ಚೀನದಲ್ಲಿ ಕೋವಿಡ್ ಅಬ್ಬರ: ಆತಂಕ ಬೇಡ: ಕೇಂದ್ರ ಸರಕಾರ
ಬೂಸ್ಟರ್ ಡೋಸ್ ಇರಲಿ
Team Udayavani, Dec 22, 2022, 7:20 AM IST
ಹೊಸದಿಲ್ಲಿ/ಬೆಂಗಳೂರು: ನೆರೆಯ ಚೀನದಲ್ಲಿ ಕೊರೊನಾ ಅಬ್ಬರ ಹೆಚ್ಚಾಗಿದ್ದು, ಎಲ್ಲ ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರ ಸೂಚಿಸಿದೆ. ಚೀನದಲ್ಲಿ ಕಂಡು ಬಂದಿರುವ ಬಿ 7 ತಳಿ ಭಾರತದಲ್ಲೂ 4 ಮಂದಿಯಲ್ಲಿ ಕಂಡು ಬಂದಿದ್ದರಿಂದ ಕಟ್ಟೆಚ್ಚರ ವಹಿಸಲಾಗಿದೆ.
ಚೀನ, ಜಪಾನ್, ಅಮೆರಿಕ, ದಕ್ಷಿಣ ಕೊರಿಯ, ಬ್ರೆಜಿಲ್ನಲ್ಲಿ ದಿಢೀರನೇ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಹೀಗಾಗಿ ಬುಧವಾರ ಬೆಳಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಹಿರಿಯ ಅಧಿಕಾರಿಗಳು ಮತ್ತು ತಜ್ಞರ ಜತೆ ಸಭೆ ನಡೆಸಿದ ಬಳಿಕ ಮಾತನಾಡಿ, ಎಂಥದ್ದೇ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರಲು ಸೂಚಿಸಿದರು.
ಮುನ್ನೆಚ್ಚರಿಕಾ ಡೋಸ್ ಪಡೆಯುವಂತೆ ಸಲಹೆ ನೀಡಿದ್ದು, ಈಗಿನ ಚೀನ ಪರಿಸ್ಥಿತಿ ನಮ್ಮಲ್ಲಿ ಉದ್ಭವವಾದೀತು ಎಂದಲ್ಲ. ಆದರೆ ಆತಂಕ ಪಡುವುದಕ್ಕಿಂತ ಎಚ್ಚರ ವಹಿಸಿ ಎಂದರು ಸಚಿವರು. ಜನಸಂದಣಿ ಇರುವಲ್ಲಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾದುಕೊಳ್ಳಬೇಕು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ರ್ಯಾಂಡಮ್ ಟೆಸ್ಟ್ ನಡೆಸಲು ಸೂಚಿಸಲಾಗಿದೆ ಎಂದರು.
ರಾಜ್ಯದಲ್ಲೂ ಕಟ್ಟೆಚ್ಚರ
ಇತ್ತ ರಾಜ್ಯ ಸರಕಾರ ಕೂಡ ಮುನ್ನೆಚ್ಚರಿಕೆ ವಹಿಸಲು ಜನರಿಗೆ ಸಲಹೆ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮೊದಲ ಹಂತದಲ್ಲಿ ಪ್ರಮುಖ ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಾಧ್ಯತೆ ಇದೆ. ಶೀಘ್ರವೇ ಕೋವಿಡ್ ಮುನ್ನೆಚ್ಚರಿಕೆ ಸಂಬಂಧ ಸರಕಾರವು ಮಾರ್ಗಸೂಚಿ ಹೊರಡಿಸಲಿದೆ.
ಕೋವಿಡ್ ಲಕ್ಷಣ ಪತ್ತೆಯಾದರೆ ಪರೀಕ್ಷಿಸಿ
ಕೆಮ್ಮು, ಜ್ವರ, ಶೀತ, ಗಂಟಲು, ತಲೆನೋವು ಸೇರಿದಂತೆ ಕೋವಿಡ್ ಲಕ್ಷಣಗಳು ಕಂಡು ಬಂದರೆ ಕೂಡಲೇ ಪರೀಕ್ಷಿಸುವುದು ಉತ್ತಮ ಎನ್ನುತ್ತಾರೆ ತಜ್ಞ ವೈದ್ಯರು.
ಬೂಸ್ಟರ್ ಪಡೆಯದಿದ್ದವರ ಮೇಲೆ ನಿಗಾ ರಾಜ್ಯದಲ್ಲಿ ಈವರೆಗೆ ಶೇ.20ರಷ್ಟು ಮಂದಿ ಮುನ್ನೆಚ್ಚರಿಕಾ ಡೋಸ್ ಪಡೆದಿದ್ದು, ಪಡೆಯದವರ ಮೇಲೆ ನಿಗಾ ವಹಿಸಲಾಗುವುದು.
– ಡಾ| ಕೆ. ಸುಧಾಕರ್, ಆರೋಗ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ