“ನಮ್ಮ ಕ್ಲಿನಿಕ್‌’ಗೆ ಬೇಗ ಬರಲಿ ಖಾಯಂ ವೈದ್ಯರು

ಪ್ರಯೋಗಾಲಯದಲ್ಲಿ ರಕ್ತದೊತ್ತಡ, ಮಧುಮೇಹ ತಪಾಸಣೆಗಳು ಮಾತ್ರ ಲಭ್ಯವಿದೆ

Team Udayavani, Dec 17, 2022, 6:31 PM IST

“ನಮ್ಮ ಕ್ಲಿನಿಕ್‌’ಗೆ ಬೇಗ ಬರಲಿ ಖಾಯಂ ವೈದ್ಯರು

ಗದಗ: ರಾಜ್ಯ ಬಿಜೆಪಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ನಗರ ಪ್ರದೇಶದ ಬಡವರು ಹಾಗೂ ದುರ್ಬಲ ವರ್ಗದವರಿಗೆ ಆರೋಗ್ಯ ಸೇವೆ ಕಲ್ಪಿಸುವ ಉದ್ದೇಶದಿಂದ ಡಿ.14ಂದು ಆರಂಭವಾಗಿರುವ “ನಮ್ಮ ಕ್ಲಿನಿಕ್‌’ಗೆ ಖಾಯಂ ವೈದ್ಯರ ನೇಮಕವಾಗ ಬೇಕಿದೆ.

ಗದಗ ನಗರದ ಜವಳಗಲ್ಲಿ, ಮುಂಡರಗಿಯ ದೋಸಗೇರ ಓಣಿ, ನರಗುಂದದ ಜಮಲಾಪುರ ಓಣಿ, ರೋಣದ ಹತ್ತಿಕೇರಿ ಹಾಗೂ ಶಿರಹಟ್ಟಿ ಪಟ್ಟಣದ ಅಂಬೇಡ್ಕರ್‌ ನಗರದಲ್ಲಿ “ನಮ್ಮ ಕ್ಲಿನಿಕ್‌’ಗಳು ಸೇವೆ ಆರಂಭಿಸಿವೆ. ರೋಣದಲ್ಲಿ ಮಾತ್ರ ವೈದ್ಯರ ನೇಮಕವಾಗಿದ್ದು, ಉಳಿದೆಡೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳಲಾಗುತ್ತಿದೆ.

ಇನ್ನುಳಿದಂತೆ 5 “ನಮ್ಮ ಕ್ಲಿನಿಕ್‌’ಗಳಲ್ಲಿ ನರ್ಸಿಂಗ್‌ ಸ್ಟಾಫ್‌, ಲ್ಯಾಬ್‌ ಟೆಕ್ನಿಷಿಯನ್‌ ಹಾಗೂ ಡಿ ದರ್ಜೆ ನೌಕರರು ಸೇವೆಗೆ ನಿಯೋಜನೆಗೊಂಡು ಕೆಲಸ ಆರಂಭಿಸಿದ್ದಾರೆ. ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳು, ರಕ್ತದೊತ್ತಡ, ಮಧುಮೇಹ ಸೇರಿದಂತೆ ಇತರೆ ಕಾಯಿಲೆಗಳಿಗೆ ಔಷ ಧಗಳು ಸಮರ್ಪಕವಾಗಿ ವಿತರಣೆಯಾಗುತ್ತಿವೆ. ಕೆಲವು ಔಷಧಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಬಳಸಿಕೊಳ್ಳಲಾಗುತ್ತಿದೆ.

ನಮ್ಮ ಕ್ಲಿನಿಕ್‌ನಲ್ಲಿ ಸ್ವಾಗತಕಾರರ ಹಾಗೂ ನಿರೀಕ್ಷಣಾ ಸ್ಥಳದ ಕೊಠಡಿ, ಔಷಧ ವಿತರಣಾ ಕೊಠಡಿ, ಪ್ರಯೋಗಾಲಯ, ಚಿಕಿತ್ಸೆಗೆ ಪ್ರತ್ಯೇಕ ಕೊಠಡಿಗಳನ್ನು ತೆರೆಯಲಾಗಿದೆ. ಆದರೆ, ಪ್ರಯೋಗಾಲಯದಲ್ಲಿ ರಕ್ತದೊತ್ತಡ, ಮಧುಮೇಹ ತಪಾಸಣೆಗಳು ಮಾತ್ರ ಲಭ್ಯವಿದೆ. ಲೀವರ್‌ ಸೇರಿ ಇನ್ನೂ 10 ಬಗೆಯ ಟೆಸ್ಟ್‌ಗಳ ಕಿಟ್‌ಗಳು ಬರಬೇಕಿದೆ.

ನಮ್ಮ ಕ್ಲಿನಿಕ್‌ಗೆ ಉತ್ತಮ ಸ್ಪಂದನೆ: ಈಗಾಗಲೇ ಆರಂಭವಾಗಿರುವ ನಮ್ಮ ಕ್ಲಿನಿಕ್‌ನಲ್ಲಿ ಕಳೆದ ಎರಡು ದಿನಗಳಿಂದ ನಿತ್ಯ 25ರಿಂದ 30 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ರಕ್ತದೊತ್ತಡ, ಮಧುಮೇಹದಂತಹ ಮಾತ್ರೆಗಳನ್ನು ಉಚಿತವಾಗಿ ಪಡೆದುಕೊಂಡು ನಮ್ಮ ಕ್ಲಿನಿಕ್‌ನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎನ್ನುತ್ತಾರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಜಗದೀಶ ನುಚ್ಚಿನ.

ನಮ್ಮ ಕ್ಲಿನಿಕ್‌ ಸೇವೆಗಳು: ತಾಯಿ ಆರೋಗ್ಯ-ಗರ್ಭಿಣಿ ಹಾಗೂ ಬಾಣಂತಿ ಸೇವೆಗಳು, ನವಜಾತ ಶಿಶು ಆರೈಕೆ ಹಾಗೂ ಚುಚ್ಚುಮದ್ದು ಸೇವೆಗಳು, ಮಕ್ಕಳು ಹಾಗೂ ಹದಿಹರೆಯದವರಿಗೆ ನೀಡುವ ಆರೋಗ್ಯ ಸೇವೆಗಳು, ಕುಟುಂಬ ಕಲ್ಯಾಣ ಯೋಜನೆಗಳ ಹಾಗೂ ಎಲ್ಲ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ನಿರ್ವಹಣೆ, ಮಧುಮೇಹ, ರಕ್ತದೊತ್ತಡ, ಕಣ್ಣು, ದಂತ ಹಾಗೂ ಮಾನಸಿಕ ಆರೋಗ್ಯ ಸೇವೆಗಳು ಮತ್ತು ತುರ್ತು ವೈದ್ಯಕೀಯ ಸೇವೆಗಳು ನಮ್ಮ ಕ್ಲಿನಿಕ್‌ನಲ್ಲಿ ದೊರೆಯಲಿವೆ. ಜೊತೆಗೆ 14 ವಿಧದ ಪ್ರಯೋಗಗಳು ನಡೆಯಲಿವೆ. ನಮ್ಮ ಕ್ಲಿನಿಕ್‌ ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 9ರಿಂದ ಸಂಜೆ 4.30ರ ವರೆಗೆ ಸೇವೆ ಸಲ್ಲಿಸಲಿದ್ದು, ಭಾನುವಾರ ರಜೆ ಇರಲಿದೆ.

11 ನಮ್ಮ ಕ್ಲಿನಿಕ್‌ಗಳಲ್ಲಿ 5 ಆರಂಭ: ಜಿಲ್ಲೆಯಲ್ಲಿ ಗಜೇಂದ್ರಗಡ 2, ರೋಣ 2, ನರಗುಂದ 2, ಶಿರಹಟ್ಟಿ 2, ಗದಗ, ಲಕ್ಷ್ಮೇಶ್ವರ ಹಾಗೂ ಮುಂಡರಗಿಯಲ್ಲಿ ತಲಾ 1 ಸೇರಿ ಒಟ್ಟು 11 ನಮ್ಮ ಕ್ಲಿನಿಕ್‌ಗಳು ಮಂಜೂರಾಗಿದ್ದು, 5 ಮಾತ್ರ ಆರಂಭಗೊಂಡಿವೆ. ಇನ್ನುಳಿದಂತೆ ನರಗುಂದ ಪಟ್ಟಣದ ಜಮಲಾಪೂರ, ರೋಣ ಪಟ್ಟಣದ ಜಗಜೀವನರಾಮ್‌ ನಗರ, ಗಜೇಂದ್ರಗಡ ಪಟ್ಟಣದ ಲಮಾಣಿ ಚಾಳ ಮತ್ತು ಜಿ.ಎಸ್‌. ಪಾಟೀಲ ನಗರ, ಶಿರಹಟ್ಟಿ ಪಟ್ಟಣದ ಕೆಳಗರ ಓಣಿ ಮತ್ತು ಲಕ್ಷೆ ¾àಶ್ವರ ಪಟ್ಟಣದ ಹರಿಜನ ಕೇರಿಯಲ್ಲಿ ನಮ್ಮ ಕ್ಲಿನಿಕ್‌ಗಳು ಆರಂಭಗೊಳ್ಳಬೇಕಿದೆ.

ಜಿಲ್ಲೆಯ ನಗರ ಪ್ರದೇಶದಲ್ಲಿನ ಬಡ ಹಾಗೂ ದುರ್ಬಲ ವರ್ಗದವರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಗುರಿಯೊಂದಿಗೆ ಆರಂಭಿಸಲಾಗುತ್ತಿರುವ ನಮ್ಮ ಕ್ಲಿನಿಕ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಪ್ರಸ್ತುತ 5 ನಮ್ಮ ಕ್ಲಿನಿಕ್‌ಗಳು ಆರಂಭಗೊಂಡಿದ್ದು, ಮುಂದಿನ ದಿನಗಳಲ್ಲಿ ಉಳಿದ 6 ನಮ್ಮ ಕ್ಲಿನಿಕ್‌ ಗಳನ್ನು ತೆರೆಯಲಾಗುವುದು.
ಡಾ|ಜಗದೀಶ ನುಚ್ಚಿನ, ಜಿಲ್ಲಾ ಆರೋಗ್ಯ
ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ

ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

3-mundaragi

Mundargi: ದುರಸ್ತಿ ಸಂದರ್ಭ ವಿದ್ಯುತ್‌ ಶಾಕ್‌ ; ಕೂಲಿಕಾರ ಸಾವು

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.