ಹುಣಸೂರು: ಸಾಲ ಬಾಧೆಯಿಂದ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ
Team Udayavani, Dec 30, 2022, 9:54 PM IST
ಹುಣಸೂರು : ಸಾಲದ ಬಾಧೆಯಿಂದ ಬಳಲುತ್ತಿದ್ದ ಯುವ ರೈತನೋರ್ವ ಕಾಳಿನ ಕ್ರಿಮಿನಾಶಕ ಮಾತ್ರೆಯನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನೇರಳಕುಪ್ಪೆಯಲ್ಲಿ ನಡೆದಿದೆ.
ಗ್ರಾಮದ ಸ್ವಾಮೀಗೌಡರ ಪುತ್ರ ಮಹೇಶ(46) ಆತ್ಮಹತ್ಯೆ ಮಾಡಿಕೊಂಡ ರೈತ.ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಮೃತ ಮಹೇಶ ಹೆಸರಿನಲ್ಲಿ 3.07 ಗುಂಟೆ ಭೂಮಿ ಇದ್ದು, ಈತ 4 ವರ್ಷಗಳ ಹಿಂದೆ ಫೈನಾನ್ಸ್ ನಲ್ಲಿ 10 ಲಕ್ಷ ಟ್ರ್ಯಾಕ್ಟರ್ ಸಾಲ ಹಾಗೂ ಹೆಗ್ಗಂದೂರು ಸಹಕಾರ ಬ್ಯಾಂಕಿನಲ್ಲಿ1.30 ಲಕ್ಷರೂ ಹಾಗೂ ೫ಲಕ್ಷ ಕೈಸಾಲ ಮಾಡಿ ಶುಂಠಿ ಬೆಳೆಯನ್ನು ಬೆಳೆದಿದ್ದರು.
ಈ ಬಾರಿ ಭಾರೀ ಮಳೆಯಿಂದಾಗಿ ಶುಂಠಿ ಬೆಳೆ ನಷ್ಟ ಉಂಟಾಗಿ, ಸಾಲ ತೀರಿಸಲಾಗದೆ ಪರಿತಪಿಸುತ್ತಿದ್ದರು. ಇವರು ಮನನೊಂದು ಗುರುವಾರ ರಾತ್ರಿ 12 ರ ವೇಳೆ ತಮ್ಮ ಮನೆಯಲ್ಲಿ ಕಾಳಿನ ಕ್ರಿಮಿನಾಶಕ ಮಾತ್ರೆ ಸೇವಿಸಿ, ಅಸ್ವಸ್ಥಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಪಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಪುತ್ರ ಅಶ್ವತ್ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಶುಕ್ರವಾರ ಅಂತ್ಯಕ್ರಿಯೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?