ನೆಟ್ಟಾರು ಕೊಲೆ ಪ್ರಕರಣ; ನಾಲ್ವರು ಆರೋಪಿಗಳ ಮಾಹಿತಿಗೆ 14 ಲಕ್ಷ ರೂ. ಬಹುಮಾನ ಘೋಷಣೆ
ಕಳೆದ ಜುಲೈ 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಲಾಗಿತ್ತು.
Team Udayavani, Jan 5, 2023, 2:15 PM IST
ಕಾಸರಗೋಡು: ಕರ್ನಾಟಕದ ಬೆಳ್ಳಾರೆ ನಿವಾಸಿ, ಯುವಮೋರ್ಚಾ ನೇತಾರ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತರನ್ನು ಪತ್ತೆಹಚ್ಚಲು ಸಹಾಯ ನೀಡುವವರಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ಐಎ) ಪಾರಿತೋಷಕ ಘೋಷಿಸಿದೆ.
ಇದನ್ನೂ ಓದಿ:ಬೈಕಿಗೆ ಡಿಕ್ಕಿ ಹೊಡೆದು ಸವಾರನನ್ನು 1ಕಿ.ಮೀ. ದೂರ ಎಳೆದೊಯ್ದ ಕಾರು: ಬೈಕ್ ಸವಾರ ದುರ್ಮರಣ
ಸುಳ್ಯ ಬುದು ಹೌಸ್ನ ಎಸ್. ಮುಹಮ್ಮದ್ ಮುಸ್ತಫ ಯಾನೆ ಮುಸ್ತಫ ಪೈಚಾರ್ ಮತ್ತು ಮಡಿಕೇರಿಯ ಎಂ.ಎಚ್. ತೌಫಲ್ ಕುರಿತು ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂ. ನೀಡಲಾಗುವುದು. ದಕ್ಷಿಣ ಕನ್ನಡದ ಕಲ್ಲುಮುಟ್ಟಲು ವೀಟಿಲ್ ಎಂ.ಆರ್. ಉಮ್ಮರ್ ಫಾರೂಕ್ ಯಾನೆ ಉಮ್ಮರ್, ಸಿದ್ದಿಕ್ ಯಾನೆ ಪೈಂಟರ್ ಸಿದ್ದಿಕ್ ಯಾನೆ ಗುಜರಿ ಸಿದ್ದಿಕ್ ಕುರಿತು ಮಾಹಿತಿ ನೀಡುವವರಿಗೆ ತಲಾ 2 ಲಕ್ಷ ರೂ. ಪಾರಿತೋಷಕ ನೀಡಲಾಗುವುದು ಎಂದು ನೊಟೀಸ್ನಲ್ಲಿ ತಿಳಿಸಿದೆ.
ಆರೋಪಿಗಳು ಕೇರಳದಲ್ಲಿ ತಲೆಮರೆಸಿಕೊಂಡಿರುವ ಶಂಕೆಯ ಹಿನ್ನೆಲೆಯಲ್ಲಿ ನೊಟೀಸಿನ ಪ್ರತಿಗಳನ್ನು ಕಲ್ಲಿಕೋಟೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಲಗತ್ತಿಸಲಾಗಿದೆ. ಕಳೆದ ಜುಲೈ 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Charmadi ಘಾಟ್ನಲ್ಲಿ ಟಾಟಾ ಏಸ್ ಪಲ್ಟಿ
Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?