ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷರ ವಿರುದ್ದ ವಂಚನೆ ಪ್ರಕರಣ ದಾಖಲು
Team Udayavani, Dec 22, 2022, 6:04 PM IST
ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಬಿ.ವಿ. ಲಕ್ಷ್ಮೀನಾರಾಯಣ ಭಟ್ ವಿರುದ್ಧ 40.59 ಲ.ರೂ.ವಂಚನೆ ಮಾಡಿದ ಪ್ರಕರಣ ಉಡುಪಿ ಸೆನ್ ಠಾಣೆಯಲ್ಲಿ ದಾಖಲಾಗಿದೆ.
ಕಾರ್ಕಳ ನಿವಾಸಿ ಪ್ರಕಾಶ್ ಕಾಮತ್ ಅವರು ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ 2019 ರಲ್ಲಿ ಎಫ್.ಡಿ.ಇರಿಸಿದ್ದರು. ಹಣಕ್ಕೆ ಸಹಕಾರ ಸಂಘ ಪ್ರತಿ ತಿಂಗಳು ಶೇ.10ರಂತೆ ಬಡ್ಡಿಯನ್ನು ಎಸ್.ಬಿ.ಖಾತೆಗೆ ಹಾಕುತ್ತಿದ್ದರು. 3 ವರ್ಷದ ಅನಂತರ ರಿನಿವಲ್ ಕೂಡ ಮಾಡಿದ್ದರು. ಜೂನ್ 2022 ರಿಂದ ಇವರ ಖಾತೆಗೆ ಬಡ್ಡಿ ಹಣ ಬಂದಿರಲಿಲ್ಲ. ಈ ಬಗ್ಗೆ ವಿಚಾರಿಸಿದಾಗ ಸ್ವಲ್ಪ ದಿನದಲ್ಲಿ ಬಡ್ಡಿ ನೀಡುವುದಾಗಿ ತಿಳಿಸಿದ್ದರೂ ಇದುವರೆಗೂ ನೀಡಿರಲಿಲ್ಲ.
ಪತ್ರಿಕೆ ವರದಿಯಿಂದ ಮಾಹಿತಿ:
ಡಿ.20ರಂದು ದಿನಪತ್ರಿಕೆಯಲ್ಲಿ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘ ಉಡುಪಿಯಲ್ಲಿ ಕೋಟ್ಯಂತರ ರೂ.ವಂಚನೆ ಆರೋಪ ಪ್ರತಿಭಟನೆ ಬಗ್ಗೆ ವರದಿಯಾಗಿದ್ದು, ಆ ಬಳಿಕ ಪ್ರಕಾಶ್ ಕಾಮತ್ ಅವರು ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಬಂದು ನೋಡಿದಾಗ ಅದು ಮುಚ್ಚಲ್ಪಟ್ಟಿತ್ತು. ಇವರಂತೆ ಆ ಸಹಕಾರ ಸಂಘದಲ್ಲಿ ಕೆ.ಸತ್ಯಮೂರ್ತಿ ರಾವ್, ಲೀಲಾವತಿ, ಡಿ.ಭಾಸ್ಕರ್ ಕೋಟ್ಯಾನ್, ಟಿ. ಕೃಷ್ಣ ಗಾಣಿಗ, ಸುರೇಶ್ ಭಟ್ ಅವರಿಂದ ಒಟ್ಟು 40,59,000 ರೂ.ಹೂಡಿಕೆ ಮಾಡಿಸಿಕೊಂಡಿದ್ದಾರೆ. ಇಷ್ಟೇ ಅಲ್ಲದೆ ಇತರ ನೂರಾರು ಜನರಿಂದ ಕೂಡ ಹೂಡಿಕೆ ಮಾಡಿಕೊಂಡು ಸಂಘದ ಅಧ್ಯಕ್ಷ ಬಿ.ವಿ.ಲಕ್ಷ್ಮೀನಾರಾಯಣ ಭಟ್, ಮ್ಯಾನೇಜರ್ ಆಶಾ ಹಾಗೂ ಆಡಳಿತ ಮಂಡಳಿಯ ಸದಸ್ಯರು ಬಡ್ಡಿಯನ್ನು ಸರಿಯಾಗಿ ನೀಡದೆ ಸಹಕಾರ ಸಂಘವನ್ನು ಮುಚ್ಚಿ ಪ್ರಕಾಶ್ ಕಾಮತ್ ಹಾಗೂ ಇತರರಿಗೆ ಮೋಸ, ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ