ಬೀಫ್, ಮದ್ಯ ಸೇವಿಸಲು ನಿರಾಕರಿಸಿದವನನ್ನು ವಿವಸ್ತ್ರಗೊಳಿಸಿ ಥಳಿತ
Team Udayavani, Jan 3, 2023, 1:03 PM IST
ರಾಂಚಿ: ಮದ್ಯ ಹಾಗೂ ದನದ ಮಾಂಸವನ್ನು ಸೇವಿಸಿಲು ನಿರಾಕರಿಸಿದ ಕಾರಣ ಐದು ಜನರ ಗುಂಪೊಂದು ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಾರ್ಖಂಡ್ನ ಸಾಹಿಬ್ಗಂಜ್ನ ರಾಧಾನಗರ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಚಂದನ್ ರವಿದಾಸ್ ಥಳಿತಕ್ಕೆ ಒಳಗಾದ ವ್ಯಕ್ತಿ. ಚಂದನ್ ಶನಿವಾರ ರಾತ್ರಿ ಅಂಗಡಿ ಹೋಗಿದ್ದರು. ಅಲ್ಲೇ ಪಕ್ಕದಲ್ಲಿ ನಾಲ್ಕೈದು ಮಂದಿ ಕುಡಿಯುತ್ತಾ, ದನದ ಮಾಂಸವನ್ನು ಸೇವಿಸುತ್ತಿದ್ದರು. ಇದನ್ನು ನೋಡಿದ ಚಂದನ್ ಸಿಟ್ಟಿನಿಂದ ಗುಂಪಿನತ್ತ ನೋಡಿದ್ದಾರೆ. ಇದೇ ಕಾರಣಕ್ಕೆ ಆ ಗುಂಪು ಚಂದನ್ ಬಳಿ ಬಂದು ಆತನಿಗೆ ಬಲವಂತವಾಗಿ ಮದ್ಯ ಕುಡಿಸಲು ಯತ್ನಿಸಿದ್ದಾರೆ. ಇದಾದ ಬಳಿಕ ಬಲವಂತವಾಗಿ ದನದ ಮಾಂಸವನ್ನು ತಿನ್ನಿಸಲು ಬಂದಿದ್ದಾರೆ ಎಂದು ದೂರಿನಲ್ಲಿ ಚಂದನ್ ಆರೋಪಿಸಿದ್ದಾರೆ.
ಚಂದನ್ ಅವರ ಬಟ್ಟೆಯನ್ನು ತೆಗೆದು ವಿವಸ್ತ್ರಗೊಳಿಸಿದ್ದಾರೆ. ಆತನ ಮೇಲೆ ಕಲ್ಲು ಎಸೆದು, ಆತನಿಂದ ಮೊಬೈಲ್ ಹಾಗೂ 8000 ಸಾವಿರ ನಗದನ್ನು ಕಸಿದುಕೊಂಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.
ಮಿಥುನ್ ಶೇಕ್ ಹಾಗೂ ಇತರ ನಾಲ್ವರ ವಿರುದ್ದ ಚಂದನ್ ದೂರು ನೀಡಿದ್ದು, ದೂರು ದಾಖಲಿಸಿಕೊಂಡು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ
ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್… ಇಬ್ಬರು ಉಗ್ರರು ಹತ
Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ
Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ
ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ
MUST WATCH
ಹೊಸ ಸೇರ್ಪಡೆ
Kannada Cinema; ‘ಗಾಡ್ ಪ್ರಾಮಿಸ್’ ಮುಹೂರ್ತ ಮಾಡಿದ್ರು
Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ
Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ
ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ
Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು