ದೇಶದಲ್ಲೇ ರಾಜ್ಯದ ಪೊಲೀಸರು ಉತ್ತಮ ಎನಿಸಿದ್ದಾರೆ:  ಸಿಎಂ ಬೊಮ್ಮಾಯಿ


Team Udayavani, Dec 28, 2022, 2:19 PM IST

tdy-15

ಬೆಳಗಾವಿ: ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಕೃತ್ಯಗಳು ನಡೆದ ಸಂದರ್ಭದಲ್ಲಿ ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ನಡೆಸಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ಬೆಳಗಾವಿ ನಗರ ಪೊಲೀಸ್‌ ಆಯುಕ್ತರ ನೂತನ ಕಚೇರಿಯ ಕಟ್ಟಡವನ್ನು ಬುಧವಾರ ಉದ್ಘಾಟಸಿ ಮಾತನಾಡಿದ ಅವರು,ಬೆಳಗಾವಿ ಸೇರಿದಂತೆ ಎಲ್ಲಾ ಜಿಲ್ಲೆಗಳ ಪೊಲೀಸರು ಜನರೊಂದಿಗೆ ನಿಕಟ ಸಂಪರ್ಕ ಇಟ್ಟುಕೊಳ್ಳಬೇಕು. ಪೊಲೀಸ್ ಇಲಾಖೆ ಜನರ ಸಹಕಾರದಿಂದ ಶಾಂತಿ ಸುವ್ಯವಸ್ಥಿತ ಕಾಪಾಡಬೇಕು. ಪೊಲೀಸರಿಗೆ ಗಡಿ ಭಾಗದ ಸವಾಲುಗಳು ಭಿನ್ನವಾಗಿವೆ ಎಂದರು.

ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆದ ಸಂದರ್ಭದಲ್ಲಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ‌ 24 ಗಂಟೆಯ ಒಳಗೆ ಅಪರಾಧಿಗಳನ್ನು ಬಂಧಿಸಿದ್ದಾರೆ. ದೇಶದಲ್ಲೇ ರಾಜ್ಯದ ಪೊಲೀಸರು ಉತ್ತಮ ಎನಿಸಿದ್ದಾರೆ ಎಂದು ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯ ಪೊಲೀಸ್ ವಸತಿ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಈ ವರ್ಷವೇ 2500 ಮನೆಗಳು ನಿರ್ಮಾಣವನ್ನು ಪೂರ್ಣಗೊಳಿಸಲಾಗುವುದು. ಸರ್ಕಾರದ ವತಿಯಿಂದ ಒಂದು 116 ಪೊಲೀಸ್ ಠಾಣೆಗಳನ್ನು  ನಿರ್ಮಿಸಲಾಗಿದೆ. ಎಲ್ಲಾ ಪೊಲೀಸ್ ಠಾಣಗಳು ಉದ್ಘಾಟನೆ ಹಂತದಲ್ಲಿ. ಪೊಲೀಸ್ ಸಾರಿಗೆ ವ್ಯವಸ್ಥೆ ಬಲಪಡಿಸಲು ರೂ.80 ಕೋಟಿಗಳನ್ನು ನೀಡಲಾಗಿದೆ. 300ಕ್ಕೂ ಅಧಿಕ ವಾಹನಗಳನ್ನು ಖರೀದಿ ಮಾಡಲಾಗಿದೆ.  ವಿವಿಧ ಹಂತದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೂ ವಾಹನಗಳನ್ನು ಒದಗಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದರು.

ಡಿ.ವೈ.ಎಸ್ ಹಂತ ಅಧಿಕಾರಿಗಳಿಗೆ ಸ್ಕಾರ್ಪಿಯೋ ವಾಹನ ನೀಡಲಾಗುವುದು. ರಾಜ್ಯ ಪೊಲೀಸ್ ವಸತಿ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ದಕ್ಷತೆ ಯಿಂದ ಕೆಲಸ ಮಾಡುತ್ತಿದೆ ಎಂದರು.

ಇದನ್ನೂ ಓದಿ:ಧೋನಿ ಮಗಳಿಗೆ ವಿಶೇಷ ಗಿಫ್ಟ್ ನೀಡಿದ ವಿಶ್ವಕಪ್ ಹೀರೋ ಲಿಯೋನೆಲ್ ಮೆಸ್ಸಿ

ನಾನು ಗೃಹ ಮಂತ್ರಿಯಾಗಿದ್ದಾಗ ಆರಂಭವಾಗಿದ್ದ ಕಟ್ಟಡಗಳು ಒಂದು ವರ್ಷದಲ್ಲಿ ಪೂರ್ಣಗೊಂಡಿವೆ. ಇವುಗಳನ್ನು ಮುಖ್ಯಮಂತ್ರಿಯಾದ ಬಳಿಕ ಉದ್ಘಾಟಿಸಿದ್ದೇನೆ. ನಿಗಮದ ವತಿಯಿಂದ ರಾಜ್ಯದಲ್ಲಿ ಎರಡು ಬಂಧಿಖಾನೆಗಳನ್ನು ನಿರ್ಮಾಣ ಮಾಡಲಾಗುವುದು. ವಿಧಿ ವಿಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಲಾಗಿದ್ದು. ಅಗತ್ಯ ತಜ್ಞರ ನೇಮಕಾತಿ ಮಾಡಲಾಗಿದೆ. ಹಿಂದೆ ವಿದಿ ವಿಜ್ಞಾನ ವರದಿಗಳು ಕೈಸೇರಲು ಮೂರು ತಿಂಗಳು ಹಿಡಿಯುತ್ತಿತ್ತು. ಸದ್ಯ 30 ದಿನಗಳ ವರದಿಗಳನ್ನು ನೀಡಲಾಗುತ್ತಿದೆ. 15 ದಿನದಲ್ಲಿ ವಿದಿ ವಿಜ್ಞಾನ ವರದಿ ನೀಡಲು ಕ್ರಮ ವಹಿಸುವುದಾಗಿ ಹೇಳಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ ಪೊಲೀಸರು ಗಡಿ ವಿಚಾರದಂತಹ ಭಾವನಾತ್ಮಕ ವಿಚಾರಗಳಲ್ಲಿ ಸಹನೆಯಿಂದ ಕಾರ್ಯ ನಿರ್ವಹಿಸಿದ್ದಾರೆ. ಪೊಲೀಸ್ ಇಲಾಖೆ ಗೃಹ ನಿರ್ಮಾಣದ ಜೊತೆಗೆ ನೂತನ ಪೊಲೀಸ್ ಠಾಣೆ, ಎಫ್‌ಎಸ್‌ಎಲ್ ಲ್ಯಾಬ್ ನಿರ್ಮಾಣ, ವಾಹನ ಹಾಗೂ ನೂತನ ಶಸ್ತ್ರಾಸ್ತ್ರ ಖರೀದಿಸಲು ಮುಖ್ಯಮಂತ್ರಿಗಳು ಅಗತ್ಯ ಅನುದಾನ ನೀಡಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಅನಿಲ್ ಎಸ್‌. ಬೆನಕೆ ಬೆಳಗಾವಿ ಪೊಲೀಸರ ಬಗ್ಗೆ ಅಪಾರ ಪ್ರೀತಿಯಿದೆ. ಕೊರನಾ ಕಾಲದಲ್ಲಿ ಪೊಲೀಸರು ಕೊರೋನಾ ಎದುರಿಸಿಯೂ ಜನರ ಸೇವೆ ಮಾಡಿದ್ದಾರೆ. ಬೆಳಗಾವಿ ನಗರದ ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಿದ್ದಾರೆ ಎಂದರು.          ಬ್ರಿಟಿಷ್ ಕಾಲೋನಿಯಲ್ಲಿ ಪೊಲೀಸರಿಗೆ ಗೃಹಗಳನ್ನು ನಿರ್ಮಿಸಬೇಕು. ಬಂದೊಬಸ್ತ್ ಆಗಮಿಸುವ ಪೊಲೀಸರಿಗೆ ನಗರದಲ್ಲಿ ವಿಶ್ರಾಂತಿ ಕೊಠಡಿ ನಿರ್ಮಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ, ಸಂಸದೆ ಮಂಗಲ ಸುರೇಶ ಅಂಗಡಿ ಶಾಸಕ ಮಹೇಶ ಕುಮಠಳ್ಳಿ, ಒಳಾಡಳಿತ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್, ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ನಿಗಮ ವ್ಯವಸ್ಥಾಪಕ ನಿರ್ದೇಶಕರು ಅರುಣ ಜೆ. ಚಕ್ರವರ್ತಿ, ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ. ಜಿ. ಹಿರೇಮಠ, ಉತ್ತರ ಬೆಳಗಾವಿ ಆರಕ್ಷಕ ಮಹಾನಿರೀಕ್ಷಕ ಎನ್. ಸತೀಶ್ ಕುಮಾರ್, ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ, ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ  ಡಾ. ಸಂಜೀವ ಎಂ. ಪಾಟೀಲ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.