ಚಳಿಗಾಲದ ಅಧಿವೇಶನದಲ್ಲಿ 14 ವಿಧೇಯಕ ಮಂಡನೆ
Team Udayavani, Dec 19, 2022, 6:55 AM IST
ಸುವರ್ಣ ಸೌಧ: ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನದಲ್ಲಿ 14 ವಿಧೇಯಕ ಮಂಡನೆಯಾಗಲಿದೆ. ಇದರ ಜತೆಗೆ ಸದಸ್ಯರೊಬ್ಬರು ಖಾಸಗಿ ವಿಧೇಯಕ ಮಂಡನೆಗೂ ಅರ್ಜಿ ಸಲ್ಲಿಸಿದ್ದಾರೆ ಎಂದು ವಿಧಾನ ಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹೇಳಿದರು.
ಸುವರ್ಣ ಸೌಧದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸದಸ್ಯರು ಈ ಅಧಿವೇಶನದಲ್ಲಿ 1,452 ಪ್ರಶ್ನೆಗಳನ್ನು ಕೇಳಿದ್ದಾರೆ. ಇದನ್ನು 150ಕ್ಕೆ ಸೀಮಿತಗೊಳಿಸಿ, ಪ್ರತಿ ದಿನ 15 ಪ್ರಶ್ನೆಗಳಿಗೆ ಪ್ರಶ್ನೋತ್ತರದಲ್ಲಿ ಅವಕಾಶ ನೀಡಲಾಗುವುದು. 900ಕ್ಕೂ ಅಧಿಕ ಪ್ರಶ್ನೆಗಳಿಗೆ ಲಿಖೀತ ರೂಪದಲ್ಲಿ ಉತ್ತರ ನೀಡಲಾಗುವುದು ಎಂದರು.
ಸಮಯದ ಲಭ್ಯತೆಯ ಆಧಾರದಲ್ಲಿ ಸದನ ಸಲಹಾ ಸಮಿತಿಯ ತೀರ್ಮಾನದಂತೆ ಕೆಲ ವಿಷಯಗಳ ಚರ್ಚೆಗೂ ಅವಕಾಶ ನೀಡಲಾಗುವುದು. ಒಂದು ಖಾಸಗಿ ಮಸೂದೆ ಮಂಡಿಸುವ ಬಗ್ಗೆ ಮೇಲ್ಮನೆ ಸದಸ್ಯರಾದ ಎನ್. ರವಿಕುಮಾರ್ ಅವರು ಅರ್ಜಿ ಸಲ್ಲಿಸಿದ್ದಾರೆ. ಹಾಗೆಯೇ ಖಾಸಗಿ ನಿರ್ಣಯಕ್ಕೆ ಸಂಬಂಧಿಸಿದಂತೆ ಸದಸ್ಯರಾದ ಯು.ಬಿ.ವೆಂಕಟೇಶ್ ಅವರು ಅರ್ಜಿ ಸಲ್ಲಿದ್ದಾರೆ. ಇವುಗಳನ್ನು ಪರಿಶೀಲಿಸಿ, ಮುಂದಿನ ಕ್ರಮವಹಿಸಲಿದ್ದೇವೆ ಎಂದು ಹೇಳಿದರು.
ಸಭಾಪತಿ ಚುನಾವಣೆ
ಕಳೆದ 7 ತಿಂಗಳಿಂದ ಸಭಾಪತಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಡಿ.21ರಂದು ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಡಿ.20ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಸದ್ಯ ಸಭಾಪತಿ ಹುದ್ದೆಯಲ್ಲಿರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಮುಂದೆ ನಿರ್ಧರಿಸಲಾಗುವುದು ಎಂದು ಮಲ್ಕಾಪುರೆ ಹೇಳಿದರು.
ಸಲಹಾ ಸಮಿತಿ ನಿರ್ಧರಿಸಲಿದೆ: ಕಳೆದ ಅಧಿವೇಶನದಲ್ಲಿ ವಕ್ಫ್ ಆಸ್ತಿ ಕಬಳಿಕೆ ವರದಿಗೆ ಸಂಬಂಧಿಸಿದ ವಿಚಾರವನ್ನು ಸದಸ್ಯರೊಬ್ಬರು ಮಂಡಿಸಿದ ಸಂದರ್ಭದಲ್ಲಿ ಸರ್ಕಾರದ ಗಮನಕ್ಕೆ ತರಲಾಗಿತ್ತು ಮತ್ತು ಯಾವುದೇ ಸೂಚನೆ ಇಲ್ಲದೆ ಈ ರೀತಿ ವರದಿ ಮಂಡಿಸುವುದು ಸರಿಯಲ್ಲ ಎಂಬುದನ್ನು ಸೂಚಿಸಲಾಗಿತ್ತು. ಸಾಂವಿಧಾನಿಕ ಪರಂಪರೆಯಲ್ಲಿ ಆಡಳಿತಪಕ್ಷಕ್ಕೆ ಎಷ್ಟು ಜವಾಬ್ದಾರಿಯಿದೆಯೋ ಅಷ್ಟೇ ಜವಾಬ್ದಾರಿ ವಿರೋಧ ಪಕ್ಷಕ್ಕೂ ಇರುತ್ತದೆ. ಸಭಾಪತಿ ಪೀಠದ ಗಮನಕ್ಕೆ ಬಾರದೇ ಯಾವುದೇ ವಿಷಯ ಮಂಡನೆಯಾಗುವುದಿಲ್ಲ ಮತ್ತು ಅದಕ್ಕೆ ಅವಕಾಶ ನೀಡುವುದೂ ಇಲ್ಲ ಎಂದು ಮಲ್ಕಾಪುರೆ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ