ಪಣಜಿ: ವಿಶ್ವದಲ್ಲೇ ಜುವಾರಿ ಅತ್ಯಾಧುನಿಕ ಸೇತುವೆ; ಸಚಿವ ನಿತಿನ್ ಗಡ್ಕರಿ
Team Udayavani, Dec 30, 2022, 1:17 PM IST
ಪಣಜಿ: ಗೋವಾದ ಜುವಾರಿ ಸೇತುವೆಯು ಅತ್ಯಾಧುನಿಕ ಸೇತುವೆಯಾಗಿದೆ. ಈ ಸೇತುವೆ ಎಷ್ಟು ಸುಂದರವಾಗಿದೆಯೆಂದರೆ ದೇಶದಲ್ಲಿ ಮಾತ್ರವಲ್ಲದೆ ವಿಶ್ವದಲ್ಲೇ ಇದು ಅತ್ಯಾಧುನಿಕ ಎಂದು ಹೆಸರಿಸಲ್ಪಡುತ್ತದೆ ಎಂದು ಸಚಿವ ನಿತಿನ್ ಗಡ್ಕರಿ ಹೇಳಿದರು.
ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಾವು 2024 ರ ಅಂತ್ಯದ ಮೊದಲು ಅಮೆರಿಕದ ರಸ್ತೆಗಳಿಗಿಂತ ಭಾರತದ ರಸ್ತೆಗಳು ಉತ್ತಮವಾಗಿರುತ್ತವೆ ಎಂದು ನಿರ್ಧರಿಸಿದ್ದೇವೆ. ಮುಂಬರುವ ದಿನಗಳಲ್ಲಿ ಗೋವಾದ ಮೂಲಸೌಕರ್ಯವೂ ಸುಧಾರಿಸಬೇಕು. ಇನ್ನು ಹಲವು ವರ್ಷಗಳ ಕಾಲ ಗೋವಾದ ಜನತೆ ಈ ಸೇತುವೆಯ ಬಗ್ಗೆ ಹೆಮ್ಮೆ ಪಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗೋವಾದ ಜುವಾರಿ ನದಿಗೆ ನೂತನವಾಗಿ ನಿರ್ಮಿಸಲಾಗಿರುವ ಜುವಾರಿ ಸೇತುವೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಈ ಸೇತುವೆಯ ಭೂಮಿಪೂಜೆಯನ್ನು ನಾನು ಮತ್ತು ಮನೋಹರ್ ಪರಿಕ್ಕರ್ ಮಾಡಿದ್ದೆವು. ಗಂಗೆಯಲ್ಲಿ 13 ಸೇತುವೆಗಳು, ಬ್ರಹ್ಮಪುತ್ರದಲ್ಲಿ 8 ಸೇತುವೆಗಳು, ಅದೂ ಕೂಡ ಹೊಸ ತಂತ್ರಜ್ಞಾನದ ಪ್ರಕಾರ ನಿರ್ಮಿಸುತ್ತಿದ್ದೇವೆ ಎಂದರು.
ಈ ಜುವಾರಿ ಸೇತುವೆ ಬಾಂದ್ರಾ-ವರ್ಲಿ ಸೇತುವೆಗಿಂತ ದೊಡ್ಡದಾಗಿದೆ. ಸಮಾಲೋಚಕರು, ಗುತ್ತಿಗೆದಾರರು, ಇಂಜಿನಿಯರ್ ಗಳು ಈ ಅನೇಕ ತೊಂದರೆಗಳನ್ನು ನಿವಾರಿಸಿ ಈ ಸೇತುವೆಯನ್ನು ನಿರ್ಮಿಸಿದ್ದಾರೆ. ಈ ಸೇತುವೆಯ ಮೇಲೆ ರಿವಾಲ್ವಿಂಗ್ ರೆಸ್ಟೋರೆಂಟ್ ಮತ್ತು ಆರ್ಟ್ ಗ್ಯಾಲರಿ ನಿರ್ಮಿಸುವುದು ನನ್ನ ಕನಸಾಗಿತ್ತು. ಈ ಸೇತುವೆಗೆ ಎರಡು ಬಾರಿ ಟೆಂಡರ್ ಕರೆದರೂ ಯಾರೂ ಬಂದಿಲ್ಲ. ಹಾಗಾಗಿ ನಾನೇ, ಗೋವಾ ಮುಖ್ಯಮಂತ್ರಿ ಸಾವಂತ್, ಲೋಕೋಪಯೋಗಿ ಸಚಿವ ನೀಲೇಶ್ ಕಬ್ರಾಲ್ ಒಟ್ಟಾಗಿ ದಾರಿ ಕಂಡುಕೊಳ್ಳುತ್ತೇವೆ. ಅದನ್ನು ಹೇಗೆ ಸಾಧ್ಯವಾಗಿಸುವುದು ಎಂದು ದಾರಿ ಕಂಡುಕೊಳ್ಳುತ್ತೇವೆ ಎಂದು ಹೇಳಿದರು.
ಸೇತುವೆಯ ಕಾಂಕ್ರೀಟ್ ಬೇಸ್ ಅನ್ನು ಸೇತುವೆಯ ಮೇಲ್ಬಾಗ ನಿರ್ಮಾಣಕ್ಕೆ ಸೂಕ್ತವಾಗಿ ನಿರ್ಮಿಸಲಾಗಿದೆ ಇಲ್ಲಿ ರೆಸ್ಟೊರೆಂಟ್ ನಿರ್ಮಿಸುವ ಯೋಜನೆಯಿದ್ದು, ಈ ರೆಸ್ಟೋರೆಂಟ್ನಲ್ಲಿ ಕ್ಯಾಪ್ಸುಲ್ ಲಿಫ್ಟ್ ನೊಂದಿಗೆ ನೀರಿನಿಂದ ಮೇಲಕ್ಕೆ ಹೋಗುವ ಮೂಲಕ ಗೋವಾದ ಭಕ್ಷ್ಯಗಳನ್ನು ಆನಂದಿಸಬಹುದು. ಕಲಾ ಗ್ಯಾಲರಿಗಳು, ಗೋವಾದ ಆಹಾರ, ಸಂಸ್ಕೃತಿಯನ್ನು ಅನುಭವಿಸಬಹುದು. ಈ ಸೇತುವೆಯು ಜಾಗತಿಕ ಪ್ರವಾಸಿ ಆಕರ್ಷಣೆಯಾಗಲಿದೆ. ಸೇತುವೆಯ ಮೇಲಿನ ಗೋಪುರದಿಂದ ಇಡೀ ಗೋವಾ ಕಾಣಿಸುವಂತೆ ಉತ್ತಮ ವ್ಯವಸ್ಥೆ ಮಾಡಬಹುದು. ಪ್ರತಿ ವರ್ಷ 1200 ವಿಶೇಷ ವಿಮಾನಗಳು ಗೋವಾಕ್ಕೆ ಬರುತ್ತವೆ. ಹಾಗಾಗಿ ಈ ಆರ್ಟ್ ಗ್ಯಾಲರಿ, ಈ ಮೊಬೈಲ್ ರೆಸ್ಟೊರೆಂಟ್ ಪೂರ್ಣಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ ನಾವು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾತನಾಡಿ, ಜುವಾರಿ ಸೇತುವೆ ದೇಶದ ಅತಿ ದೊಡ್ಡ ಸೇತುವೆ ಎಂಬ ಹೆಗ್ಗಳಿಕೆ ನಮಗಿದೆ. ತಲಾ ಶೇ.45ರಷ್ಟು ಹೆಚ್ಚು ಕಾರುಗಳನ್ನು ಹೊಂದಿರುವ ದೇಶದ ಮೊದಲ ರಾಜ್ಯ ಗೋವಾ. ಆದ್ದರಿಂದ ಪತ್ರಾದೇವಿಯಿಂದ ದೊಡಾಮಾರ್ಗಕ್ಕೆ, ಕೇರಿಯಿಂದ ಮೋಲೆಂಗೆ, ಮೋಲೆಂನಿಂದ ಪೋಳೆಗೆ ಪಶ್ಚಿಮ ಘಟ್ಟಗಳ ಮೂಲಕ ಸಂಪರ್ಕ ಕಲ್ಪಿಸುವ ವೃತ್ತಾಕಾರದ ರಸ್ತೆ ನಿರ್ಮಾಂಕ್ಕೆ ಅನುಮೋದನೆ ನೀಡುವಂತೆ ಮನವಿ ಮಾಡುತ್ತೇವೆ. ಬಾಂಬೋಲಿಯಿಂದ ವೆರ್ಣಾವರೆಗೆ ಕಾಮಗಾರಿ ನಡೆಯುತ್ತಿದ್ದ ವೇಳೆ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಆ ಕಾರ್ಮಿಕರ ಕುಟುಂಬಗಳಿಗೆ ಗೋವಾ ಸರ್ಕಾರದಿಂದ 2 ಲಕ್ಷ ರೂ. ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಘೋಷಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಶ್ರೀಪಾದ ನಾಯ್ಕ ಸೇರಿದಂತೆ ರಾಜ್ಯ ಸಚಿವರು, ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ