ: ಪರವಾನಿಗೆ ಕಡ್ಡಾಯ, ನಿಯಮ ಉಲ್ಲಂಘಿಸಿದರೆ ಶಿಸ್ತುಕ್ರಮ


Team Udayavani, Dec 6, 2022, 7:45 AM IST

ಡ್ರೋನ್‌ ಮೇಲೆ ಕಣ್ಗಾವಲು ಬಿಗಿ: ಪರವಾನಿಗೆ ಕಡ್ಡಾಯ, ನಿಯಮ ಉಲ್ಲಂಘಿಸಿದರೆ ಶಿಸ್ತುಕ್ರಮ

ಮಂಗಳೂರು: ಅನಧಿಕೃತ ಡ್ರೋನ್‌ಗಳ ಬಳಕೆಗೆ ಕಡಿವಾಣ ಹಾಕಲು ಮಂಗಳೂರು ಪೊಲೀಸರು ಮುಂದಾಗಿದ್ದು ಡ್ರೋನ್‌ ನಿಯಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಿಸಲು ಸಿದ್ಧತೆ ನಡೆಸಿದ್ದಾರೆ.

ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಬೃಹತ್‌ ಕೈಗಾರಿಕೆಗಳು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರು, ತೈಲ ಸಂಗ್ರಹ ಕೇಂದ್ರ, ಧಾರ್ಮಿಕ ಕ್ಷೇತ್ರಗಳು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಪ್ರಮುಖ ಸೂಕ್ಷ್ಮ ತಾಣಗಳು ಇರುವುದರಿಂದ ಹಾಗೂ ಇತ್ತೀಚೆಗೆ ಕುಕ್ಕರ್‌ ಬಾಂಬ್‌ ಸ್ಫೋಟದ ಸಂದರ್ಭ ಬೆದರಿಕೆಯ ಸಂದೇಶಗಳು ಹರಿದಾಡಿದ ಹಿನ್ನೆಲೆಯಲ್ಲಿ ಭದ್ರತೆ
ಯನ್ನು ದೃಢಪಡಿಸುವ ಉದ್ದೇಶದಿಂದ ಕೇಂದ್ರ ನಾಗರಿಕ ವಿಮಾನ ಯಾನ ನಿರ್ದೇಶನಾಲಯ (ಡಿಜಿಸಿಎ) ರೂಪಿಸಿರುವ “ಡ್ರೋನ್‌ ನಿಯಮ-2021′ ರಂತೆ ಕ್ರಮಕ್ಕೆ ಮುಂದಾಗಿದ್ದಾರೆ.

ನಿಯಮವೇನು?
ನಿಯಮದಂತೆ ನ್ಯಾನೋ ಡ್ರೋನ್‌ (250 ಗ್ರಾಂ ವರೆಗಿನ ತೂಕ) ಹೊರತು ಉಳಿದೆಲ್ಲಾ ಡ್ರೋನ್‌ಗಳಿಗೆ ಡಿಜಿಸಿಎಯಿಂದ ಅನುಮತಿ ಕಡ್ಡಾಯ. ಡಿಜಿಸಿಎ ಅವರಿಂದ ಪಡೆದ ಯುಐಎನ್‌/ಯುಎಒಪಿಯ ಪ್ರತಿ, ಡ್ರೋನ್‌ನ ನಿರ್ದಿಷ್ಟ ಮಾಹಿತಿ, ಆಪರೇಟರ್‌ಗಳ ತರಬೇತಿ ಪ್ರಮಾಣಪತ್ರ, ಭೂಮಿ/ಆಸ್ತಿ ಮಾಲಕರ ಅನುಮತಿ ಪತ್ರ (ಡ್ರೋನ್‌ ಅನ್ನು ಟೇಕ್‌ ಆಫ್ ಮತ್ತು ಲ್ಯಾಂಡಿಂಗ್‌ ಮಾಡಲು ಬಳಸುವ ಪ್ರದೇಶಕ್ಕೆ ಮಾತ್ರ), ಡ್ರೋನ್‌ ಹಾರಿಸುವಾಗ ಏನಾದರೂ ಘಟನೆ/ಅಪಘಾತ ಸಂಭವಿಸಿದರೆ ಮೂರನೇ ವ್ಯಕ್ತಿಗೆ ಆಗುವ ಹಾನಿಯನ್ನು ಭರಿಸುವ ವಿಮೆ, ಮಾನ್ಯವಿರುವ ಪಿಪಿಸಿ ಮೊದಲಾದ ದಾಖಲೆಗಳನ್ನು ಪೊಲೀಸ್‌ ಕಮಿಷನರೆಟ್‌ ಕಚೇರಿ ಅಥವಾ ಸ್ಥಳೀಯ ಪೊಲೀಸ್‌ ಅಧಿಕಾರಿಗಳ ಕಚೇರಿಗೆ ನೀಡಬೇಕು. ಡ್ರೋನ್‌ ಹಾರಿಸಲು ಸೂಕ್ತ ಕಾರಣ ಹಾಗೂ ಸಂಬಂಧಪಟ್ಟ ದಾಖಲೆ ಸಲ್ಲಿಸಬೇಕು. ಅನುಮತಿ ಇಲ್ಲದೆ ಹಾರಿಸಿದರೆ ಏರ್‌ಕ್ರಾಫ್ಟ್ ಆ್ಯಕ್ಟ್ 1934ನ ಸೆಕ್ಷನ್‌ 10,11,11 ಎ ಮತ್ತು ಡ್ರೋನ್‌ ನಿಯಮಗಳು 2021ರ ನಿಯಮ 49 ಮತ್ತು 50ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ.

ಇಬ್ಬರಲ್ಲಷ್ಟೇ ಪರವಾನಿಗೆ!
ಕಮಿಷನರೆಟ್‌ ವ್ಯಾಪ್ತಿಯಲ್ಲಿ ಇದುವರೆಗೆ ನಿಯಮಾನುಸಾರ ಪರವಾನಿಗೆ ಪಡೆದಿರುವವರು ಇಬ್ಬರು ಮಾತ್ರ. ಡಿಜಿಸಿಎಯ ಡಿಜಿಟಲ್‌ ಸ್ಕೈ ಪ್ಲಾಟ್‌ಫಾರ್ಮ್ ಮೂಲಕ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿ ಆನ್‌ಲೈನ್‌ನಲ್ಲಿಯೇ ಅಗತ್ಯ ದಾಖಲೆ, ಮಾಹಿತಿಯನ್ನು ಸಲ್ಲಿಸಿ ಪರವಾನಿಗೆ ಪಡೆದುಕೊಳ್ಳಬಹುದಾಗಿದೆ.

ಕಡಿವಾಣ ಏಕೆ?
ಡ್ರೋನ್‌ಗಳನ್ನು ರಕ್ಷಣೆ, ಕಾನೂನು ಸುವ್ಯವಸ್ಥೆ, ಕೃಷಿ, ಗಣಿಗಾರಿಕೆ, ಸರ್ವೆಲೆನ್ಸ್‌, ತುರ್ತು ಕಾರ್ಯಾಚರಣೆ ಮೊದಲಾದವುಗಳಿಗೆ ಬಳಸಲಾಗು ತ್ತದೆ. ಕೆಲವೊಮ್ಮೆ ಇವುಗಳ ದುರುಪ ಯೋಗದ ಸಾಧ್ಯತೆ ಇರುವುದರಿಂದ ಮತ್ತು ಭದ್ರತೆಗೆ ಸವಾಲು ಎದುರಾಗುವ ಅಪಾಯ ಇರುವುದರಿಂದ ಡಿಜಿಸಿಎ ನಿಯಮಾವಳಿ ರೂಪಿಸಿದೆ.

ಬಳಕೆಯಲ್ಲಿರುವ ಡ್ರೋನ್‌ಗಳು
– 250 ಗ್ರಾಂ ವರೆಗಿನ ತೂಕದ್ದು
– 250 ಗ್ರಾಂನಿಂದ 2 ಕೆಜಿಯದ್ದು
– 2 ಕೆಜಿಗಿಂತ 25 ಕೆಜಿ ವರೆಗಿನ ತೂಕದ್ದು
– 25 ಕೆಜಿಗಿಂತ 150 ಕೆಜಿ ವರೆಗಿನ ತೂಕದ್ದು

ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮದುವೆ, ಪ್ರತಿಭಟನೆ, ವಿಐಪಿ ಕಾರ್ಯಕ್ರಮಗಳಲ್ಲಿ ಅವ್ಯಾಹತ ವಾಗಿ ಡ್ರೋನ್‌ಗಳ ಬಳಕೆ ಕಂಡು ಬಂದಿದೆ. ಆರಂಭದಲ್ಲಿ ಡ್ರೋನ್‌ ಹಾರಾಟ ನಿಯಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಬಳಿಕ ನಿಯಮ ಉಲ್ಲಂಘಿಸುವವರ ಡ್ರೋನ್‌ಗಳನ್ನು ವಶಪಡಿಸಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು.
– ಅನ್ಶುಕುಮಾರ್‌, ಮಂಗಳೂರು ಡಿಸಿಪಿ
– ಎನ್‌. ಶಶಿಕುಮಾರ್‌, ಪೊಲೀಸ್‌ ಆಯುಕ್ತ

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.