ಬ್ಲಡ್‌ ಕ್ಯಾನ್ಸರನ್ನೇ ಗೆದ್ದು ಮನೆಗೆ ಮರಳಿದ ಬಾಲಕಿ


Team Udayavani, Jan 1, 2023, 4:07 PM IST

tdy-18

ಕೋಲಾರ: 6 ವರ್ಷದ ಬಾಲಕಿಯೊಬ್ಬಳು ಕಳೆದ 2019ರಲ್ಲಿ ಬ್ಲಡ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸುದ್ದಿ ತಿಳಿದ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದ ಗೌಡ ಖುದ್ದು ಮಗುವಿನ ಮನೆಗೆ ಹೋಗಿ ಚಿಕಿತ್ಸೆಗೆ 1.5 ಲಕ್ಷ ನೆರವು ಒದಗಿಸಿದ್ದರಿಂದಾಗಿ ಆಕೆ ಇದೀಗ ಆರೋಗ್ಯವಂತಳಾಗಿ ಹೊಸ ಬದುಕಿನತ್ತ ಹೆಜ್ಜೆ ಹಾಕಿ ದ್ದು, ಜೀವ ಉಳಿಸಿದ ನೆರವಿಗೆ ಬ್ಯಾಂಕಿಗೆ ಆಗಮಿಸಿ ಧನ್ಯವಾದ ಸಲ್ಲಿಸಿದ ಘಟನೆ ಶನಿವಾರ ನಡೆಯಿತು.

ತಾಲೂಕಿನ ಬೆತ್ತನಿ ಗ್ರಾಮದ ಸುಮಂತ್‌ ಕುಮಾರ್‌,ಚೈತ್ರಾ ದಂಪತಿಗಳ ಈ ಮುದ್ದಾದ 6 ವರ್ಷದ ಬಾಲಕಿ ಕಾರುಣ್ಯ ಮಾರಕ ಬ್ಲಡ್‌ ಕ್ಯಾನ್ಸರ್‌ ನಿಂದ ಬಳಲುತ್ತಿದ್ದು, ತಲೆಯಲ್ಲಿ ಪೂರ್ಣ ಕೂದಲು ಉದುರಿಹೋಗಿತ್ತಲ್ಲದೇ ರೋಗ ಪ್ರಥಮ ಹಂತದಲ್ಲಿರುವುದರಿಂದ ಕೂಡಲೇ ಚಿಕಿತ್ಸೆ ನೀಡಿದಲ್ಲಿ ಗುಣವಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಖಾಸಗಿ ಶಾಲೆಯೊಂದರ ವಾಹನ ಚಾಲಕರಾಗಿದ್ದ ಸುಮಂತ್‌ ಕುಮಾರ್‌, ಸಾಲ ಮಾಡಿ 1.5 ಲಕ್ಷಕ್ಕೂ ಹೆಚ್ಚಿನ ಹಣವನ್ನು ಚಿಕಿತ್ಸೆಗೆ ಖರ್ಚು ಮಾಡಿದ್ದರು. ಉಳಿದಂತೆ ಸೆಂಟ್‌ಜಾನ್ಸ್‌ ಆಸ್ಪತ್ರೆಯ ವೈದ್ಯರ ಪ್ರಕಾರ ಚಿಕಿತ್ಸೆಗೆ 7.5 ಲಕ್ಷ ರೂಗಳ ಅಗತ್ಯವಿದ್ದು, ಈ ಹಣ ಸಂಗ್ರಹಿಸಲಾಗದೇ ಆತಂಕದಲ್ಲಿದ್ದರು.

ಗೋವಿಂದಗೌಡರಿಂದ ಮಾನವೀಯ ನೆರವು: ಮುದ್ದಾದ ಈ ಬಾಲಕಿ ಅನಾರೋಗ್ಯದ ಕುರಿತು ತಿಳಿದ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರು ಪೋಷಕರನ್ನು ಕರೆಸಿಕೊಂಡು ವಿವರ ಪಡೆದು ತಕ್ಷಣವೇ 50 ಸಾವಿರ ನೆರವು ನೀಡಿ, ಉಳಿದ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಒದಗಿಸುವುದಾಗಿ ತಿಳಿಸಿದ್ದಲ್ಲದೇ ಆಕೆಯ ಚಿಕಿತ್ಸೆಗೆ ಉಳಿದ ಹಣ ನೀಡಿ ಧೈರ್ಯ ತುಂಬಿದ್ದರು.

ಚಿಂತೆ ಮಾಡದಿರಿ, ಇಂತಹ ಮುದ್ದಾದ ಮಗುವನ್ನು ದೇವರು ಉಳಿಸಿಕೊಡುತ್ತಾನೆ, ಚಿಕಿತ್ಸೆಗೆ ಹಣದ ಕುರಿತು ಚಿಂತೆ ಮಾಡದಿರಿ, ಚಿಕಿತ್ಸೆ ಆರಂಭವಾಗುತ್ತಿದ್ದಂತೆ ಅಗತ್ಯ ನೆರವು ಪೂರ್ತಿ ನಾನೇ ಒದಗಿಸುವುದಾಗಿ ಭರವಸೆ ನೀಡಿ ಅದರಂತೆ ಚಿಕಿತ್ಸೆಗೆ ಅಗತ್ಯವಾದ ನೆರವನ್ನು ಮೂರು ಬಾರಿ ಒದಗಿಸಿದ್ದರು. ಗೋವಿಂದಗೌಡರ ಹೃದಯವಂತಿಕೆ ಹಾಗೂ ಹಾರೈಕೆಯಿಂದ ಇದೀಗ ಬ್ಲಡ್‌ ಕ್ಯಾನ್ಸರ್‌ ಅನ್ನು ಗೆದ್ದು ಚೇತರಿಸಿಕೊಂಡಿರುವ ಈ ಬಾಲಕಿ ಕಾರುಣ್ಯ ತಾನು ಬದುಕುಳಿಯಲು ನೆರವಾದ ಬ್ಯಾಲಹಳ್ಳಿ ಗೋವಿಂದಗೌಡರನ್ನು ತಮ್ಮ ಪೋಷಕರೊಂದಿಗೆ ಶನಿವಾರ ಭೇಟಿಯಾಗಿ ಧನ್ಯವಾದ ಸಲ್ಲಿಸಿದಳು.

ಈ ಮಗುವಿಗೆ ಇದೀಗ ಎದೆ ಬಳಿ ಕಿಮೋಪೋರ್ಟ್‌ ಅಳವಡಿಸಿದ್ದು, ಅದಕ್ಕಾಗಿ ಇನ್ನೂ 1.8 ಲಕ್ಷ ನೆರವಿನ ಅಗತ್ಯವಿದೆ ಎಂದು ಪೋಷಕರು ತಿಳಿಸಿದ್ದಾರೆ. ಈ ಚಿಕಿತ್ಸೆಗೂ ನೆರವಾಗುವ ಭರವಸೆ ನೀಡಿದ ಬ್ಯಾಲಹಳ್ಳಿ ಗೋವಿಂದಗೌಡರು ಆತ್ಮಸ್ಥೈರ್ಯ ತುಂಬಿದ್ದಾರೆ.

ಟಾಪ್ ನ್ಯೂಸ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮಹಮದ್ ಝಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.