ದೇವಾಲಯಗಳ ಸಮಗ್ರ ಸಮೀಕ್ಷೆ ಕಾಟಾಚಾರವಾಗದಿರಲಿ


Team Udayavani, Dec 29, 2022, 6:00 AM IST

ದೇವಾಲಯಗಳ ಸಮಗ್ರ ಸಮೀಕ್ಷೆ ಕಾಟಾಚಾರವಾಗದಿರಲಿ

ರಾಜ್ಯದ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಅಧೀನದಲ್ಲಿರುವ ಎಲ್ಲ ದೇವಸ್ಥಾನಗಳ ಸಮಗ್ರ ಸಮೀಕ್ಷೆ ನಡೆಸಲು ಇಲಾಖೆ ತೀರ್ಮಾನಿಸಿದೆ. ಈ ದೇವಸ್ಥಾನಗಳ ಆಸ್ತಿ ಸಂರಕ್ಷಣೆಯ ಜತೆಯಲ್ಲಿ ಇವುಗಳ ಬಗೆಗಿನ ಸಮಗ್ರ ಮಾಹಿತಿ ಕಲೆ ಹಾಕುವ ಉದ್ದೇಶದಿಂದ ವಾಸ್ತವಿಕ ಸಮೀಕ್ಷೆಯನ್ನು ನಡೆಸಲು ರಾಜ್ಯ ಧಾರ್ಮಿಕ ಪರಿಷತ್‌ನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಇಲಾಖೆಯ ಅಧೀನದಲ್ಲಿ ಎ, ಬಿ ಮತ್ತು ಸಿ ದರ್ಜೆ ಸಹಿತ 35,000ಕ್ಕೂ ಅಧಿಕ ದೇವಸ್ಥಾನಗಳಿವೆ. ಈ ಪೈಕಿ ಬಹುತೇಕ ದೇವಸ್ಥಾನಗಳ ಆಸ್ತಿ ಸಹಿತ ಅವುಗಳ ಸ್ಥಿತಿಗತಿಯ ಕುರಿತಂತೆ ಕನಿಷ್ಠ ಮಾಹಿತಿಯೂ ಇಲಾಖೆಗೆ ಇಲ್ಲವಾಗಿದೆ. ಈ ದೇವಸ್ಥಾನಗಳಿಗೆ ಸೇರಿದ ಆಸ್ತಿಗಳು ಅತಿಕ್ರಮಣಗೊಂಡಿರುವ ಅಥವಾ ಪರಾಭಾರೆಯಾಗಿರುವ ಆರೋಪಗಳೂ ಇವೆ. ಅಷ್ಟು ಮಾತ್ರವಲ್ಲದೆ ಈ ದೇವಸ್ಥಾನಗಳ ಮೇಲೆ ಹಕ್ಕು ಸ್ಥಾಪಿಸಲು ವೈಯಕ್ತಿಕವಾಗಿ ಪ್ರಯತ್ನಗಳೂ ನಡೆಯುತ್ತಿವೆ. ಇವೆಲ್ಲದರ ಹಿನ್ನೆಲೆಯಲ್ಲಿ ದೇವಸ್ಥಾನಗಳ ವಾಸ್ತವಿಕ ಸಮೀಕ್ಷೆ ನಡೆಸಲು ಇಲಾಖೆ ಮುಂದಾಗಿರುವುದು ಸ್ವಾಗತಾರ್ಹ.

ಇದೇ ವೇಳೆ ಈ ದೇವಸ್ಥಾನಗಳ ಸಮೀಕ್ಷೆಗೆ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಪರಿಷತ್‌ ಚಿಂತನೆ ನಡೆಸಿದೆ. ಇಲಾಖೆಯ ಅಡಿಯಲ್ಲಿ ಬರುವ ಪ್ರತಿಯೊಂದೂ ದೇವಸ್ಥಾನಗಳ ಬಗೆಗಿನ ಮಾಹಿತಿಯನ್ನು ಕಲೆಹಾಕಲಾಗುವುದು, ದೇವಸ್ಥಾನಕ್ಕೆ ಸೇರಿದ ಆಸ್ತಿ, ಅದರ ಫೋಟೋ, ಹಾಲಿ ಸ್ಥಿತಿಗತಿ, ನಿರ್ವಹಣ ವ್ಯವಸ್ಥೆ, ದೇಗುಲಕ್ಕೆ ಬರುವ ಆದಾಯ ಸಹಿತ ಪ್ರತಿಯೊಂದೂ ಮಾಹಿತಿಯನ್ನು ಕ್ರೋಡೀಕರಿಸಿ ಎಲ್ಲವನ್ನು ಡಿಜಿಟಲ್‌ ರೂಪದಲ್ಲಿ ದಾಖಲಿಸಲಾಗುವುದು. ಈ ದಾಖಲೆಗಳು ಸಾರ್ವಜನಿಕರಿಗೂ ಲಭಿಸುವ ವ್ಯವಸ್ಥೆಯನ್ನು ಮಾಡುವ ಪ್ರಸ್ತಾವವನ್ನು ಕೂಡ ಧಾರ್ಮಿಕ ಪರಿಷತ್‌ ಇಲಾಖೆಯ ಮುಂದಿಟ್ಟಿದೆ. ಸಮೀಕ್ಷೆಗಾಗಿ ಸೂಕ್ತ ಅನುದಾನ ನೀಡುವಂತೆ  ಸಿ ಎಂಗೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಧಾರ್ಮಿಕ ಪರಿಷತ್‌ ಕೈಗೊಂಡಿರುವ ಈ ನಿರ್ಧಾರಕ್ಕೆ ಸರಕಾರದಿಂದ ಒಪ್ಪಿಗೆ ಲಭಿಸುವ ನಿರೀಕ್ಷೆಯನ್ನು ಇಲಾಖೆಯ ಸಚಿವರು ವ್ಯಕ್ತಪಡಿಸಿ­ದ್ದಾರೆ.

ಇಂತಹ ಒಂದು ಪ್ರಸ್ತಾವ ಕಳೆದ ಕೆಲವಾರು ವರ್ಷಗಳಿಂದ ಇಲಾಖೆಯ ಮುಂದಿತ್ತಾದರೂ ಈ ಬಗ್ಗೆ ಯಾವುದೇ ನಿರ್ಧಾರವನ್ನು ಕೈಗೊಳ್ಳಲು ಇಲಾಖೆಗಾಗಲೀ ಸರಕಾರಕ್ಕಾಗಲೀ ಸಾಧ್ಯವಾಗಿರಲಿಲ್ಲ. ಇದೀಗ ಧಾರ್ಮಿಕ ಪರಿಷತ್‌ ದೇವಸ್ಥಾನಗಳ ಸಮಗ್ರ ಮತ್ತು ವಾಸ್ತವಿಕ ಸಮೀಕ್ಷೆಗೆ ನಿರ್ಣಯ ಕೈಗೊಂಡಿರುವುದರಿಂದ ಇದನ್ನು ಕಾರ್ಯರೂಪಕ್ಕೆ ತರಲು ಸರಕಾರಕ್ಕೆ ಕಷ್ಟಸಾಧ್ಯವಾಗಲಾರದು. ಕೆಲವೊಂದಿಷ್ಟು ದೇವ ಸ್ಥಾನಗಳಲ್ಲಿ ದಿನನಿತ್ಯದ ಪೂಜೆಯೂ ನಡೆಯುತ್ತಿಲ್ಲ. ಮತ್ತೆ ಕೆಲವೆಡೆ ಅರ್ಚಕರನ್ನು ನೇಮಿಸಲಾಗಿದ್ದರೂ ಸಮರ್ಪಕವಾಗಿ ಪೂಜೆಗಳು ನಡೆಯುತ್ತಿಲ್ಲ. ಇವೆಲ್ಲವನ್ನು ಗಮನಿಸಿದಾಗ ಸರಕಾರ ದೇವಸ್ಥಾನಗಳ ಸಮಗ್ರ ಸಮೀಕ್ಷೆಗೆ ಮುಂದಾಗಿರುವುದು ಸೂಕ್ತವೇ. ಆದರೆ ಸಮೀಕ್ಷೆ ಕಾಟಾಚಾರಕ್ಕೆ ಸೀಮಿತವಾಗದೆ ಬಲು ಪುರಾತನ ದೇವಾಲಯಗಳ ಸಂರಕ್ಷಣೆಯ ತನ್ನ ಉದ್ದೇಶವನ್ನು ಈಡೇರಿಸುವಂತಿರಬೇಕು. ಸಮೀಕ್ಷೆಯ ವೇಳೆ ದೇಗುಲದ ಪರಿಸರ, ವಿನ್ಯಾಸಕ್ಕೆ ಯಾವುದೇ ಭಂಗ ಬಾರದಂತೆ ಮತ್ತು ಅದೆಷ್ಟೋ ದಶಕಗಳಿಂದ ಆಯಾಯ ಊರಿನ ಭಕ್ತರು ಶ್ರದ್ಧಾಭಕ್ತಿಗಳಿಂದ ಆರಾಧಿಸಿಕೊಂಡು ಬಂದ ದೇಗುಲಗಳ ಪಾವಿತ್ರ್ಯತೆಗೆ ಚ್ಯುತಿಯಾಗದಂತೆಯೂ ಸರಕಾರ ಎಚ್ಚರಿಕೆ ವಹಿಸಬೇಕು.

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.