ಉತ್ತರದ ಸಮಸ್ಯೆಗಳಿಗೆ ಸಿಗಲಿ ಅಧಿವೇಶನದ ಉತ್ತರ


Team Udayavani, Dec 19, 2022, 6:00 AM IST

ಉತ್ತರದ ಸಮಸ್ಯೆಗಳಿಗೆ ಸಿಗಲಿ ಅಧಿವೇಶನದ ಉತ್ತರ

ಬೆಳಗಾವಿಯಲ್ಲಿರುವ ಸುವರ್ಣಸೌಧದಲ್ಲಿ ಸೋಮವಾರ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಉತ್ತರ ಕರ್ನಾಟಕದವರ ನಿರೀಕ್ಷೆಗಳೂ ಹೆಚ್ಚಾಗಿವೆ. ಒಟ್ಟು 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದ್ದು, 14 ಮಸೂದೆಗಳು ಮಂಡನೆಯಾಗಲಿವೆ. ಗದ್ದಲಗಳಿಗೆ ಆಸ್ಪದ ನೀಡದೇ ಉತ್ತರ ಕರ್ನಾಟಕದ ಸಮಸ್ಯೆಗಳಿಗೇ ಹೆಚ್ಚಿನ ಒತ್ತು ಕೊಟ್ಟು ಚರ್ಚೆ ನಡೆಯಲಿ ಎಂಬುದು ಆಗ್ರಹವಾಗಿದೆ.

ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರ ಬೆಳಗಾವಿ ಗಡಿ ವಿವಾದದ ಬಗ್ಗೆ ಕಿಚ್ಚು ಹಚ್ಚಿದ್ದು, ಈ ಬಗ್ಗೆ ಇನ್ನೂ ವಿವಾದದ ಹೊಗೆ ಹಾರಾಡುತ್ತಲೇ ಇದೆ. ಇದರ ಮಧ್ಯೆಯೇ ಸೋಮವಾರ ಎಂಇಎಸ್‌ ಮಹಾಮೇಳಾವ ಹಮ್ಮಿಕೊಂಡಿದೆ. ಈಗಾಗಲೇ ಕರ್ನಾಟಕ ಸರಕಾರ ಅಲ್ಲಿನ ಯಾವುದೇ ಶಾಸಕರು, ಸಚಿವರು, ಸಂಸದರು ಇದರಲ್ಲಿ ಭಾಗವಹಿಸದಂತೆ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಆದರೂ ಇದು ವಿವಾದವಾಗುವ ಎಲ್ಲ ಲಕ್ಷಣಗಳು ತೋರುತ್ತಿವೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಿ, ಬೆಳಗಾವಿ ಗಡಿ ವಿವಾದಕ್ಕೊಂದು ಶಾಶ್ವತ ಮುಕ್ತಿ ಸಿಗುವಂತೆ ನೋಡಿಕೊಳ್ಳಬೇಕಿದೆ.

ಇದರ ಜತೆಗೇ ಕಬ್ಬು ಬೆಳೆಗಾರರು ಹೋರಾಟಕ್ಕೆ ಸಜ್ಜಾಗಿದ್ದಾರೆ. ಕೇಂದ್ರ ಸರಕಾರ ಘೋಷಿಸಿರುವ ಪ್ರತೀ ಟನ್‌ಗೆ 3,050 ರೂ.ಗಳ ಜತೆಗೆ ರಾಜ್ಯ ಸರಕಾರವೂ 500 ರೂ. ಸೇರಿಸಿಕೊಡಬೇಕು ಎಂದು ಕಬ್ಬು ಬೆಳೆಗಾರರು ಆಗ್ರಹಿಸುತ್ತಿದ್ದಾರೆ. ಬೆಳಗಾವಿ ಭಾಗದಲ್ಲೇ ಹೆಚ್ಚು ಕಬ್ಬು ಬೆಳೆಯುವುದರಿಂದ ಈ ಅಧಿವೇಶನದಲ್ಲಿ ತಮ್ಮ ಬೇಡಿಕೆಗೆ ಒಪ್ಪಿಗೆ ಸಿಗಬಹುದು ಎಂಬುದು ಅವರ ಆಶಯವಾಗಿದೆ.

ಹಾಗೆಯೇ ಕಳೆದ 15 ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದು, ಇಲ್ಲಿನವರ ಸಮಸ್ಯೆಗಳಿಗೆ ಇದು ಉತ್ತರ ಕಂಡುಕೊಳ್ಳುವ ಯತ್ನ ಎಂದೇ ಭಾವಿಸಲಾಗಿದೆ. ಆದರೆ ಇದುವರೆಗೆ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡುವ ಪ್ರಯತ್ನವಾಗಿಲ್ಲ ಎಂಬ ಆರೋಪಗಳೂ ಕೇಳಿಬರುತ್ತಿವೆ. ಬೆಳಗಾವಿಯ ಮೊದಲ ಅಧಿವೇಶನ ದಲ್ಲಿಯೇ ಮಹಾದಾಯಿ, ಕಳಸಾ-ಬಂಡೂರಿ, ಕೃಷ್ಣಾ ಮೇಲ್ದಂಡೆ ಯೋಜನೆ ಸಹಿತ ಅನೇಕ ನೀರಾವರಿ ಯೋಜನೆಗಳು, ಉತ್ತರದ ಅಭಿವೃದ್ಧಿ ಬಗ್ಗೆ ಚರ್ಚೆಯಾಗಿವೆಯೇ ವಿನಾ ಫಲ ನಗಣ್ಯವಾಗಿದೆ.

ಏಕೆಂದರೆ ಮಹಾದಾಯಿ, ಕಳಸಾಬಂಡೂರಿ ಯೋಜನೆಗಳು ಜಾರಿಯಾಗಿಲ್ಲ. ಯುಕೆಪಿ-3ನೇ ಹಂತದ ಯೋಜನೆ, ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚೆಯಾಗುತ್ತದೆ. ಆದರೂ ನಿರೀಕ್ಷಿತ ಫ‌ಲ ಸಿಕ್ಕಿಲ್ಲ. ಹೀಗಾಗಿ ಈ ಅಧಿವೇಶನದ ವೇಳೆಗಾದರೂ ಸರಕಾರ ಮತ್ತು ವಿಪಕ್ಷಗಳು, ಉತ್ತರ ಕರ್ನಾಟಕದ ಸಮಸ್ಯೆಗಳತ್ತ ಕಿವಿಗೊಟ್ಟು ಕೇಳಿ, ಚರ್ಚೆ ನಡೆಸಬೇಕಾಗಿದೆ. ಹಾಗೆಯೇ ಬಾಕಿ ಉಳಿದಿರುವ ಯೋಜನೆಗಳನ್ನು ಶೀಘ್ರದಲ್ಲೇ ಮುಗಿಸುವ ಬಗ್ಗೆಯೂ ಗಮನ ಹರಿಸಬೇಕಾಗಿದೆ.

ಚಿಲುಮೆ ಮತದಾರರ ಪಟ್ಟಿ ಕಳವು, ಕುಕ್ಕರ್‌ ಬ್ಲಾಸ್ಟ್‌ ಮತ್ತು ಈ ಕುರಿತ ಕೆಪಿಸಿಸಿ ಅಧ್ಯಕ್ಷರ ಹೇಳಿಕೆ, 40 ಪರ್ಸೆಂಟ್‌ ಕಮಿಷನ್‌, ಗಡಿ ಸಮಸ್ಯೆಯಂಥ ವಿಚಾರಗಳೂ ಚರ್ಚೆಗೆ ಬರುವ ಸಾಧ್ಯತೆಗಳಿವೆ. ಈ ಬಗ್ಗೆಯೂ ಸರಕಾರ ಮತ್ತು ವಿಪಕ್ಷಗಳು ಸಮನ್ವಯದಿಂದ ವರ್ತಿಸಿ, ಇವುಗಳ ಚರ್ಚೆ ಜತೆಗೇ ಉತ್ತರ‌ ಕರ್ನಾಟಕದ ಕಲ್ಯಾಣಕ್ಕೆ ಮಾಡಬೇಕಾಗಿರುವ ಕೆಲಸಗಳೇನು ಎಂಬ ಬಗ್ಗೆ ನೋಡಬೇಕಾಗಿದೆ. ಇದನ್ನು ಬಿಟ್ಟು 10 ದಿನಗಳು ಬೆಳಗಾವಿಯಲ್ಲಿದ್ದು, ಯಾವುದೇ ಫ‌ಲಪ್ರದವಾಗುವಂಥ ಚರ್ಚೆ ನ‚ಡೆಯದೇ ಹೋದರೆ, ಉತ್ತರ ಕರ್ನಾಟಕದ ಜನತೆಗೆ ಮೋಸ ಮಾಡಿದಂತಾಗುತ್ತದೆ.

ಟಾಪ್ ನ್ಯೂಸ್

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.