ಮಂಗಳೂರು : ಮರಳು ದಿಬ್ಬ ತೆರವಿಗೆ ಮೀನುಗಾರರ ವಿರೋಧ
Team Udayavani, Dec 21, 2022, 6:05 AM IST
ಮಂಗಳೂರು : ನದಿಗಳಿಂದ (ಸಿಆರ್ಝಡ್ ವ್ಯಾಪ್ತಿ) ಮರಳು ದಿಬ್ಬಗಳನ್ನು ತೆರವು ಮಾಡಿದರೆ ಸಾಂಪ್ರದಾಯಿಕ ಮೀನುಗಾರಿಕೆಗೆ ತೊಂದರೆಯಾಗಲಿದ್ದು, ಅನುಮತಿ ನೀಡಬಾರದು ಎಂದು ಮೀನುಗಾರರ ಸಂಘದ ಮುಖಂಡರು ಆಗ್ರಹಿಸಿದ್ದಾರೆ.
ಬೆಂಗ್ರೆ ಫಾಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಅಧ್ಯಕ್ಷ ಅಬ್ದುಲ್ ತಯ್ಯುಬ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನದಿಗಳಲ್ಲಿರುವ ಮರಳು ದಿಬ್ಬಗಳನ್ನು ತೆರವು ಮಾಡಿದರೆ ಪಾಚಿ, ಮರುವಾಯಿ, ಚಿಪ್ಪು ಮತ್ತು ಸಿಗಡಿ ಸಂತತಿ ನಾಶವಾಗುತ್ತದೆ. ಇದರಿಂದಾಗಿ ಮೀನುಗಾರರ ಸಾವಿರಾರು ಕುಟುಂಬಗಳ ಜೀವನೋಪಾಯಕ್ಕೆ ತೊಂದರೆಯಾಗುತ್ತದೆ. ಈಗಾಗಲೇ ನದಿಯಲ್ಲಿ ಮೀನಿನ ಅಭಾವ ಉಂಟಾಗಿದೆ.
ಮರಳುಗಾರಿಕೆಯಿಂದ ಆದ ಆಳದಲ್ಲಿ ಮೀನುಗಾರಿಕೆ ನಡೆಸುವಾಗ ಮೀನುಗಾರರ ಜೀವಹಾನಿಯಾಗುವ ಅಪಾಯವೂ ಇದೆ. ಹಾಗಾಗಿ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರುಳುದಿಬ್ಬ ತೆರವಿಗೆ ಅನುಮತಿ ನೀಡಬಾರದು. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಯವರಿಗೂ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ರೀತಿಯ ಸ್ಪಂದನೆ ದೊರೆತಿಲ್ಲ ಎಂದು ಹೇಳಿದರು.
ನೇತ್ರಾವತಿ, ಗುರುಪುರ, ಫಲ್ಗುಣಿ ನದಿಗಳಲ್ಲಿ ತೆರವು ಮಾಡುವಂತಹ ಯಾವುದೇ ಮರಳು ದಿಬ್ಬ ಇಲ್ಲ. ದೋಣಿಗಳ ಸಂಚಾರಕ್ಕೂ ಅಡ್ಡಿಯಾಗುತ್ತಿಲ್ಲ. ಆದರೆ ಜಿಲ್ಲಾಧಿಕಾರಿಯವರ ನೇತೃತ್ವದ ಸಮಿತಿ ನೇತ್ರಾವತಿಯಿಂದ ಕೂಳೂರು ವರೆಗೆ 17 ಮರಳು ದಿಬ್ಬಗಳಿವೆ ಎಂದು ಹೇಳುತ್ತಿದೆ. ಅವರು ಮಾಡಿರುವ ಸಮೀಕ್ಷೆ ಸಮರ್ಪಕವಾಗಿಲ್ಲ. ಆ ಸಮಿತಿಯಲ್ಲಿ ಮೀನುಗಾರರು ಇಲ್ಲ. ನದಿಗಳ ದಿಬ್ಬ ತೆರವಿಗೆ ಅನುಮತಿ ನೀಡಿದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಅಬ್ದುಲ್ ತಯ್ಯುಬ್ ತಿಳಿಸಿದರು.
ದ.ಕ. ಸಾಂಪ್ರದಾಯಿಕ ನದಿ ಮೀನುಗಾರರ ಸಂಘದ ಜತೆ ಕಾರ್ಯದರ್ಶಿ ರಿತೇಶ್ ಡಿ’ಸೋಜಾ ಮಾತನಾಡಿ, ನೇತ್ರಾವತಿ ಸೇತುವೆಯಿಂದ ಮೇಲ್ಭಾಗ ಹಾಗೂ ಕೂಳೂರು ಸೇತುವೆಯಿಂದ ಮೇಲ್ಭಾಗದಲ್ಲಿ ಮರಳುಗಾರಿಕೆ ನಡೆಸಿದರೆ ತೊಂದರೆಯಾಗದು ಎಂದು ಹೇಳಿದರು.
ದ.ಕ. ಸಾಂಪ್ರದಾಯಿಕ ನದಿ ಮೀನುಗಾರರ ಸಂಘದ ಉಪಾಧ್ಯಕ್ಷ ಲೋಕೇಶ್ ಡಿ., ಕಾರ್ಯದರ್ಶಿ ನವೀನ್ ಸಾಲ್ಯಾನ್, ಪ್ರೇಮ್ ಪ್ರಕಾಶ್ ಡಿ’ಸೋಜಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.