ಫೆಬ್ರವರಿಯಲ್ಲಿ ಮುದ್ದೇಬಿಹಾಳಕ್ಕೆ ಸಿಎಂ ಭೇಟಿ
Team Udayavani, Dec 22, 2022, 11:33 AM IST
ಮುದ್ದೇಬಿಹಾಳ: ತಾಲೂಕಿನ ಸುಕ್ಷೇತ್ರ, ಐತಿಹಾಸಿಕ ಮತ್ತು ಧಾರ್ಮಿಕ ಕೇಂದ್ರವಾಗಿರುವ ಮುದ್ದೇಬಿಹಾಳ ತಾಲೂಕು ಕೃಷ್ಣಾ ನದಿ ತೀರದ ತಂಗಡಗಿ ಗ್ರಾಮಕ್ಕೆ ಫೆಬ್ರವರಿ ತಿಂಗಳ ಮೊದಲ ವಾರ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಗುರುವಾರ ಬೆಳಿಗ್ಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುದ್ದೇಬಿಹಾಳ ಶಾಸಕ, ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಉಸ್ತುವಾರಿಯಲ್ಲಿ ಮತ್ತು ತಂಗಡಗಿಯ ಹಡಪದ ಅಪ್ಪಣ್ಣ ಮಹಾ ಸಂಸ್ಥಾನದ ಪೀಠಾಧಿಪತಿ ಅನ್ನದಾನ ಭಾರತಿ ಸ್ವಾಮೀಜಿ ನೇತೃತ್ವದ ನಿಯೋಗಕ್ಕೆ ಈ ಭರವಸೆ ನೀಡಿದ್ದಾರೆ.
ತಂಗಡಗಿ ಗ್ರಾಮದ ಸಮಗ್ರ ಅಭಿವೃದ್ದಿಗಾಗಿ ಶಾಸಕ ನಡಹಳ್ಳಿಯವರಿಗೆ ಮುಖ್ಯಮಂತ್ರಿಯವರು ಸಂಪೂರ್ಣ ಸಹಕಾರ ನೀಡಿರುವುದನ್ನು ನೆನಪಿಸಿದ ಸ್ವಾಮೀಜಿ, ಈಗಾಗಲೇ ಸರ್ಕಾರದ ಕೋಟಿ ಅನುದಾನದ ಸಮುದಾಯ ಭವನ ಪೂರ್ಣಗೊಂಡಿದೆ. ಜೊತೆಗೆ 3 ಕೋಟಿ ಅನುದಾನದ ಕಟ್ಟಡ ನಿರ್ಮಾಣ ಕೆಲಸವೂ ಪ್ರಾರಂಭಗೊಳ್ಳಲಿದೆ. ಹೀಗಾಗಿ ಸಮುದಾಯ ಭವನ ಉದ್ಘಾಟನೆ ಮತ್ತು ಕಟ್ಟಡ ಅಡಿಗಲ್ಲು ಸಮಾರಂಭಕ್ಕೆ ಆಗಮಿಸಬೇಕು ಎಂದು ನಿಯೋಗ ಮನವಿ ಮಾಡಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂಧಿಸಿದರು. ಮಾತ್ರವಲ್ಲದೆ ಶಾಸಕ ನಡಹಳ್ಳಿ ಅವರ ಅದ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲು ತಿಳಿಸಿ ಶೀಘ್ರ ದಿನಾಂಕ ಕೊಡುವುದಾಗಿ ಭರವಸೆ ನೀಡಿದರು. ಮುಖ್ಯಮಂತ್ರಿಯವರನ್ನು ಭೇಟಿ ಮಾಡಿಸಿ, ನಿಯೋಗದ ಮನವಿ ಆಲಿಸಲು ಮುಖ್ಯಮಂತ್ರಿಯವರ ಸಮಯ ಕೊಡಿಸಿದ ಶಾಸಕ ನಡಹಳ್ಳಿಯವರನ್ನು ಸ್ವಾಮೀಜಿ ನೇತೃತ್ವದ ನಿಯೋಗ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು