ಪೌರ ಕಾರ್ಮಿಕರಿಗಾಗಿ ಜಿ-2 ಮಾದರಿ ವಸತಿಗೃಹ; : ಸಿಂಗಾಣಿಯಲ್ಲಿ ಜಾಗ ಪರಿಶೀಲನೆ

ಅಮೃತ ನಿರ್ಮಲ ನಗರ ಯೋಜನೆ ಅಡಿಯಲ್ಲಿ 12 ಲಕ್ಷ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ

Team Udayavani, Dec 19, 2022, 1:15 PM IST

ಪೌರ ಕಾರ್ಮಿಕರಿಗಾಗಿ ಜಿ-2 ಮಾದರಿ ವಸತಿಗೃಹ; : ಸಿಂಗಾಣಿಯಲ್ಲಿ ಜಾಗ ಪರಿಶೀಲನೆ

ಪುತ್ತೂರು: ವಸತಿ ರಹಿತ ಪೌರಕಾರ್ಮಿಕರಿಗೆ ವಸತಿ ನಿರ್ಮಾಣಕ್ಕೆ ನಗರಸಭೆ ಯೋಜನೆ ರೂಪಿಸಿದ್ದು ಎಲ್ಲವೂ ಅಂದುಕೊಂಡಂತೆ ಸಾಗಿದರೆ ನಗರದ ಸಿಂಗಾಣಿ ಬಳಿ ವಸತಿಗೃಹ ತಲೆ ಎತ್ತಲಿದೆ.

ನಗರದ ಸ್ವಚ್ಛತೆಯಲ್ಲಿ ದಿನ ನಿತ್ಯ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಸೂರು ಒದಗಿಸುವ ಪ್ರಯತ್ನದ ಅಂಗವಾಗಿ ವಸತಿಗೃಹ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ.

ನಗರೋತ್ಥಾನದಲ್ಲಿ ಅನುದಾನ
ವಸತಿ ಗೃಹ ನಿರ್ಮಾಣಕ್ಕೆ ನಗರೋತ್ಥಾನದಲ್ಲಿ 1.19 ಕೋಟಿ ರೂ. ಅನುದಾನ ಇರಿಸಲಾಗಿದೆ. ಈಗಾಗಲೇ ಬಲಾ°ಡಿನಲ್ಲಿ 1 ಎಕ್ರೆ ಜಾಗ ಗುರುತಿಸಲಾಗಿದ್ದರೂ ಅದು ಡೀಮ್ಡ್ ಫಾರೆಸ್ಟ್‌ ವ್ಯಾಪ್ತಿಯೊಳಗೆ ಬರುವ ಕಾರಣ ಅಲ್ಲಿ ನಿರ್ಮಾಣ ಅಸಾಧ್ಯ. ಅದರ ಬದಲು ನಗರದ ಸಿಂಗಾಣಿಯಲ್ಲಿ ಜಾಗ ಪರಿಶೀಲಿಸಲಾಗಿದ್ದು ಅಲ್ಲಿ 30 ಸೆಂಟ್ಸ್‌ ಜಾಗ ಲಭ್ಯವಿದೆ. ಜಾಗ ಗುರುತಿಸುವಿಕೆ ಅಂತಿಮವಾದಲ್ಲಿ ಅಲ್ಲಿ ವಸತಿಗೃಹ ನಿರ್ಮಿಸುವ ಉದ್ದೇಶ ಹೊಂದಲಾಗಿದೆ.

ಜಿ- 2 ಮಾದರಿಯ ವಸತಿಗೃಹ
ಪುತ್ತೂರು ನಗರಸಭೆಯಲ್ಲಿ ಒಟ್ಟು 88 ಪೌರಕಾರ್ಮಿಕ ಮಂಜೂರಾತಿ ಹುದ್ದೆಗಳಿವೆ. ಇದರಲ್ಲಿ 11 ಮಂದಿ ಪೂರ್ಣಕಾಲಿಕ ಸಿಬಂದಿಗಳಿದ್ದಾರೆ. 41 ಮಂದಿ ನೇರ ಪಾವತಿಯ ಸಿಬಂದಿಗಳಿದ್ದಾರೆ. ಉಳಿದ ಹುದ್ದೆಗಳು ಖಾಲಿಯಿವೆ. ಇದರ ಪೈಕಿ ಅತೀ ಹೆಚ್ಚಿನ ಸಿಬಂದಿ ಹೊರ ಜಿಲ್ಲೆಯವರು.

ಪ್ರಸ್ತುತ ಅವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಅಂಥವರಿಗೆ ವಸತಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಜಿ-2 ಮಾದರಿಯ ವಸತಿ ಗೃಹ ನಿರ್ಮಿಸಲು ಉದ್ದೇಶಿಸಲಾಗಿದೆ. ಇದರಲ್ಲಿ ನೆಲ ಅಂತಸ್ತು ಸೇರಿದಂತೆ ಎರಡು ಮಹಡಿಗಳಿರಲಿವೆ. ಒಟ್ಟು ಎಂಟು ಮನೆಗಳು ಇರಲಿವೆ ಅನ್ನುತ್ತಾರೆ ನಗರಸಭೆ ಪೌರಯುಕ್ತ ಮಧು ಎಸ್‌ ಮನೋಹರ್‌.

ವಿಶ್ರಾಂತಿ ಗೃಹ
ಈಗಾಗಲೇ ದ.ಕ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಪುತ್ತೂರು ನಗರಸಭೆಯು ಪೌರ ಕಾರ್ಮಿಕರಿಗಾಗಿ ಕಂಟೈನರ್‌ ಮಾದರಿಯ ಪೌರಬಂಧು ವಿಶ್ರಾಂತಿ ಗೃಹ ನಿರ್ಮಿಸಿದೆ. ಅಮೃತ ನಿರ್ಮಲ ನಗರ ಯೋಜನೆ ಅಡಿಯಲ್ಲಿ 12 ಲಕ್ಷ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ. ದಿನನಿತ್ಯ ನಗರದ ಸ್ವತ್ಛತೆಗಾಗಿ ಕೆಲಸ ಮಾಡುವ ಪೌರ ಕಾರ್ಮಿಕರು ತಮ್ಮ ವೈಯಕ್ತಿಕ ಸ್ವಚ್ಛತೆ, ವಿಶ್ರಾಂತಿಗಾಗಿ ಈ ಕಂಟೈನರ್‌ ಸಹಕಾರಿಯಾಗಿದ್ದು ಇದರಲ್ಲಿ ಕಾರ್ಮಿಕರು ವಿಶ್ರಾಂತಿ ಪಡೆಯುತ್ತಾರೆ. ಕುಡಿಯುವ ನೀರಿನ ಪೂರೈಕೆ ಇದೆ. ಇದಲ್ಲದೆ ಸ್ನಾನ ಗೃಹ, ಶೌಚಾಲಯ ಲಭ್ಯ ಇದೆ. ವಿಶ್ರಾಂತಿಗೃಹದ ಬೆನ್ನಲ್ಲೇ ವಸತಿಗೃಹದ ಸ್ಥಾಪನೆಗೂ ನಗರಾಡಳಿತ ಹೆಜ್ಜೆ ಇರಿಸಿದೆ.

ತ್ಯಾಜ್ಯ ಸಂಗ್ರಹ ಜವಾಬ್ದಾರಿ
ನಗರದ 15 ಸಾವಿರಕ್ಕೂ ಮಿಕ್ಕಿದ ಮನೆ, ಕಟ್ಟಡಗಳಿಂದ ದಿನಂಪ್ರತಿ 8 ಟನ್‌ ಅಧಿಕ ಹಸಿತ್ಯಾಜ್ಯ ಬನ್ನೂರು ಯಾರ್ಡ್‌ ಸೇರುತ್ತಿದೆ. ಇಷ್ಟು ಪ್ರಮಾಣದ ತ್ಯಾಜ್ಯ ಸಂಗ್ರಹಿಸಿ ಡಂಪಿಂಗ್‌ ಯಾರ್ಡ್‌ಗೆ ಸೇರಿಸುವ ಜವಾಬ್ದಾರಿ ನಿರ್ವಹಿಸುವುದು ಪೌರ ಕಾರ್ಮಿಕರು. ಸಿಬಂದಿ ಸಂಖ್ಯೆಯ
ಕೊರತೆಯ ನಡುವೆಯು ಪ್ರತಿನಿತ್ಯ ನಗರದ ವಾಣಿಜ್ಯ ಕಟ್ಟಡ, ಮನೆ ಮನೆಗಳಿಂದ ಕಸ ಸಂಗ್ರಹಿಸುವ ಜತೆಗೆ ನಗರದ ಸ್ವತ್ಛತ ಕಾರ್ಯದಲ್ಲಿ ಪೌರ ಕಾರ್ಮಿಕರು ತೊಡಗಿಸಿಕೊಳ್ಳುತ್ತಾರೆ.

ಅಗತ್ಯ ನೆರವು
ನಗರದ ಸ್ವಚ್ಛತೆಗೆ ಪೌರ ಕಾರ್ಮಿಕರ ಕೊಡುಗೆ ಅಪಾರ. ಸಿಬಂದಿ ಪೈಕಿ ಹೆಚ್ಚಿನವರು ಹೊರ ಜಿಲ್ಲೆಯಿಂದ ಬಂದವರು. ಅವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಅವರಿಗೆ ವಸತಿ ವ್ಯವಸ್ಥೆ ಒದಗಿಸುವ ನಿಟ್ಟಿನಲ್ಲಿ ವಸತಿಗೃಹ ನಿರ್ಮಾಣಕ್ಕೆ ನಗರಾಡಳಿತ ಯೋಜನೆ ರೂಪಿಸಿದ್ದು ಸರಕಾರದ ಮೂಲಕವು ಅಗತ್ಯ ನೆರವು ನೀಡಲಿದೆ.
-ಸಂಜೀವ ಮಠಂದೂರು, ಶಾಸಕರು, ಪುತ್ತೂರು

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.