ಮಧ್ಯ, ಕಿತ್ತೂರು ಕರ್ನಾಟಕ ಗೆಲುವಿಗೆ ಕಾರ್ಯತಂತ್ರ

ಬೆಂಗಳೂರಿನಲ್ಲಿ 20, ಬೆಳಗಾವಿಯಲ್ಲಿ 15 ಸ್ಥಾನ ಗೆಲ್ಲಲು ಬಿಜೆಪಿ ನೀಲನಕ್ಷೆ

Team Udayavani, Jan 4, 2023, 7:15 AM IST

ಮಧ್ಯ, ಕಿತ್ತೂರು ಕರ್ನಾಟಕ ಗೆಲುವಿಗೆ ಕಾರ್ಯತಂತ್ರ

ಬೆಂಗಳೂರು: ರಾಜ್ಯದಲ್ಲಿ ಸ್ವಂತ ಶಕ್ತಿಯ ಮೇಲೆ ಅಧಿಕಾರ ಹಿಡಿಯಲು ಹಳೇ ಮೈಸೂರು ಒಳಗೊಂಡ ಮಧ್ಯ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ.

ಮಧ್ಯ ಕರ್ನಾಟಕ ಭಾಗದಲ್ಲಿ ಒಕ್ಕಲಿಗ ನಾಯಕರಿಗೆ ಕಿತ್ತೂರು ಕರ್ನಾಟಕ ಭಾಗದಲ್ಲಿ ಲಿಂಗಾಯಿತ ನಾಯಕರಿಗೆ ಹೆಚ್ಚು ಸ್ಥಾನ ಗೆಲ್ಲುವ ಗುರಿ ನೀಡಿದ್ದು, ತತ್‌ಕ್ಷಣದಿಂದ ಕಾರ್ಯಪ್ರವೃತ್ತರಾಗಲು ಸೂಚಿಸಲಾಗಿದೆ.

ಅಮಿತ್‌ ಶಾ ಇತ್ತೀಚೆಗೆ ರಾಜ್ಯ ಪ್ರವಾಸ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ರಾಜ್ಯ ಹಾಗೂ ರಾಷ್ಟ್ರೀಯ ಬಿಜೆಪಿ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಮಧ್ಯ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ಸೇರ್ಪಡೆಗೂ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಐವರು ಹಾಲಿ ಶಾಸಕರ ಜತೆ ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದು ಯಾವುದೇ ಸಂದರ್ಭದಲ್ಲಿ ಬಿಜೆಪಿ ಸೇರುವ ಸಾಧ್ಯತೆಯಿದೆ. ಎಲ್ಲರಿಗೂ ಬಿಜೆಪಿ ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನ ನೀಡುವ ಭರವಸೆ ಸಹ ನೀಡಲಾಗಿದೆ ಎಂದು ಹೇಳಲಾಗಿದೆ.

ಬೆಂಗಳೂರಿನ 28 ಕ್ಷೇತ್ರಗಳ ಪೈಕಿ ಪ್ರಸ್ತುತ ಬಿಜೆಪಿ 15 ಸ್ಥಾನ ಗೆದ್ದಿದ್ದು, ಇನ್ನೂ ಐದು ಸ್ಥಾನ ಗೆಲ್ಲಲೇಬೇಕೆಂದು ಸೂಚಿಸಲಾಗಿದೆ. ಉಳಿದಂತೆ ಬೆಂಗಳೂರು ಬಿಟ್ಟು ಮಧ್ಯ ಕರ್ನಾಟಕ ಭಾಗದಲ್ಲಿ 35 ಸ್ಥಾನ ಗೆಲ್ಲುವ ಗುರಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಬಿಟ್ಟರೆ ಹೆಚ್ಚು ವಿಧಾನಸಭೆ ಕ್ಷೇತ್ರ ಒಳಗೊಂಡ ಬೆಳಗಾವಿಯಲ್ಲೂ ಈ ಬಾರಿ ಹೆಚ್ಚು ಸ್ಥಾನ ಗೆಲ್ಲಲು ಲಿಂಗಾಯಿತ ನಾಯಕರಿಗೆ ಸೂಚಿಸಲಾಗಿದ್ದು, ಅಲ್ಲಿ ಹದಿನೆಂಟು ಕ್ಷೇತ್ರಗಳ ಪೈಕಿ ಹಾಲಿ ಇರುವ ಹದಿಮೂರು ಸ್ಥಾನಗಳನ್ನು 15ಕ್ಕೆ ಏರಿಸಬೇಕೆಂದು ತಿಳಿಸಲಾಗಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಕೈಗೊಂಡಿರುವ ನಿರ್ಧಾರದ ಬಗ್ಗೆ ತಿಳಿಸಿ ಸಮುದಾಯದ ಮನವೊಲಿಸಲು ಸೂಚನೆ ನೀಡಲಾಗಿದೆ.

ಕಿತ್ತೂರು ಕರ್ನಾಟಕ ಭಾಗದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ಮಾಜಿ ಸಚಿವರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಲಕ್ಷ್ಮಣ ಸವದಿ ,ಸಚಿವರಾದ ಮುರುಗೇಶ್‌ ನಿರಾಣಿ, ಸಿ.ಸಿ.ಪಾಟೀಲ್‌, ನಾಯಕತ್ವ ವಹಿಸಿಕೊಂಡು ಹೆಚ್ಚು ಸ್ಥಾನ ಗೆಲ್ಲಲು ಕಾರ್ಯತಂತ್ರ ರೂಪಿಸಲು ನಿರ್ದೇಶನ ನೀಡಲಾಗಿದೆ ಎಂದು ಹೇಳಲಾಗಿದೆ.

ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು
ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲವಾದರೂ ಮೈ ಮರೆಯಬಾರದು. ಹಾಲಿ ಇರುವ ಸ್ಥಾನಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವ ಕಾರಣ ಎಚ್ಚರಿಕೆ ವಹಿಸಬೇಕು. ಉಳಿದಂತೆ ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿಯ ನೀಲನಕ್ಷೆ ಸಿದ್ಧಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಟಾರ್ಗೆಟ್‌ 55
ರಾಜಧಾನಿ ಬೆಂಗಳೂರಿನಲ್ಲಿ 20 ಸ್ಥಾನ ಸೇರಿ ಮಧ್ಯ ಕರ್ನಾಟಕ ಭಾಗದಲ್ಲಿ 55 ಸ್ಥಾನ ಗೆಲ್ಲುವ ಟಾರ್ಗೆಟ್‌ ನೀಡಲಾಗಿದ್ದು, ಪ್ರಮುಖವಾಗಿ ಒಕ್ಕಲಿಗ ಸಮುದಾಯದ ನಾಯಕರು ಇದಕ್ಕೆ ಶ್ರಮ ಹಾಕಲು ನಿರ್ದೇಶನ ನೀಡಲಾಗಿದೆ. ಆರ್‌. ಅಶೋಕ್‌, ಅಶ್ವತ್ಥನಾರಾಯಣ, ಡಾ| ಕೆ.ಸುಧಾಕರ್‌, ಎಸ್‌.ಟಿ. ಸೋಮಶೇಖರ್‌, ಗೋಪಾಲಯ್ಯ, ಸೋಮಣ್ಣ , ಬೈರತಿ ಬಸವರಾಜ್‌, ಮುನಿರತ್ನರಂತಹ ಘಟಾನುಘಟಿ ನಾಯಕರು ಇರುವಾಗ ಸ್ಥಾನ ಗೆಲ್ಲಲು ಯಾಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆಗಳು.. ವಾಹನ ಸವಾರರ ಪರದಾಟ

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆ… ಜೀವ ಭಯದಲ್ಲಿ ಸವಾರರು

Mumbai: ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರ್ಯಾಣದಲ್ಲಿ ಆರನೇ ಆರೋಪಿ ಬಂಧನ

Mumbai: ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರ್ಯಾಣದಲ್ಲಿ ಆರನೇ ಆರೋಪಿ ಬಂಧನ

Mangoes: ಹೊರ ರಾಜ್ಯಗಳ ಮಾವಿನ ಹಣ್ಣಿನ ದರ್ಬಾರ್‌!

Mangoes: ಹೊರ ರಾಜ್ಯಗಳ ಮಾವಿನ ಹಣ್ಣಿನ ದರ್ಬಾರ್‌!

Tragedy: ಭೀಕರ ರಸ್ತೆ ಅಪಘಾತ… ಒಂದೇ ಕುಟುಂಬದ 6 ಮಂದಿ ಮೃತ್ಯು, ಓರ್ವನ ಸ್ಥಿತಿ ಗಂಭೀರ

Tragedy: ಭೀಕರ ರಸ್ತೆ ಅಪಘಾತ… ಒಂದೇ ಕುಟುಂಬದ 6 ಮಂದಿ ಮೃತ್ಯು, ಓರ್ವನ ಸ್ಥಿತಿ ಗಂಭೀರ

Sandalwood: ʼದಿ ಜಡ್ಜ್ ಮೆಂಟ್‌ʼ; ಇದು ಮಾಮೂಲಿ ಸಿನಿಮಾ ಅಲ್ಲ

Sandalwood: ʼದಿ ಜಡ್ಜ್ ಮೆಂಟ್‌ʼ; ಇದು ಮಾಮೂಲಿ ಸಿನಿಮಾ ಅಲ್ಲ

3

ಹೆಚ್ಚು ಟೀ, ಕಾಫಿ ಕುಡಿದರೆ ರಕ್ತಹೀನತೆ ಬಾಧೆ ಗ್ಯಾರಂಟಿ!

Mumbai: ಹೋರ್ಡಿಂಗ್‌ ಕುಸಿತು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

Mumbai: ಹೋರ್ಡಿಂಗ್‌ ಕುಸಿದು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆಗಳು.. ವಾಹನ ಸವಾರರ ಪರದಾಟ

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆ… ಜೀವ ಭಯದಲ್ಲಿ ಸವಾರರು

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

Prajwal Revanna

Prajwal Revanna ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್‌ಗೆ ಎಸ್‌ಐಟಿ ಮೊರೆ?

Rain Alert: ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ

Rain Alert: ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆಗಳು.. ವಾಹನ ಸವಾರರ ಪರದಾಟ

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆ… ಜೀವ ಭಯದಲ್ಲಿ ಸವಾರರು

8

Day Care Center: ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಡೇ ಕೇರ್‌ ಕೇಂದ್ರ

Bengaluru: ವಿಪತ್ತು ನಿರ್ವಹಣೆಗೆ 10 ಕೋಟಿ ರೂ.: ತುಷಾರ್‌

Bengaluru: ವಿಪತ್ತು ನಿರ್ವಹಣೆಗೆ 10 ಕೋಟಿ ರೂ.: ತುಷಾರ್‌

Mumbai: ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರ್ಯಾಣದಲ್ಲಿ ಆರನೇ ಆರೋಪಿ ಬಂಧನ

Mumbai: ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರ್ಯಾಣದಲ್ಲಿ ಆರನೇ ಆರೋಪಿ ಬಂಧನ

Mangoes: ಹೊರ ರಾಜ್ಯಗಳ ಮಾವಿನ ಹಣ್ಣಿನ ದರ್ಬಾರ್‌!

Mangoes: ಹೊರ ರಾಜ್ಯಗಳ ಮಾವಿನ ಹಣ್ಣಿನ ದರ್ಬಾರ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.