ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಸಚಿವ ಶ್ರೀರಾಮುಲು
ಸ್ವಾಮೀಜಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಚೇತರಿಕೆಯಾಗುತ್ತಿದೆ...
Team Udayavani, Dec 29, 2022, 9:51 PM IST
ವಿಜಯಪುರ : ಸಾರಿಗೆ ಸಚಿವ ಶ್ರೀರಾಮುಲು ಗುರುವಾರ ರಾತ್ರಿ ವಿಜಯಪುರ ನಗರಕ್ಕೆ ಆಗಮಿಸಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿ ಸಿದ್ಧೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದರು.
ವಿಜಯಪುರ ನಗರದ ಜ್ಞಾನಯೋಗಾಶ್ರಮದ ಮೊದಲ ಮಹಡಿಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಿದ್ಧೇಶ್ವರ ಶ್ರೀಗಳನ್ನು ಭೇಟಿ ಮಾಡಿದ ಸಚಿವ ಶ್ರೀರಾಮುಲು, ಶ್ರೀಗಳು ಯೋಗಕ್ಷೇಮ ವಿಚಾರಿಸಿ, ಶ್ರೀಗಳು ಶೀಘ್ರ ಗುಣಮುಖರಾಗುವಂತೆ ಆಶಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮುಲು, ಸಿದ್ಧೇಶ್ವರ ಶ್ರೀಗಳು ಅನಾರೋಗ್ಯದ ವಿಷಯ ತಿಳಿದು ಪೂಜ್ಯರ ಆರೋಗ್ಯ ವಿಚಾರಿಸಲು ಆಗಮಿಸಿದ್ದ ನಾನು, ಶ್ರೀಗಳ ದರ್ಶನ ಪಡೆದಿದ್ದೇನೆ ಎಂದರು.
ಅಲ್ಲದೇ ಶ್ರೀಗಳಿಗೆ ಚಿಕಿತ್ಸೆ ನೀಡುತ್ತುರುವ ವೈದ್ಯರ ಜೊತೆಗೆ ಮಾತನಾಡಿದ್ದು, ಶ್ರೀಗಳು ಆರೋಗ್ಯವಾಗಿದ್ದಾರೆ.ವೈದ್ಯರ ಪ್ರಕಾರ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಸಿದ್ಧೇಶ್ವರ ಶ್ರೀಗಳ ಭೇಟಿಯ ಬಳಿಕ ಶ್ರೀಗಳ ಆರೋಗ್ಯದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಮಾಹಿತಿ ನೀಡಿ, ಕಿರಿಯ ಶ್ರೀಗಳ ಜೊತೆಗೆ ಮಾತನಾಡಿಸಿದ್ದೇನೆ ಎಂದರು.
ಕೇಂದ್ರ ಸಚಿವ ಅಮಿತ್ ಶಾ ಅವರು ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ಅಮಿತ್ ಶಾ ಅವರು ಹಿಂದಿರುಗಿದ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸಿದ್ಧೇಶ್ವರ ಶ್ರೀಗಳ ಆರೋಗ್ಯ ವಿಚಿಸಿ, ದರ್ಶನ ಪಡೆಯಲು ವಿಜಯಪುರಕ್ಕೆ ಆಗಮಿಸುವುದಾಗಿ ಹೇಳಿದ್ದಾರೆ ಎಂದರು.
ಕಳೆದ 20 ವರ್ಷಗಳಿಂದ ನಾನು ಸಿದ್ದೇಶ್ವರ ಶ್ರೀಗಳು ಹಾಗೂ ಆಶ್ರಮದ ಶಿಷ್ಯನಾಗಿ ಭಕ್ತನಾಗಿ ಶ್ರೀಗಳ ಸಂಪರ್ಕದಲ್ಲಿದ್ದೇನೆ. ಶ್ರೀಗಳೊಂದಿಗೆ ಅನೇಕ ವಿಚಾರ ಹಂಚಿಕೊಂಡಿದ್ದೇನೆ ಆಶೀರ್ವಾದ ಪಡೆದುಕೊಳ್ಳುತ್ತಾ ಬಂದಿದ್ದೇನೆ ಎಂದರು.
ಸ್ವಾಮೀಜಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಚೇತರಿಕೆಯಾಗುತ್ತಿದೆ. ಶ್ರೀಗಳು ಆಶ್ರಮದಲ್ಲೇ ಇರುವುದಾಗಿ ಹೇಳಿದ್ದರಿಂದ ಆಶ್ರಮದಲ್ಲೇ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ