ಮೇಲ್ಮನೆಯಲ್ಲಿ ಧರ್ಮದ ವಾಕ್ಸಮರ


Team Udayavani, Dec 29, 2022, 6:35 AM IST

ಮೇಲ್ಮನೆಯಲ್ಲಿ ಧರ್ಮದ ವಾಕ್ಸಮರ

ಬೆಳಗಾವಿ: ರಾಜ್ಯಗಳಲ್ಲಿ ಈಚೆಗೆ ನಡೆದ ಕೊಲೆ ಪ್ರಕರಣಗಳ ಮೇಲಿನ ಚರ್ಚೆಯು ಆಡಳಿತ ಪಕ್ಷ ಮತ್ತು ವಿಪಕ್ಷದ ನಡುವಿನ “ಧರ್ಮದ ವಾಕ್ಸಮರ’ಕ್ಕೆ ಮೇಲ್ಮನೆ ಸಾಕ್ಷಿಯಾಯಿತು.

ಆಯಾ ಪಕ್ಷಗಳ ಆಡಳಿತದಲ್ಲಿ ನಡೆದ ಕೊಲೆ ಪ್ರಕರಣಗಳನ್ನು ಪ್ರಸ್ತಾವಿಸಿದ ಎರಡೂ ಪಕ್ಷಗಳ ನಾಯಕರ ಆರೋಪ- ಪ್ರತ್ಯಾರೋಪಗಳು ತಾರಕಕ್ಕೇರಿ ಕೊನೆಗೆ ಸದನವನ್ನು ಗುರುವಾರಕ್ಕೆ ಮುಂದೂಡಲಾಯಿತು.

ನಿಯಮ 330ರ ಅಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತ ಚರ್ಚೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌, ಬುದ್ಧಿವಂತರ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಇತ್ತೀಚಿನ ಬೆಳವಣಿಗೆಗಳಿಂದ ಧರ್ಮದ ಅಮಲಿನಲ್ಲಿ ತೇಲುತ್ತಿದೆ. ಒಂದು ಕೋಮಿನ ಆರೋಪಿಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಿದರೆ, ಅಂಥದ್ದೇ ಪ್ರಕರಣಗಳಲ್ಲಿ ಮತ್ತೂಂದು ಕೋಮಿನವರ ವಿರುದ್ಧ ದುರ್ಬಲ ಸೆಕ್ಷನ್‌ಗಳನ್ನು ಹಾಕಲಾಗುತ್ತದೆ. ಸರಕಾರದ ಈ ರೀತಿಯ ಧೋರಣೆಗಳಿಂದಲೇ ಈ ಕೊಲೆಗಳಾಗುತ್ತಿವೆ ಎಂದು ನೇರ ಆರೋಪ ಮಾಡಿದರು.

ಟಿಪ್ಪು ಜಯಂತಿಗೆ ಎಷ್ಟು ಹತ್ಯೆಯಾದವು?
ಇದಕ್ಕೆ ತಿರುಗೇಟು ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಧರ್ಮದ ಆಧಾರದಲ್ಲಿ ಕೇಸುಗಳನ್ನು ಹಾಕುವುದಿಲ್ಲ; ಅಪರಾಧದ ಆಧಾರದಲ್ಲಿ ಪ್ರಕರಣ ದಾಖಲಿಸಲಾಗುತ್ತದೆ. ಈ ರಾಜ್ಯದಲ್ಲಿ ಎಲ್ಲ ಧರ್ಮದವರಿಗೂ ಒಂದೇ ಕಾನೂನು. ಪೊಲೀಸರು ನಾವು-ನೀವು ಹೇಳಿದಂತೆ ಪ್ರಕರಣ ದಾಖಲಿಸುವುದಿಲ್ಲ. ಅಷ್ಟಕ್ಕೂ ಪಿಎಫ್ಐ ಇಷ್ಟು ಬೆಳೆಯಲು ಯಾರು ಕಾರಣ? ಟಿಪ್ಪು ಜಯಂತಿಯಿಂದ ಎಷ್ಟು ಕೊಲೆಗಳಾದವು ಎಂದು ತರಾಟೆಗೆ ತೆಗೆದುಕೊಂಡರು.

ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಿದ್ದರಾಮಯ್ಯ ಅವಧಿಯಲ್ಲಿ ಹಿಂದೂಗಳ ಸರಣಿ ಕೊಲೆಗಳಾದವು. ಅವರು ಯಾವೊಂದು ಕುಟುಂಬಕ್ಕೆ ಸಾಂತ್ವನ ಹೇಳುವುದು ಒತ್ತಟ್ಟಿಗಿರಲಿ, ಹತ್ಯೆಯಾದ ಎಂದು ಘೋಷಿಸಲೂ ಇಲ್ಲ. ಪರಿಹಾರ ದೂರದ ಮಾತು. 175 ಪ್ರಕರಣಗಳನ್ನು ಹಿಂ ಪಡೆದು, 1,600 ಆರೋಪಿಗಳನ್ನು ಬಿಡುಗಡೆ ಮಾಡಲಾಯಿತು.

ಅವರೆಲ್ಲರೂ ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ವಿಪಕ್ಷದ ಮುಖ್ಯ ಸಚೇತಕ ಪ್ರಕಾಶ್‌ ರಾಠೊಡ್‌ ಮಾತನಾಡಿ, ಚುನಾವಣೆ ದೃಷ್ಟಿಯಿಂದ ಬಿಜೆಪಿ ಸರಕಾರ ಮತ್ತು ತನ್ನ ಅಂಗ ಸಂಸ್ಥೆಗಳಿಂದ ಈ ಕೊಲೆ ಪ್ರಕರಣಗಳು ಮತ್ತು ಪಕ್ಷಪಾತಿ ಧೋರಣೆ ಆಗುತ್ತಿದೆ. ಇದು ಮುಂದೆಯೂ ಆಗಲಿದೆ ಎಂದರು.

ಬಿಜೆಪಿಯ ಭಾರತಿ ಶೆಟ್ಟಿ ಮಾತನಾಡಿ, ಅಪರಾಧ ಹಿಂದೂ ಮಾಡಿದರೂ ತಪ್ಪು, ಮುಸ್ಲಿಂ ಮಾಡಿದರೂ ತಪ್ಪು. ಆ ಕೃತ್ಯಗಳನ್ನು ಪೋಷಣೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು. ನಜೀರ್‌ ಅಹಮ್ಮದ್‌ ಮಾತನಾಡಿ, ಒಂದು ಸಮಾಜವನ್ನು ಗುರಿಯಾಗಿಟ್ಟುಕೊಂಡು ಟೀಕಿಸುವುದು ಎಷ್ಟು ಸರಿ? ಯಾವ ಸಂದೇಶ ನಾವು ಸಮಾಜಕ್ಕೆ ನೀಡುತ್ತಿದ್ದೇವೆ? ಎರಡೂ ಪಕ್ಷಗಳ ಸದಸ್ಯರ ಸಭೆ ಕರೆದು ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಸಲಹೆ ಮಾಡಿದರು.

ನಿಮ್ಮದು ರೌಡಿ ರಾಜ್ಯವಾಗಿತ್ತೇ?
ರಾಜ್ಯದಲ್ಲಿ 2017 ಚುನಾವಣ ವರ್ಷ. ಆಗ ಒಂದೇ ವರ್ಷದಲ್ಲಿ 30 ಸಾವಿರ ಜನರನ್ನು ರೌಡಿ ಪಟ್ಟಿಯಲ್ಲಿ ಸೇರಿಸಲಾಯಿತು. ಅದರಲ್ಲಿ ಬಹುತೇಕರು ಹಿಂದೂಗಳೇ ಆಗಿದ್ದರು. ಹಾಗೆ ಮಾಡಲು ನಿಮಗೆ (ವಿಪಕ್ಷ ಕಾಂಗ್ರೆಸ್‌ಗೆ) ನಾಚಿಕೆ ಆಗುವುದಿಲ್ಲವೇ?’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತರಾಟೆಗೆ ತೆಗೆದುಕೊಂಡರು.
ಚುನಾವಣೆ ವರ್ಷ ಆಗಿದ್ದರಿಂದಲೇ ಆ ವರ್ಷ ಅಷ್ಟೊಂದು ಜನರನ್ನು ರೌಡಿಗಳ ಲಿಸ್ಟ್‌ಗೆ ಸೇರಿಸಲಾಯಿತು. ಮರ್ಯಾದಸ್ಥರನ್ನೆಲ್ಲ ಪಟ್ಟಿಗೆ ಸೇರಿಸಲಾಯಿತು. ಹಾಗಾದರೆ ನಿಮ್ಮದು ರೌಡಿ ರಾಜ್ಯವಾಗಿತ್ತಾ ಎಂದು ಕೇಳಿದರು.
ಯಾವುದೇ ನೋಟಿಸ್‌ ನೀಡಿದರೂ ಉತ್ತರ ನೀಡಲು ನಾವು ಸಿದ್ಧ. ಯಾವ ಚರ್ಚೆಗೂ ತಯಾರಿದ್ದೇವೆ ಎಂದೂ ಸಚಿವರು ಸವಾಲು ಹಾಕಿದರು.

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.