ಶಿಕ್ಷಕನಿಂದ ಹಲ್ಲೆಗೊಳಗಾದ ಶಿಕ್ಷಕಿಯ ಆರೋಗ್ಯ ವಿಚಾರಿಸಿದ ಸಚಿವ ಬಿ.ಸಿ. ನಾಗೇಶ್
ವಿದ್ಯಾರ್ಥಿ ಹತ್ಯೆ ಮಾಡಿ ಪರಾರಿಯಾದ ಶಿಕ್ಷಕನಿಗೆ ಶೋಧ
Team Udayavani, Dec 20, 2022, 10:58 PM IST
ಹುಬ್ಬಳ್ಳಿ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರು ಮಂಗಳವಾರ ಕಿಮ್ಸ್ಗೆ ಭೇಟಿ ನೀಡಿ, ಶಿಕ್ಷಕನಿಂದ ದಾಳಿಗೊಳಗಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶಿಕ್ಷಕಿ ಗೀತಾ ಬಾರಕೇರ ಅವರ ಆರೋಗ್ಯ ವಿಚಾರಿಸಿದರು.
ಗಾಯಾಳು ಶಿಕ್ಷಕಿಯ ಕುಟುಂಬಕ್ಕೆ ಧೈರ್ಯ ತುಂಬಿದರು. ಶಿಕ್ಷಕಿಯ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ, ಶಾಲೆಯ 4ನೇ ತರಗತಿ ವಿದ್ಯಾರ್ಥಿ ಭರತ್ ಮೇಲೆ ಸೋಮವಾರ ಬೆಳಗ್ಗೆ ಹಲ್ಲೆ ನಡೆಸಿ, ಒಂದನೇ ಮಹಡಿಯಿಂದ ಕೆಳಗೆ ತಳ್ಳಿದ್ದ. ಬಳಿಕ ಶಿಕ್ಷಕಿ ಗೀತಾ ಯಲ್ಲಪ್ಪ ಬಾರಕೇರ ಮೇಲೂ ಸಲಾಕೆಯಿಂದ ಹಲ್ಲೆ ನಡೆಸಿದ್ದ. ಬಾಲಕ ಭರತ ಮೃತಪಟ್ಟಿದ್ದಾನೆ.
ಶಿಕ್ಷಕಿ ಗೀತಾ ಅವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ಗೆ ದಾಖಲಿಸಲಾಗಿದೆ. ಪರಾರಿಯಾಗಿರುವ ಆರೋಪಿ ಶಿಕ್ಷಕನ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶಾಲೆಯಲ್ಲಿ ನಡೆದ ಈ ಘಟನೆ ಅತ್ಯಂತ ದುರಾದೃಷ್ಟಕರ. ಶಾಲೆ ಆವರಣದಲ್ಲಿ ಇಂತಹ ಘಟನೆಗಳನ್ನು ಊಹಿಸಲು ಅಸಾಧ್ಯ. ಘಟನೆಯಿಂದ ಆತಂಕಗೊಂಡ ಶಾಲೆಯ ಮಕ್ಕಳು ಮತ್ತು ಶಿಕ್ಷಕರಿಗೆ ಕೌನ್ಸೆಲಿಂಗ್ ಮಾಡಿ ಧೈರ್ಯ ತುಂಬಲಾಗುತ್ತದೆ. ಘಟನೆಗೆ ಕಾರಣ ಏನೆಂಬುದು ಆರೋಪಿ ಬಂಧನ ಬಳಿಕ ತಿಳಿದು ಬರಲಿದೆ. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಬಿ.ಸಿ. ನಾಗೇಶ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು