ಜನಾರ್ದನ ರೆಡ್ಡಿ ಬುದ್ಧಿವಂತ, ಅನುಭವಸ್ಥ: ಸಚಿವ ಶ್ರೀರಾಮುಲು
Team Udayavani, Dec 26, 2022, 10:00 PM IST
ಬೆಳಗಾವಿ: ಜನಾರ್ದನ ರೆಡ್ಡಿ ಬುದ್ಧಿವಂತ ಹಾಗೂ ಅನುಭವಿಯಾಗಿದ್ದಾರೆ. ಅವರ ಪ್ರಾಣ ಸ್ನೇಹಿತನಾಗಿ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರವಾಗಿ ಹಿರಿಯ ನಾಯಕರು ಹಾಗೂ ಮುಖ್ಯಮಂತ್ರಿ ಜತೆ ಮಾತನಾಡಿದ್ದೆ. ಅವಕಾಶ ಸಿಕ್ಕರೆ ಮುಂದೆಯೂ ಮಾತನಾಡುತ್ತೇನೆ ಎಂದರು.
ಸದ್ಯ ನಾನು ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸಚಿವನಾಗಿದ್ದೇನೆ. ನಮ್ಮ ಉದ್ದೇಶ ಕಾಂಗ್ರೆಸ್ ಮುಕ್ತ ರಾಜ್ಯ ಆಗಬೇಕು ಎಂಬುದಾಗಿದೆ. 2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ. ನಾನು ಸಿದ್ಧಾಂತದ ಮೇಲೆ ರಾಜಕಾರಣ ಮಾಡುತ್ತೇನೆ ಎಂದು ಹೇಳಿದರು.