40 ವರ್ಷಗಳ ಕಾಲದ ಸಮಸ್ಯೆಯನ್ನು ಪರಿಹರಿಸಿಕೊಟ್ಟ ಡಾ.ಜಿ.ಪರಮೇಶ್ವರ್


Team Udayavani, Dec 19, 2022, 5:47 PM IST

1-sad-s-sad

ಕೊರಟಗೆರೆ: ಮದ್ಯ ವೆಂಕಟಾಪುರ ಮತ್ತು ಸುತ್ತಮುತ್ತಲ ಗ್ರಾಮಸ್ಥರ ಸುಮಾರು 40 ವರ್ಷಗಳ ಕಾಲದ ಸಮಸ್ಯೆಯನ್ನು ಶಾಸಕ ಡಾ.ಜಿ.ಪರಮೇಶ್ವರ್ ಅವರು ಪರಿಹರಿಸಿಕೊಟ್ಟಿದ್ದಾರೆ.

ತಾಲೂಕಿನ ಹೊಳವನಹಳ್ಳಿ ಹೋಬಳಿಯ ಮದ್ಯವೆಂಕಟಾಪುರ, ಬಂದ್ರೆಹಳ್ಳಿ, ಭಕ್ತರಹಳ್ಳಿ, ನಾಗರಹಳ್ಳಿ ಗ್ರಾಮಗಳ ಜನರು ಸುಮಾರು 40 ವರ್ಷಗಳಿಂದ ಪಡಿತರ ತರಲು 4-5 ಕಿಲೋಮೀಟರ್ ಹೋಗಿ ಬರಬೇಕಿತ್ತು ಇದನ್ನು ಗ್ರಾಮಸ್ಥರು, ಮುಖಂಡರೊಂದಿಗೆ ಶಾಸಕ ಡಾ.ಜಿ ಪರಮೇಶ್ವರ್ ರವರಿಗೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಶಾಸಕರು ಅಧಿಕಾರಿಗಳೊಂದಿಗೆ ಮಾತನಾಡಿ ಸೋಮವಾರದಂದು ಮದ್ಯ ವೆಂಕಟಾಪುರದಲ್ಲಿ ಪಡಿತರ ಉಪಕೇಂದ್ರಕ್ಕೆ ಚಾಲನೆ ನೀಡಿ ಪಡಿತರ ನೀಡಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕ ಡಾ.ಜಿ.ಪರಮೇಶ್ವರ್ ಈ ನಾಲ್ಕು ಗ್ರಾಮಗಳ ಗ್ರಾಮಸ್ಥರು ಕೆಲವು ವರ್ಷಗಳ ಹಿಂದೆ ಮಾವತ್ತೂರು ಗ್ರಾಮಕ್ಕೆ ಪಡಿತರ ತರಲು ೫ ಕಿಲೊಮೀಟರ್ ನಡೆದು ಹೋಗುತ್ತಿದ್ದರು, ನಂತರ ಇದನ್ನು ಲಿಂಗಾಪುರ ಪಡಿತರ ಕೇಂದ್ರಕ್ಕೆ ವರ್ಗಾಯಿಸಿದರು ಆದರೂ ಆ ಕೇಂದ್ರದಿಂದ ಪಡಿತರ ತರಲು ೪ ಕಿಲೊಮೀಟರ್ ನಡೆದುಕೊಂಡು ಹೋಗಿ ವಾಪಸ್ಸು ಬರುವ ಸಮಸ್ಯೆ ಇತ್ತು, ಇದರಿಂದ ರೈತರಿಗೆ, ಕೂಲಿ ಕಾರ್ಮಿಕರಿಗೆ, ಮಹಿಳೆಯರಿಗೆ ಹಾಗೂ ವೃದ್ದರಿಗೆ ಅತಿಯಾದ ಸಮಸ್ಯೆಯಾಗುತ್ತಿತ್ತು, ಇದರೊಂದಿಗೆ ಪಡಿತರ ವ್ಯವಸ್ಥೆ ಆನ್-ಲೈನ್ ವ್ಯವಸ್ಥೆಯಿದ್ದು ಪಡಿತರ ಕೇಂದ್ರದಲ್ಲಿ ನೆಟ್ ವರ್ಕ್ ಬಾರದೇ ಇದ್ದಾಗ ಮತ್ತೆ ವಾಪಸ್ ಹೋಗಿ ಬರಬೇಕಿತ್ತು ಇದನ್ನು ಮನಗೊಂಡು ಗ್ರಾಮಸ್ಥರ ಮನವಿಗೆ ಸ್ಪಂದಿಸಲಾಗಿದೆ.ಅವರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ ಎಂದರು.

ಕೊರಟಗೆರೆ ಕ್ಷೇತ್ರದಲ್ಲಿ ಶಾಸಕ ಹಾಗೂ ಮಂತ್ರಿಯಾದ ಕಾಲದಿಂದಲೂ ಜನರ ಸಮಸ್ಯೆಗೆ ಸಾಕಷ್ಟು ಸ್ಪಂದಿಸಿ ಪರಿಹರಿಸಿದ್ದೇನೆ, ಕ್ಷೇತ್ರದ ಪ್ರತಿ ಗ್ರಾಮಗಳ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಶಕ್ತಿ ಮೀರಿ ಕೆಲಸ ಮಾಡಲಾಗಿದೆ, ಕ್ಷೇತ್ರದಲ್ಲಿ 160 ಕೋಟಿಗಳ ವಸತಿ ವಿದ್ಯಾಕೇಂದ್ರಗಳನ್ನು ಗ್ರಾಮೀಣ ಭಾಗದ ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಆರಂಭಿಸಿದ್ದೇನೆ. ಇದರೊಂದಿಗೆ ಸಾಕಷ್ಟು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದು,
ಕೊರೊನಾದಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ನನ್ನ ಕ್ಷೇತ್ರದಲ್ಲಿ ಪ್ರಾರಂಭಿಸಿದ ವೈದ್ಯರ ನಡಿಗೆ ಹಳ್ಳಿಯ ಕಡೆಗೆ-ರೋಗಿಗಳ ಮನೆ ಮನೆಗಳಿಗೆ ಕಾರ್ಯವೂ ರಾಜ್ಯದಲ್ಲೇ ಮಾದರಿಯಾಗಿದೆ, ಜನರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ ಎಂದರು.

ಈ ಸಂಧರ್ಭದಲ್ಲಿ ಗ್ರಾ,ಪಂ ಸದಸ್ಯೆ ಗಂಗಮ್ಮ, ಮಾಜಿ ಸದಸ್ಯೆ ರಾಮಕ್ಕ ಕೆಪಿಸಿಸಿ ಸದಸ್ಯ ಎ.ಡಿ.ಬಲರಾಮಯ್ಯ. ಮುಖಂಡರುಗಳಾದ ಮಾವತ್ತೂರು ವೆಂಕಟಪ್ಪ, ಸಿದ್ದರಾಜು, ಶ್ರೀನಿವಾಸ್, ರಂಗಣ್ಣ, ಕಿಟ್ಟಪ್ಪ, ಚಿಕ್ಕರಂಗಯ್ಯ, ರಮೇಶ್ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.