ಸಹಕಾರಿ ಸಂಘದಲ್ಲಿ ವಂಚನೆ ಪ್ರಕರಣ: ಸೊಸೈಟಿಯಲ್ಲಿ ಶೋಧ ಕಾರ್ಯ
Team Udayavani, Dec 24, 2022, 1:01 AM IST
ಉಡುಪಿ: ಠೇವಣಿ ಸ್ವೀಕರಿಸಿ ಸಾರ್ವಜನಿಕರಿಗೆ ವಂಚಿಸಿದ ಆರೋಪ ಹೊಂದಿರುವ ಇಲ್ಲಿನ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿಗೆ ಶುಕ್ರವಾರ ಪೊಲೀಸರು ದಾಳಿ ನಡೆಸಿ ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಕೋಟ್ಯಂತರ ರೂಪಾಯಿ ವಂಚಿಸಿ ತಲೆಮರೆಸಿಕೊಂಡಿರುವ ಬಿ.ವಿ. ಲಕ್ಷ್ಮೀನಾರಾಯಣ ವಿರುದ್ಧ ಹಲ ವಾರು ಮಂದಿ ದೂರು ನೀಡಿರುವ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಪೊಲೀಸ್ ಇಲಾಖೆಯ ಸೆನ್ ವಿಭಾಗದ ಪೊಲೀಸರು ಸೊಸೈಟಿಯ ಬಾಗಿಲನ್ನು ತೆರೆದು ಅಲ್ಲಿರುವ ಕಚೇರಿಯ ಮೂಲ ದಾಖಲೆಗಳನ್ನು ಹಾಗೂ ಕಂಪ್ಯೂಟರ್ನಲ್ಲಿರುವ ಎಲ್ಲ ಮಾಹಿತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದುವರೆಗೆ ಹಲವರು ದೂರು ನೀಡಿದ್ದು, 70 ಲಕ್ಷ ರೂಪಾಯಿಯಷ್ಟು ವಂಚಿಸಿದ್ದಾಗಿ ತಿಳಿಸಲಾಗಿದೆ. ಇನ್ನೂ ಕೆಲವರು ದಾಖಲೆ ಸಹಿತ ಇನ್ನಷ್ಟೇ ದೂರು ನೀಡಬೇಕಿದೆ. ಅದಾದ ಬಳಿಕ ಸ್ಪಷ್ಟ ಚಿತ್ರಣ ದೊರಕಲು ಸಾಧ್ಯವೆಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು