ಕ್ರೀಡಾ ಉತ್ಸವವಾಗಿ “ಅಟಲ್‌ ಟ್ರೋಫಿ’: ಶಾಸಕ ರಘುಪತಿ ಭಟ್‌


Team Udayavani, Dec 23, 2022, 6:14 AM IST

ಕ್ರೀಡಾ ಉತ್ಸವವಾಗಿ “ಅಟಲ್‌ ಟ್ರೋಫಿ’: ಶಾಸಕ ರಘುಪತಿ ಭಟ್‌

ಉಡುಪಿ: ಅಟಲ್‌ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ನೆಲೆಯಲ್ಲಿ ಅಟಲ್‌ ಟ್ರೋಫಿ, ಬೂತ್‌ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಟಲ್‌ ಟ್ರೋಫಿಗೆ ಸಕಲ ತಯಾರಿ ಮಾಡಿಕೊಳ್ಳಲಾಗಿದ್ದು, ಇದು ಕ್ರೀಡಾ ಉತ್ಸವವಾಗಿ ಮೂಡಿಬರಲಿದೆ ಎಂದು ಶಾಸಕ ಕೆ. ರಘುಪತಿ ಭಟ್‌ ಹೇಳಿದರು.

ಅಟಲ್‌ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಅಂಗವಾಗಿ ಬಿಜೆಪಿ ಉಡುಪಿ ನಗರ ಮತ್ತು ಗ್ರಾಮಾಂತರ ವತಿಯಿಂದ ಹಮ್ಮಿಕೊಂಡಿರುವ “ಅಟಲ್‌ ಉತ್ಸವ’ದ ಪ್ರಯುಕ್ತ ಎಂಜಿಎಂ ಕಾಲೇಜು ಮೈದಾನದಲ್ಲಿ ಡಿ. 24ರಂದು ನಡೆಯಲಿರುವ ಹೊನಲು ಬೆಳಕಿನ ರಾಷ್ಟ್ರಮಟ್ಟದ ಮುಕ್ತ ಪ್ರೊ ಕಬಡ್ಡಿ ಪಂದ್ಯಾಟ ಹಾಗೂ ಡಿ. 25ರಂದು ನಡೆಯಲಿರುವ ಬೂತ್‌ ಸಂಗಮದ ಪೂರ್ವಭಾವಿಯಾಗಿ ಅಟಲ್‌ ಟ್ರೋಫಿಯನ್ನು ಗುರುವಾರ ಅನಾವರಣಗೊಳಿಸಿ, ಜನಪ್ರತಿನಿಧಿಗಳ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ 1999ರಿಂದ ಅಟಲ್‌ ಉತ್ಸವವನ್ನು ವಿವಿಧ ಕ್ರೀಡೆಗಳ ಮೂಲಕ ಆಚರಿಸಲಾಗುತ್ತಿದೆ. ಈ ಬಾರಿಯ “ಅಟಲ್‌ ಟ್ರೋಫಿ’ ಪ್ರೊ ಕಬಡ್ಡಿಯಲ್ಲಿ ರಾಷ್ಟ್ರ ಮಟ್ಟದ 12 ತಂಡಗಳು ಭಾಗವಹಿಸಲಿದ್ದು, 25 ಸಾವಿರಕ್ಕೂ ಮಿಕ್ಕಿ ಕ್ರೀಡಾಸಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಜನಪ್ರತಿನಿಧಿಗಳು ತಮ್ಮ ವಾರ್ಡ್‌ನಲ್ಲಿರುವ ಕ್ರೀಡಾ ಸಂಘಟನೆಗಳನ್ನು ಆಹ್ವಾನಿಸಿ ಉತ್ಸವದೋಪಾದಿ ನಡೆಸಿ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್‌. ನಾಯಕ್‌, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ ಎಸ್‌. ಕಲ್ಮಾಡಿ, ನಗರಸಭೆ ಸ್ಥಾಯೀ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪ್ರೊ ಕಬಡ್ಡಿ ಸಂಚಾಲಕ, ನಗರಸಭೆ ಸದಸ್ಯ ಗಿರೀಶ್‌ ಎಂ. ಅಂಚನ್‌, ಯುವ ಸಂಗಮದ ಉಸ್ತುವಾರಿ ಉಮೇಶ್‌ ನಾಯಕ್‌, ಕಲ್ಯಾಣಪುರ, ತೆಂಕನಿಡಿ ಯೂರು, ಬಡಾನಿಡಿಯೂರು, ಅಂಬಲಪಾಡಿ ಗ್ರಾ.ಪಂ. ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಗಾಯತ್ರಿ, ಪ್ರಭಾಕರ ತಿಂಗಳಾಯ, ರೋಹಿಣಿ ಉಪಸ್ಥಿತರಿದ್ದರು.

ನಗರ ಬಿಜೆಪಿ ಅಧ್ಯಕ್ಷ ಮಹೇಶ್‌ ಠಾಕೂರ್‌ ಸ್ವಾಗತಿಸಿದರು. ಬೂತ್‌ ಸಂಗಮದ ಸಂಚಾಲಕ ಕೆ. ರಾಘವೇಂದ್ರ ಕಿಣಿ ನಿರೂಪಿಸಿ, ವಂದಿಸಿದರು.

ಬೂತ್‌ ಸಂಗಮ ಯಶಸ್ಸಿಗೆ ಗ್ರಾಮ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಬೇಕು. ಪ್ರತೀ ಬೂತ್‌ನಿಂದ ಕನಿಷ್ಠ 113 ಮಂದಿ ಭಾಗವಹಿಸುವಂತೆ ಜನಪ್ರತಿನಿಧಿಗಳು ಉಸ್ತುವಾರಿ ವಹಿಸಿಕೊಳ್ಳಬೇಕು. 226 ಬೂತ್‌ಗಳ ಅಧ್ಯಕ್ಷರ ಮನೆಗಳಿಗೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಉಡುಪಿ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ ಸಭೆ ನಡೆಸಿ ಅಟಲ್‌ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. 226 ಬೂತ್‌ ಅಧ್ಯಕ್ಷರಲ್ಲಿ ಐವರು ಅಧ್ಯಕ್ಷರನ್ನು ಎಲೆಕ್ಟ್ರಾನಿಕ್‌ ಡಿವೈಸ್‌ನ ಮೂಲಕ ಆರಿಸಿ ಅವರ ಮೂಲಕ ದೀಪ ಪ್ರಜ್ವಲಿಸಲಾಗುವುದು. ಪ್ರತಿಯೊಬ್ಬ ಕಾರ್ಯಕರ್ತರು ಬೂತ್‌ ಸಂಗಮವನ್ನು ಸವಾಲಾಗಿ ಸ್ವೀಕರಿಸಿ ಯಶಸ್ವಿಗೊಳಿಸಬೇಕೆಂದು ಶಾಸಕರು ತಿಳಿಸಿದರು.

ಟಾಪ್ ನ್ಯೂಸ್

ಏಳನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

June ಅಂತ್ಯದೊಳಗೆ 7ನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

15

Road mishap: ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು

1-sasdsa-d

ST ಗೆ ಕೋಳಿ ಬೆಸ್ತ ಸಮಾಜ ಸೇರಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ: ಸಂಸದೆ ಪ್ರಿಯಂಕಾ

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯುRoad Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಏಳನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

June ಅಂತ್ಯದೊಳಗೆ 7ನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

ದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನ

Theft Case ದಾಂಡೇಲಿಯ ಟೌನ್ ಶಿಪ್’ನ ಮನೆಯೊಂದರಲ್ಲಿ ಕಳ್ಳತನ

Dandeli ಜಾನುವಾರು ಅಕ್ರಮ ಸಾಗಾಟ: ವಾಹನ ಸಹಿತ ಜಾನುವಾರು ವಶ

Dandeli ಜಾನುವಾರು ಅಕ್ರಮ ಸಾಗಾಟ: ಪೊಲೀಸರಿಂದ ವಾಹನ, ಜಾನುವಾರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.