ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ: ರೈತನಿಗೆ ಗಂಭೀರ ಗಾಯ
Team Udayavani, Jan 2, 2023, 5:53 PM IST
ಗುಂಡ್ಲುಪೇಟೆ(ಚಾಮರಾಜನಗರ): ರೈತರೊಬ್ಬರ ಮೇಲೆ ಒಂಟಿ ಸಲಗ ದಾಳಿ ನಡೆಸಿದ ಪರಿಣಾಮ ರೈತನಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್ ಝೋನ್ ವ್ಯಾಪ್ತಿಯ ಬೆಟ್ಟದಮಾದಹಳ್ಳಿ ಗ್ರಾಮದ ರೈತರ ಜಮೀನೊಂದರಲ್ಲಿ ನಡೆದಿದೆ.
ಬೆಟ್ಟದಮಾದಹಳ್ಳಿ ಗ್ರಾಮದ ರೈತ ದೇವರಾಜಪ್ಪ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಸಲಗ ಏಕಾಏಕಿ ದಾಳಿ ನಡೆಸಿದೆ. ಘಟನೆಯಿಂದ ರೈತನ ಬೆನ್ನಿಗೆ ತೀವ್ರತರವಾದ ಗಾಯಗಳಾಗಿದೆ ಎನ್ನಲಾಗುತ್ತಿದ್ದು, ಗಾಯಾಳುವನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಆನೆಯು ಬೆಟ್ಟದಮಾದಹಳ್ಳಿ ವ್ಯಾಪ್ತಿಯ ರೈತರ ಜಮೀನಿನ ಬಾಳೆ ಬೆಳೆ, ಹುರುಳಿ ಸೇರಿದಂತೆ ಇನ್ನಿತರ ಕಡೆ ಲಗ್ಗೆಯಿಟ್ಟಿದ್ದು, ಹಲವು ಜಮೀನುಗಳಲ್ಲಿ ಅಳವಡಿಕೆ ಮಾಡಿದ್ದ ತಂತಿ ಬೇಲಿಯನ್ನು ತುಳಿದು ಹಾಕಿದೆ ಎನ್ನಲಾಗಿದೆ. ಒಂಟಿ ಸಲಗ ಬಾಳೆ ತೋಟದಲ್ಲಿ ಬೀಡು ಬಿಟ್ಟ ಹಿನ್ನಲೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಇದನ್ನೂ ಓದಿ: ಪಣಜಿ: ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೇಂದ್ರಕ್ಕೆ ಗೋವಾ ಸರಕಾರ ಒತ್ತಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ
49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ
JDS MP ಪ್ರಜ್ವಲ್ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ
ಪರಿಷತ್ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ
Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ
MUST WATCH
ಹೊಸ ಸೇರ್ಪಡೆ
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ
Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ
Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ
ಬರಲಿದೆ ಮತ್ತೊಂದು ಸ್ಕ್ಯಾಮ್ ಸಿರೀಸ್: ʼಸ್ಕ್ಯಾಮ್ 2010: ಸುಬ್ರತಾ ರಾಯ್ʼ ಅನೌನ್ಸ್