Video: ಕ್ಯಾಂಪಸ್ ತಡೆಬೇಲಿಯಿಂದ ಹಾರಿ ವಾಹನದ ಮೇಲೆ ದಾಳಿ ನಡೆಸಿದ ಚಿರತೆ; 15 ಮಂದಿಗೆ ಗಾಯ
ಅರಣ್ಯಾಧಿಕಾರಿಯೊಬ್ಬರು ಸೆರೆಹಿಡಿದಿರುವ ವಿಡಿಯೋ ಮೈ ಜುಮ್ಮೆನ್ನಿಸುವಂತಿದೆ.
Team Udayavani, Dec 27, 2022, 12:47 PM IST
ಅಸ್ಸಾಂ: ಮಳೆಕಾಡು ಸಂಶೋಧನಾ ಕೇಂದ್ರ(ಆರ್ ಎಫ್ ಆರ್ ಐ)ದ ವಸತಿಗೃಹದ ಕ್ಯಾಂಪಸ್ ಆವರಣದ ತಡೆಬೇಲಿಯಿಂದ ಚಿರತೆಯೊಂದು ಜಿಗಿದು ಸರಣಿ ದಾಳಿ ನಡೆಸಿದ ಪ್ರಕರಣದಲ್ಲಿ ಮೂವರು ಅರಣ್ಯಾಧಿಕಾರಿಗಳು ಸೇರಿದಂತೆ ಕನಿಷ್ಠ 15 ಮಂದಿ ಗಾಯಗೊಂಡಿರುವ ಘಟನೆ ಅಸ್ಸಾಂನ ಜೋಹ್ರಾತ್ ನಲ್ಲಿ ನಡೆದಿದೆ.
ಇದನ್ನೂ ಓದಿ:ರಾಹುಲ್ ಗಾಂಧಿಯನ್ನು ‘ಶ್ರೀರಾಮ’ನಿಗೆ ಹೋಲಿಸಿದ ಸಲ್ಮಾನ್ ಖುರ್ಷಿದ್
ಕಳೆದ 24ಗಂಟೆಯಲ್ಲಿ ಅರಣ್ಯಾಧಿಕಾರಿಗಳು ಮತ್ತು ಮಳೆಕಾಡು ಸಂಶೋಧನಾ ಕೇಂದ್ರದ ನಿವಾಸಿಗಳ ಮೇಲೆ ಚಿರತೆ ಮಹಿಳೆಯರು ಮತ್ತು ಮಕ್ಕಳ ಮೇಲೆ ದಾಳಿ ನಡೆಸಿತ್ತು ಎಂದು ವರದಿ ತಿಳಿಸಿದೆ.
ಅರಣ್ಯಾಧಿಕಾರಿಯೊಬ್ಬರು ಸೆರೆಹಿಡಿದಿರುವ ವಿಡಿಯೋ ಮೈ ಜುಮ್ಮೆನ್ನಿಸುವಂತಿದೆ. ಆರ್ ಎಫ್ ಆರ್ ಐ ಕ್ಯಾಂಪಸ್ ನಲ್ಲಿ ಚಿರತೆ ಅಡ್ಡಾಡುತ್ತಿದ್ದು, ಏಕಾಏಕಿ ತಡೆಬೇಲಿಯಿಂದ ಹಾರಿ ಕಾರಿನ ಮೇಲೆ ದಾಳಿ ನಡೆಸಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
At least 13 people including 3 forest staff injured in a #Leopard attack in #Assam‘s #Jorhat district. pic.twitter.com/xyQQ7D1UUC
— Hemanta Kumar Nath (@hemantakrnath) December 26, 2022
ಆರ್ ಎಫ್ ಆರ್ ಐ ಜೋಹ್ರಾತ್ ಹೊರವಲಯದಲ್ಲಿ ದಟ್ಟ ಕಾಡುಗಳಿಂದ ಆವೃತ್ತವಾಗಿದ್ದು, ಚಿರತೆ ಅಲ್ಲಿಂದ ಕ್ಯಾಂಪಸ್ ನೊಳಕ್ಕೆ ನುಗ್ಗಿರುವುದಾಗಿ ಶಂಕಿಸಲಾಗಿದೆ. ಚಿರತೆಯನ್ನು ಸೆರೆಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿರತೆ ಕ್ಯಾಂಪಸ್ ನೊಳಗೆ ಇದ್ದಿರುವುದರಿಂದ ನಿವಾಸಿಗಳು ಮನೆಯೊಳಗೆ ಇರುವಂತೆ ಅಧಿಕಾರಿಗಳು ಸೂಚಿಸಿರುವುದಾಗಿ ವರದಿ ತಿಳಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: 45 ದಿನದಲ್ಲಿ 300 ಐಸ್ಕ್ರೀಂ ಆರ್ಡರ್ ಮಾಡಿದ!
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?