ಭರ್ಜರಿ ಆರಂಭ! ವಾಹನೋದ್ಯಮದಲ್ಲಿ ಶೇ. 23ರಷ್ಟು ಹೆಚ್ಚು ಮಾರಾಟ

 ಜಿಎಸ್‌ಟಿ, ಕಾರ್ಪೊರೇಟ್‌ ತೆರಿಗೆ ಸಂಗ್ರಹದಲ್ಲಿ ಏರಿಕೆ

Team Udayavani, Jan 2, 2023, 7:10 AM IST

ಭರ್ಜರಿ ಆರಂಭ! ವಾಹನೋದ್ಯಮದಲ್ಲಿ ಶೇ. 23ರಷ್ಟು ಹೆಚ್ಚು ಮಾರಾಟ

ಹೊಸದಿಲ್ಲಿ /ಬೆಂಗಳೂರು: ಹೊಸ ವರ್ಷದ ಮೊದಲ ದಿನವೇ ಮಾರುಕಟ್ಟೆ ಕ್ಷೇತ್ರದಲ್ಲಿ ಶುಭ ಸುದ್ದಿ ಹೊರಬಿದ್ದಿದೆ. ಕಳೆದ ವರ್ಷ ವಾಹನಗಳ ಮಾರಾಟ ಚೆನ್ನಾಗಿ ನಡೆದಿದ್ದು ಶೇ. 23ರಷ್ಟು ಹೆಚ್ಚು ವಾಹನಗಳು ಮಾರಾಟವಾಗಿವೆ. ಹಾಗೆಯೇ ಜಿಎಸ್‌ಟಿ ಮತ್ತು ಕಾರ್ಪೊರೇಟ್‌ ತೆರಿಗೆ ಸಂಗ್ರಹವೂ ಹೆಚ್ಚಾಗಿದೆ. 2023ರಲ್ಲಿ ಆರ್ಥಿಕ ಹಿಂಜರಿತ ಉಂಟಾಗಬಹುದು ಎಂಬ ಭೀತಿಯ ನಡುವೆ ಮಾರುಕಟ್ಟೆಯ ಈ ಶುಭ ಸಮಾಚಾರಗಳು ಸಮಾಧಾನ ತಂದಿವೆ.

2022ರಲ್ಲಿ ವೈಯಕ್ತಿಕ ವಾಹನಗಳ ಮಾರಾಟ ಉತ್ತಮವಾಗಿ ನಡೆದಿದೆ. ಕೊರೊನೋತ್ತರದಲ್ಲಿ ವ್ಯಾಪಾರ-ವಹಿವಾಟು ಚೇತರಿಸಿಕೊಂಡಿದೆ ಎಂಬುದಕ್ಕೆ ಇದು ಉತ್ತಮ ನಿದರ್ಶನ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳುತ್ತಿದ್ದಾರೆ. ಕಳೆದ ವರ್ಷ ಒಟ್ಟು 37.93 ಲಕ್ಷ ಕಾರುಗಳು ಮಾರಾಟವಾಗಿದ್ದು, 2021ಕ್ಕೆ ಹೋಲಿಸಿದರೆ ಶೇ. 23ರಷ್ಟು ಹೆಚ್ಚಳವಾಗಿದೆ. ವಿಶೇಷವೆಂದರೆ  ಕ್ಯಾಲೆಂಡರ್‌ ವರ್ಷವೊಂದರಲ್ಲಿ ಈ ಪ್ರಮಾಣದ ಮಾರಾಟ ಇದೇ ಮೊದಲು ಎಂದು ಮಾರುತಿ ಸುಜುಕಿ ಇಂಡಿಯಾದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸೆಮಿಕಂಡಕ್ಟರ್‌ ಚಿಪ್‌ ಕೊರತೆಯ ನಡುವೆಯೂ ಈ ಪ್ರಮಾಣದಲ್ಲಿ ಮಾರಾಟವಾಗಿರುವುದು ದೊಡ್ಡ ಸಾಧನೆ.

ಜಿಎಸ್‌ಟಿ ಸಂಗ್ರಹ ಶೇ. 15 ಏರಿಕೆ
ಡಿಸೆಂಬರ್‌ ತಿಂಗಳಲ್ಲಿ ದೇಶದ ಜಿಎಸ್‌ಟಿ ಸಂಗ್ರಹ ಏರಿದೆ. 2021ರ ಇದೇ ಅವಧಿಗೆ ಹೋಲಿಸಿದರೆ ಇದು ಶೇ. 15ರಷ್ಟು ಅಧಿಕ. 2022ರ ಡಿಸೆಂಬರ್‌ನಲ್ಲಿ ಸಂಗ್ರಹವಾದ ದೇಶದ ಸರಕು ಮತ್ತು ಸೇವಾ ತೆರಿಗೆ 1.49 ಲಕ್ಷ ಕೋಟಿ ರೂ.ಗಳು.

ಹಬ್ಬದ ಋತು ಮತ್ತು ಆರ್ಥಿಕ ಪುನಶ್ಚೇತನಕ್ಕೆ ಮಾರುಕಟ್ಟೆ ಸ್ಪಂದಿಸಿರುವ ಪರಿಣಾಮ ಹೆಚ್ಚು ಜಿಎಸ್‌ಟಿ ಸಂಗ್ರಹವಾಗಿದೆ ಎಂದು ಸರಕಾರದ ದಾಖಲೆಗಳು ಹೇಳಿವೆ. ನವೆಂಬರ್‌ ನಲ್ಲಿ 1.46 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು.

ಕಾರ್ಪೊರೇಟ್‌ ತೆರಿಗೆ ಹೆಚ್ಚಳ
ದೇಶದಲ್ಲಿ ಕಾರ್ಪೊರೇಟ್‌ ತೆರಿಗೆ ಸಂಗ್ರಹವೂ ಏರಿದೆ. ಎರಡು ವರ್ಷಗಳ ಬಳಿಕ ದೇಶದ ಜಿಡಿಪಿಯ ಶೇ. 3ರಷ್ಟನ್ನು ಮೀರಿದೆ. 2021-22ನೇ ಸಾಲಿನಲ್ಲಿ ಸಂಗ್ರಹವಾದ ಕಾರ್ಪೊರೇಟ್‌ ತೆರಿಗೆ 7.12 ಲಕ್ಷ ಕೋಟಿ ರೂ. ಸದ್ಯದ ಮಾರುಕಟ್ಟೆ ಲೆಕ್ಕಾಚಾರದಲ್ಲಿ ಜಿಡಿಪಿಯ ಮೌಲ್ಯ 236.64 ಲಕ್ಷ ಕೋಟಿ ರೂ.ಗಳಾಗಿದೆ. ಹೀಗಾಗಿ 7.12 ಲಕ್ಷ ಕೋಟಿ ರೂ. ಎಂದರೆ ಶೇ. 3ರಷ್ಟನ್ನು ದಾಟುತ್ತದೆ. ಇದು 2 ವರ್ಷಗಳ ದಾಖಲೆಯಾಗಿದೆ.

ಆದರೆ 2018-19ರಲ್ಲಿ 6.63 ಲಕ್ಷ ಕೋಟಿ ರೂ. ಕಾರ್ಪೊರೇಟ್‌ ತೆರಿಗೆ ಸಂಗ್ರಹವಾಗಿದ್ದು, ಆಗಿನ ಜಿಡಿಪಿ ಮೌಲ್ಯದ ಪ್ರಕಾರ ಇದು ಶೇ.3.51ರಷ್ಟಾಗಿತ್ತು. ಸದ್ಯಕ್ಕೆ ಇದುವೇ ದಾಖಲೆಯಾಗಿದೆ.

ಅಬಕಾರಿ ಇಲಾಖೆಗೆ ಭರ್ಜರಿ ಆದಾಯ
ಬೆಂಗಳೂರು: ಡಿ. 23ರಿಂದ ಡಿ. 31ರ ವರೆಗೆ 1,262 ಕೋಟಿ ರೂ. ಮೌಲ್ಯದ 20.66 ಲಕ್ಷ ಲೀ. ಐಎಂಎಲ್‌ ಮದ್ಯ ಮಾರಾಟವಾಗಿದೆ. ಈ ಪೈಕಿ 15.4 ಲಕ್ಷ ಲೀಟರ್‌ ಬಿಯರ್‌ ಮಾರಾಟವಾಗಿ ದಾಖಲೆ ನಿರ್ಮಿಸಿದೆ.

ಕರ್ನಾಟಕಕ್ಕೆ 2ನೇ ಸ್ಥಾನ
ಅತ್ಯಂತ ಹೆಚ್ಚು ಜಿಎಸ್‌ಟಿ ಸಂಗ್ರಹವಾದ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಡಿಸೆಂಬರ್‌ ತಿಂಗಳಲ್ಲಿ 23,598 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಕರ್ನಾಟಕದಲ್ಲಿ 10,061 ಕೋ.ರೂ. ಜಿಎಸ್‌ಟಿ ಸಂಗ್ರಹವಾಗಿದೆ. 2021ರ ಡಿಸೆಂಬರ್‌ಗೆ ಹೋಲಿಸಿದರೆ ಮಹಾರಾಷ್ಟ್ರದಲ್ಲಿ ಶೇ. 20, ಕರ್ನಾಟಕದಲ್ಲಿ ಶೇ. 21ರಷ್ಟು ಹೆಚ್ಚಳವಾಗಿದೆ. ಮೂರನೇ ಸ್ಥಾನದಲ್ಲಿ ಗುಜರಾತ್‌ ಇದ್ದು, ಇಲ್ಲಿ 9,238 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ.

ಟಾಪ್ ನ್ಯೂಸ್

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.