ಉಪಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ

ಬಿಜೆಪಿಯಿಂದ ಪ್ರಾಣೇಶ್‌, ಕಾಂಗ್ರೆಸ್‌ನಿಂದ ಅರವಿಂದ ಅರಳಿ ಕಣಕ್ಕೆ

Team Udayavani, Dec 23, 2022, 6:45 AM IST

tdy-26

ಸುವರ್ಣ ವಿಧಾನಸೌಧ: ವಿಧಾನಪರಿಷತ್‌ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್‌ ಹಾಗೂ ಕಾಂಗ್ರೆಸ್‌ನಿಂದ ಅರವಿಂದ ಅರಳಿ ನಾಮಪತ್ರ ಸಲ್ಲಿಸಿದ್ದಾರೆ.

ಸಭಾಪತಿ ಚುನಾವಣೆ ನಂತರ ಇದೀಗ ಉಪಸಭಾಪತಿ ಆಯ್ಕೆಗೆ ಶುಕ್ರವಾರ ಚುನಾವಣೆ ನಡೆಯಲಿದೆ. ಆ ಹಿನ್ನೆಲೆಯಲ್ಲಿ ಗುರುವಾರ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮೀ ಅವರಿಗೆ ಉಭಯ ಪಕ್ಷಗಳ ಸದಸ್ಯರು ನಾಮಪತ್ರ ಸಲ್ಲಿಸಿದರು. ಜೆಡಿಎಸ್‌ ಚುನಾವಣೆಯಿಂದ ದೂರ ಉಳಿದಿದ್ದು, ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

ಉಪಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಎಂ.ಕೆ. ಪ್ರಾಣೇಶ್‌ ಅವರಿಗೆ ಮೇಲ್ಮನೆ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸದಸ್ಯ ನಾರಾಯಣ ಸ್ವಾಮಿ ಸೂಚಕರಾಗಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಅರವಿಂದ ಅರಳಿ ಅವರಿಗೆ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಹಾಗೂ ಸದಸ್ಯ ಮಂಜುನಾಥ ಭಂಡಾರಿ ಸೂಚಕರಾಗಿದ್ದಾರೆ.

ಪ್ರಾಣೇಶ್‌ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬಿ.ಎಸ್‌. ಯಡಿಯೂರಪ್ಪ, ಮಾಧುಸ್ವಾಮಿ, ಗೋವಿಂದ ಕಾರಜೋಳ, ಶಾಸಕರಾದ ಸಿ.ಟಿ.ರವಿ, ವೈ.ಎ. ನಾರಾಯಣಸ್ವಾಮಿ, ರವಿಕುಮಾರ್‌, ಅ. ದೇವೇಗೌಡ, ಎಸ್‌.ವಿ. ಸಂಕನೂರು ಇತರರಿದ್ದರು. ಕಾಂಗ್ರೆಸ್‌ನ ಅರವಿಂದ ಅರಳಿ ನಾಮಪತ್ರ ಸಲ್ಲಿಕೆ ವೇಳೆ  ಬಿ.ಕೆ.ಹರಿಪ್ರಸಾದ್‌, ಸಲೀಂ ಅಹ್ಮದ್‌, ಪಿ.ಆರ್‌.ರಮೇಶ್‌, ಪ್ರಕಾಶ್‌ ರಾಥೋಡ್‌ ಇದ್ದರು.

ಕಾಂಗ್ರೆಸ್‌ಗೆ ಸಂಖ್ಯೆ ಕೊರತೆ: ವಿಧಾನಪರಿಷತ್‌ನಲ್ಲಿ ಬಿಜೆಪಿಯ ಸಂಖ್ಯಾಬಲ ಹೆಚ್ಚಿದೆ. ಆದರೂ, ಶುಕ್ರವಾರ ನಡೆಯಲಿರುವ ಚುನಾವಣೆಗಾಗಿ ಕಾಂಗ್ರೆಸ್‌ನಿಂದ ಅಭ್ಯರ್ಥಿ ಕಣಕ್ಕಿಳಿಸಲಾಗಿದೆ. ಸದಸ್ಯರ ಬಲಾಬಲ ನೋಡಿದರೆ ಬಿಜೆಪಿಯ ಎಂ.ಕೆ. ಪ್ರಾಣೇಶ್‌ ಗೆಲ್ಲುವುದು ಖಚಿತ. ಜೆಡಿಎಸ್‌, ಪಕ್ಷೇತರ ಸದಸ್ಯರ ಬೆಂಬಲ ದೊರೆತು, ಬಿಜೆಪಿಯ ಕನಿಷ್ಠ 7 ಸದಸ್ಯರು ಗೈರಾದರೆ ಮಾತ್ರ ಕಾಂಗ್ರೆಸ್‌ ಅಭ್ಯರ್ಥಿ ಉಪಸಭಾಪತಿಯಾಗಲಿದ್ದಾರೆ.

ಸಂಖ್ಯಾ ಬಲ: 

ಬಿಜೆಪಿ: 39

ಕಾಂಗ್ರೆಸ್‌: 26

ಜೆಡಿಎಸ್‌: 8

ಪಕ್ಷೇತರ: 1

ಸಭಾಪತಿ: 1

ಉಪಸಭಾಪತಿ ಸ್ಥಾನಕ್ಕೆ ಎಂ.ಕೆ.ಪ್ರಾಣೇಶ್‌ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ, ಕಾಂಗ್ರೆಸ್‌ಗೆ ಬಹುಮತ ಇಲ್ಲದಿದ್ದರೂ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಾಮಪತ್ರ ಹಿಂಪಡೆಯುವ ಮೂಲಕ ಉಪಸಭಾಪತಿ ಸ್ಥಾನಕ್ಕೆ ಅವಿರೋಧ ಆಯ್ಕೆಗೆ ಸಹಕರಿಸಬೇಕು.-ಬಿ.ಎಸ್‌. ಯಡಿಯೂರಪ್ಪ, ಮಾಜಿ ಸಿಎಂ

ಆಡಳಿತ ಪಕ್ಷಕ್ಕೆ ಸಭಾಪತಿ ಹಾಗೂ ವಿರೋಧ ಪಕ್ಷಕ್ಕೆ ಉಪಸಭಾಪತಿ ಎಂಬ ಸಂಪ್ರದಾಯ ಹಿಂದಿನಿಂದಲೂ ನಡೆದುಬಂದಿದೆ. ಆದರೆ, ಬಿಜೆಪಿ ಈಗ ಸಂಪ್ರದಾಯ ಮುರಿದಿದೆ. ಆದ್ದರಿಂದ ಕಾಂಗ್ರೆಸ್‌ನಿಂದ ಅರವಿಂದ ಅರಳಿ ಅವರನ್ನು ಕಣಕ್ಕಿಳಿಸಲಾಗಿದೆ.-ಬಿ.ಕೆ. ಹರಿಪ್ರಸಾದ್‌, ಪರಿಷತ್‌ ವಿಪಕ್ಷ ನಾಯಕ

ಟಾಪ್ ನ್ಯೂಸ್

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.