ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದಿಂದ ಕೋಟ್ಯಂತರ ರೂ. ವಂಚನೆ ಆರೋಪ: ಪ್ರತಿಭಟನೆ


Team Udayavani, Dec 20, 2022, 1:14 AM IST

ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದಿಂದ ಕೋಟ್ಯಂತರ ರೂ. ವಂಚನೆ ಆರೋಪ: ಪ್ರತಿಭಟನೆ

ಉಡುಪಿ : ಠೇವಣಿ ಇಟ್ಟ ಹಣ ಮರಳಿಸದೆ ವಂಚನೆ ಮಾಡಿದೆ ಎಂದು ಆರೋಪಿಸಿ ನಗರದ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ವಿರುದ್ಧ ಗ್ರಾಹಕರು ಸೋಮವಾರ ಪ್ರತಿಭಟನೆ ನಡೆಸಿದರು.

ಸಂಘವು ಠೇವಣಿಗೆ ಶೇ. 12ರ ಬಡ್ಡಿ ನೀಡುವುದಾಗಿ ಗ್ರಾಹಕರಿಗೆ ಆಮಿಷವೊಡ್ಡಿ ಹಣ ಸಂಗ್ರಹಿಸಿತ್ತು. ಸಂಘದ ಅಧ್ಯಕ್ಷ ಇಂದ್ರಾಳಿಯ ಬಿ.ವಿ. ಲಕ್ಷ್ಮೀನಾರಾಯಣ, ರವಿ ಉಪಾಧ್ಯ, ಬಿ.ವಿ. ಬಾಲಕೃಷ್ಣ, ಭಾಸ್ಕರ ಉಪಾಧ್ಯ, ಉದಯ ಉಪಾಧ್ಯ, ರಾಧಿಕಾ, ಸುಜಾತಾ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಿ.ವಿ. ಲಕ್ಷ್ಮೀನಾರಾಯಣ ಸಹಕಾರ ಸಂಘ ನಿರ್ಮಿಸಿ ಗ್ರಾಹಕರಿಂದ ಅಧಿಕ ಬಡ್ಡಿ ಆಸೆ ತೋರಿಸಿ ಹಣವನ್ನು ಠೇವಣಿ ಇರಿಸಿದ್ದರು. ಆದರೆ ಈಗ ಹಣ ಕೇಳಿದರೂ ನೀಡುತ್ತಿಲ್ಲ. ಅಲ್ಲದೆ ಸಿಬಂದಿಗೂ ವೇತನ ನೀಡದೆ ಬಾಕಿ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಎಲ್ಲ ಕಾರಣಗಳಿಂದ ಆಕ್ರೋಶಿತರಾಗಿದ್ದ ಗ್ರಾಹಕರು ಸೋಮವಾರ ಕಚೇರಿಗೆ ಮುತ್ತಿಗೆ ಹಾಕಿದರು.

ಆತ್ಮಹತ್ಯೆಗೆ ಮುಂದಾದ ಸಿಬಂದಿ
ಬೆಳಗ್ಗೆ 11ರ ವರೆಗೆ ಬಂದ್‌ ಇದ್ದ ಸೊಸೈಟಿಯನ್ನು ಬಳಿಕ ತೆರೆದಾಗ ಗ್ರಾಹಕರು ಒಳಪ್ರವೇಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಹಿಳಾ ಸಿಬಂದಿ ಮಾತ್ರೆಗಳನ್ನು ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು. ಬಳಿಕ ಅವರನ್ನು ಸಮಾಧಾನಪಡಿಸಲಾಯಿತು. ಲಕ್ಷ್ಮೀನಾರಾಯಣ್‌ ಅವರು ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಲಾಯಿತು. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತಂದರು. ಪ್ರಸ್ತುತ ಸೊಸೈಟಿಗೆ ಬೀಗ ಜಡಿಯಲಾಗಿದೆ.

ಕೋಟ್ಯಂತರ ರೂ. ವಂಚನೆ
ಈ ಸೊಸೈಟಿಯಲ್ಲಿ ಸುಮಾರು 700ಕ್ಕೂ ಅಧಿಕ ಮಂದಿ ಸದಸ್ಯರಿದ್ದರು. ಸಾವಿರದಿಂದ ಕೋಟಿ ರೂ.ಗಳವರೆಗೆ ಠೇವಣಿ ಇರಿಸಿದ್ದಾರೆ. ಆಡಿಟ್‌ ಕೂಡ ಮಾಡಿಲ್ಲ. ಕರೆ ಮಾಡುವಾಗ ಸೊಸೈಟಿಯ ಸಿಬಂದಿ ಸ್ವೀಕರಿಸುತ್ತಿಲ್ಲ ಎಂದು ವಂಚನೆಗೊಳಗಾದವರು ಆಕ್ರೋಶಿತ ರಾಗಿ ಘೋಷಣೆ ಕೂಗಿದರು.

ಗ್ರಾಹಕ ನ್ಯಾಯಾಲಯ, ಠಾಣೆಗೆ ದೂರು
ಸೊಸೈಟಿಯಿಂದಾದ ವಂಚನೆಯ ಬಗ್ಗೆ ಸಂತ್ರಸ್ತರು ಉಡುಪಿ ನಗರ ಠಾಣೆ ಹಾಗೂ ಗ್ರಾಹಕ ನ್ಯಾಯಾಲಯಕ್ಕೆ ಎಲ್ಲರ ಸಹಿ ಸಂಗ್ರಹಿಸಿ ದೂರು ನೀಡಿದ್ದಾರೆ. ದೂರು ಬಂದಿದೆ. ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಠೇವಣಿ ಇರಿಸಿದ 18 ಲ.ರೂ.ಗಳನ್ನು ಮನೆ ನಿರ್ಮಾಣಕ್ಕೆಂದು ತೆಗೆಯಲು ಉದ್ದೇಶಿಸಿದ್ದೆ. ಆದರೆ ಈಗ ಅವರು ನೀಡಲು ಹಿಂದೇಟು ಹಾಕುತ್ತಿದ್ದಾರೆ. ನಮಗೆ ಸೂಕ್ತ ನ್ಯಾಯ ಒದಗಿಸಬೇಕು.
– ಪುಷ್ಪಾ, ವಂಚನೆಗೊಳಗಾದವರು

ಕೊರೊನಾ ಅವಧಿಯಲ್ಲಿ ನಾನು ಕೆಲಸ ಕಳೆದು ಕೊಂಡಿದ್ದೆ. ಈ ವೇಳೆ ಲಭಿಸಿದ ಹಣವನ್ನು ಇಲ್ಲಿ ಠೇವಣಿ ಇರಿಸಿದ್ದೆ. ಪ್ರಸ್ತುತ ತೆಗೆಯಲು ಕೇಳಿದಾಗ ಇವತ್ತು, ನಾಳೆ ಎಂದು ದಿನದೂಡುತ್ತಿದ್ದಾರೆ.
– ಶ್ರೀನಿವಾಸ ಪ್ರಭು ವಂಚನೆಗೊಳಗಾದವರು

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.