ಆರೋಗ್ಯ ಕವಚಕ್ಕೆ ಹುಸಿ ಕರೆಯೇ ಸವಾಲು: ಅರ್ಧಕ್ಕರ್ಧ ನಿರುಪಯೋಗಿ

108ರ ಸಿಬಂದಿಗೆ ಇನ್ನಿಲ್ಲದ ಸಮಸ್ಯೆ

Team Udayavani, Jan 4, 2023, 7:33 AM IST

ಆರೋಗ್ಯ ಕವಚಕ್ಕೆ ಹುಸಿ ಕರೆಯೇ ಸವಾಲು: ಅರ್ಧಕ್ಕರ್ಧ ನಿರುಪಯೋಗಿ

ಬೆಂಗಳೂರು: ಸುಮ್ಮನೆ ಫೋನ್‌ ಮಾಡಿ ಉಪದ್ರವ ನೀಡುವುದು, ಹುಸಿ ಮತ್ತು ಸೈಲೆಂಟ್‌ ಕರೆಗಳು, ಮಕ್ಕಳು ಆಟ ಆಡುತ್ತ ಮಾಡುವ ಫೋನ್‌ ಕರೆಗಳು…!

-ಇವು “ಆರೋಗ್ಯ ಕವಚ- 108′ ಕಾಲ್‌ಸೆಂಟರ್‌ಗೆ ಬರುವ ಕರೆಗಳು. ತುರ್ತು ಆರೋಗ್ಯ ಸೇವೆಗಾಗಿ ರಾಜ್ಯದ ನಾನಾ ಭಾಗಗಳಿಂದ “108′ ಆ್ಯಂಬುಲೆನ್ಸ್‌ ಗೆ ನಿತ್ಯವೂ ಬರುವ ಕರೆಗಳಲ್ಲಿ ಇಂತಹ ಅನುಪಯುಕ್ತ ಕರೆಗಳ ಕಿರಿಕಿರಿ ತಲೆನೋವಾಗಿದೆ.

ಪ್ರತಿದಿನ ಬರುವ ನೂರಾರು ಕರೆಗಳ ಪೈಕಿ ಅರ್ಧಕ್ಕರ್ಧ ಕರೆಗಳು ತುರ್ತು ಅಲ್ಲದ ಅಥವಾ ನಿರುಪ ಯೋಗಿ ಕರೆಗಳು. ಇವುಗಳನ್ನು ಸ್ವೀಕರಿ ಸುವಂತಿಲ್ಲ; ನಿರ್ಲಕ್ಷಿಸುವಂತೆಯೂ ಇಲ್ಲ.

ಶೇ. 44ರಷ್ಟು ಈ ಮಾದರಿಯ ಕರೆಗಳಲ್ಲಿ ಬಹುತೇಕ ಸೈಲೆಂಟ್‌ ಕರೆಗಳು (ಫೋನ್‌ ಮಾಡಿ ಹಾಗೇ ಇಡುವುದು), ಸುಳ್ಳು ಕರೆಗಳು, ಉಪದ್ರವ ಕರೆಗಳು, ಮಕ್ಕಳ ಕರೆಗಳು, ಸೇವೆಯ ಪ್ರಶಂಸೆ, ಸಿಬಂದಿ ಬಗ್ಗೆ ಕಾಳಜಿ ತೋರುವವು ಆಗಿರುತ್ತವೆ. ಇದರಿಂದ ತುರ್ತು ಸಹಾಯವಾಣಿಗೆ ಹೊರೆಯಾಗುವುದರ ಜತೆಗೆ ತುರ್ತು ಸಹಾಯದ ಅಗತ್ಯವಿರುವವರಿಗೆ ಸ್ಪಂದಿಸಲು ವಿಳಂಬವಾಗುತ್ತಿದೆ.

ಜನರಿಗೆ ತುರ್ತುರಹಿತ ಕರೆ ಸಂಖ್ಯೆ ನೀಡ ದಿರುವುದು ಸಮಸ್ಯೆಗೆ ಕಾರಣ. ಎಮರ್ಜೆನ್ಸಿ ರೆಸ್ಪಾನ್ಸ್‌ ಸೆಂಟರ್‌ ಫಿಸಿಶಿಯನ್‌(ಇಆರ್‌ಸಿಪಿ)ಗಳು ಮತ್ತು ಎಮರ್ಜೆನ್ಸಿ ರೆಸ್ಪಾನ್ಸ್‌ ಆಫೀ ಸರ್‌ (ಇಆರ್‌ಒ) ಜತೆಗಿನ ಸಂವಹನಕ್ಕೆ 108 ಬಳಕೆ ಆಗುತ್ತಿದೆ. ಪ್ರತ್ಯೇಕ ಸಂಪರ್ಕ ಸಂಖ್ಯೆ ನೀಡಿದ್ದರೂ ಜನರು ಇದೇ ಸಂಖ್ಯೆ ಬಳಸುತ್ತಿದ್ದಾರೆ.

ಆ್ಯಂಬ್ಯುಲೆನ್ಸ್‌ ಪೂರೈಕೆ ಆಗಿಲ್ಲ!
ಉಳಿದ ಶೇ. 55ರಿಂದ 60ರಷ್ಟು ತುರ್ತು ಕರೆಗಳ ಪೈಕಿ ಸಕಾಲದಲ್ಲಿ ಆ್ಯಂಬ್ಯುಲೆನ್ಸ್‌ ಗಳನ್ನು ಪೂರೈಸಿರುವುದರ ಪ್ರಮಾಣವೂ ಶೇ. 50ಕ್ಕಿಂತ ಕಡಿಮೆ. ಇದರಿಂದ ನಿಜವಾದ ಉದ್ದೇಶ ಈಡೇರುತ್ತಿಲ್ಲ ಎನ್ನಲಾಗಿದೆ.

ಆ್ಯಂಬ್ಯುಲೆನ್ಸ್‌ಗಳು ಲಭ್ಯವಿಲ್ಲದ ಸಂದರ್ಭ ದಲ್ಲಿ ತುರ್ತು ಪ್ರತಿಕ್ರಿಯೆ ಕೇಂದ್ರವು ಕರೆಯನ್ನು ವೆಹಿಕಲ್‌ ಬ್ಯುಸಿ ಡೆಸ್ಕ್ (ವಿ.ಬಿ. ಡೆಸ್ಕ್) ಎಂಬ ಪ್ರತ್ಯೇಕ ಟರ್ಮಿನಲ್‌ಗೆ ವರ್ಗಾಯಿಸುತ್ತದೆ. ಆ್ಯಂಬ್ಯುಲೆನ್ಸ್‌ ಲಭ್ಯವಾದ ಬಳಿಕ ಅದನ್ನು ವಿ.ಬಿ. ಡೆಸ್ಕ್ ಕರೆ ಮಾಡಿದವರಿಗೆ ಪೂರೈಸ ಬೇಕು. ಅಂಕಿಅಂಶಗಳ ಪ್ರಕಾರ ಶೇ. 50ಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ಆ್ಯಂಬುಲೆನ್ಸ್‌ ಕೋರಿಕೆ ಗಳನ್ನು ಪೂರೈಸಿಯೇ ಇಲ್ಲ.

ಉದಾಹರಣೆಗೆ, 2014-15ರಿಂದ 2018-19ರ ವರೆಗೆ 8.87 ಲಕ್ಷ ಕರೆಗಳನ್ನು ವಿ.ಬಿ. ಡೆಸ್ಕ್ಗೆ ವರ್ಗಾಯಿಸಲಾಗಿದೆ. ಇವುಗಳಲ್ಲಿ 3.74 ಲಕ್ಷ ಕರೆಗಳಿಗೆ ಸ್ಪಂದಿಸಿ ಆ್ಯಂಬುಲೆನ್ಸ್‌ ಒದಗಿಸಲಾಗಿದೆ. ಉಳಿದ 5.12 ಲಕ್ಷ (ಶೇ. 58) ಪ್ರಕರಣಗಳಲ್ಲಿ ಆ್ಯಂಬುಲೆನ್ಸ್‌ ಪೂರೈಸಿಲ್ಲ. ಗರ್ಭಿಣಿಯರು ಆ್ಯಂಬ್ಯುಲೆನ್ಸ್‌ ಕೋರಿ ಕರೆ ಮಾಡಿ 20ರಿಂದ 23 ತಾಸುಗಳ ಅನಂತರವೂ ನೆರವು ದೊರೆಯದೆ ಮಗು ಸಾವನ್ನಪ್ಪಿದ ಘಟನೆಗಳೂ ನಡೆದಿವೆ.

ಈಚೆಗೆ ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯು 2018-19ನೇ ಸಾಲಿನ ಮಹಾಲೇಖಪಾಲರ ವರದಿಯಲ್ಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದ “ಆರೋಗ್ಯ ಕವಚ- 108′ ಯೋಜನೆಯ ಕಾರ್ಯನಿರ್ವಹಣ ಲೆಕ್ಕಪರಿಶೋಧನೆ ಕುರಿತು ವರದಿ ಮಂಡಿಸಿತು. ಅದರಲ್ಲಿ ಈ ಅಂಶಗಳನ್ನು ಉಲ್ಲೇಖೀಸಲಾಗಿದೆ.

ಸುಧಾರಣೆಗೆ ಸಲಹೆ
01.ಕರೆಗಳನ್ನು ವಿ.ಬಿ. ಡೆಸ್ಕ್ಗೆ ವರ್ಗಾಯಿಸುವ ಮುನ್ನ ಸೂಕ್ತ ಆ್ಯಂಬ್ಯುಲೆನ್ಸ್‌ ಲಭ್ಯ ವಾದ ತತ್‌ಕ್ಷಣ ಅದನ್ನು ಹಂಚಿಕೆ ಮಾಡಲಾಗಿದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು.
02.ನಿಗದಿತ ಸಮಯದಲ್ಲಿ ಆ್ಯಂಬ್ಯುಲೆನ್ಸ್‌ ನಿಯೋಜಿಸಲಾಗದಿದ್ದರೆ ಕರೆ ಮಾಡಿದವ ರಿಗೆ ತಿಳಿಸಬೇಕು. ಇದರಿಂದ ಕಾಯುವಿಕೆ ತಪ್ಪೀತು.
03.ಕರೆ ಮಾಡುವವರು ಮತ್ತು ಆ್ಯಂಬ್ಯುಲೆನ್ಸ್‌ ಸಿಬಂದಿ ಮಧ್ಯೆ ಮೇಲ್ವಿಚಾರಣೆಯ ನೇರ ದೂರವಾಣಿ ವ್ಯವಸ್ಥೆ ಕಲ್ಪಿಸಬೇಕು.

ಕಾಲ್‌ಸೆಂಟರ್‌ಗೆ ಅನಗತ್ಯ ಕರೆ ಮಾಡಿ ಉಪದ್ರವ ನೀಡುವುದು ತಪ್ಪಿಲ್ಲ. ಸುಳ್ಳು ಕರೆಗಳೇ ಅಧಿಕ. ಈ ಬಗ್ಗೆ ಸಂಬಂಧ ಪಟ್ಟ ವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.
– ಹನುಮಂತಪ್ಪ ಆರ್‌.ಜಿ.,
ರಾಜ್ಯ ಮುಖ್ಯಸ್ಥರು, ಆರೋಗ್ಯ ಕವಚ- 108


-ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.