ಚೆನ್ನಾಗಿ ಓದಿ, ಅತ್ಯುತ್ತಮ ನರ್ಸ್‌ಗಳಾಗಿ ಹೊರಹೊಮ್ಮಿ; ಬೊಮ್ಮನಹಳ್ಳಿ

ತರಬೇತಿ ನೀಡಲು ಈಗಾಗಲೇ ಎರಡು ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

Team Udayavani, Jan 5, 2023, 6:30 PM IST

ಚೆನ್ನಾಗಿ ಓದಿ, ಅತ್ಯುತ್ತಮ ನರ್ಸ್‌ಗಳಾಗಿ ಹೊರಹೊಮ್ಮಿ; ಬೊಮ್ಮನಹಳ್ಳಿ

ಗದಗ: ಶಿಸ್ತು, ಸಮಯ ಪ್ರಜ್ಞೆ, ಪ್ರಾಮಾಣಿಕತೆ ರೂಢಿಸಿಕೊಳ್ಳುವ ಜೊತೆಗೆ ಏಕಾಗ್ರತೆಯಿಂದ ಗುಣಮಟ್ಟದ ಶಿಕ್ಷಣ ಪಡೆದು ಯುವ ವಿದ್ಯಾರ್ಥಿಗಳು ಅತ್ಯುತ್ತಮ ನರ್ಸ್‌ಗಳಾಗಿ ಹೊರಹೊಮ್ಮುವ ಮೂಲಕ ಸಂಸ್ಥೆಗೆ ಹೆಸರು ತರಬೇಕೆಂದು ಜಿಮ್ಸ್‌ ನಿರ್ದೇಶಕ ಡಾ|ಬಸವರಾಜ ಬೊಮ್ಮನಹಳ್ಳಿ ಹೇಳಿದರು.

ನಗರದ ಸಂಭಾಪೂರ ರಸ್ತೆಯಲ್ಲಿರುವ ಸಂಕನೂರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಬುಧವಾರ ಸಂಕನೂರ ಇನ್‌ ಸ್ಟಿಟ್ಯೂಟ್‌ ಆಫ್‌ ನರ್ಸಿಂಗ್‌ ಸೈನ್ಸಸ್‌ ಕಾಲೇಜನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಜ್ಞ ವೈದ್ಯರೇ ಇಲ್ಲಿ ಶಿಕ್ಷಣದ ಪಾಠ ಬೋಧಿಸುತ್ತಿರುವುದು ಇಲ್ಲಿನ ವಿದ್ಯಾರ್ಥಿಗಳ ಸುದೈವ. ವೃತ್ತಿಪರ ಶಿಕ್ಷಣವಾದ ಬಿಎಸ್‌ಸಿ ನರ್ಸಿಂಗ್‌ ನಾಲ್ಕು ವರ್ಷದ ಶಿಕ್ಷಣವಾಗಿದ್ದು, ಅಂದಿನ ಅಭ್ಯಾಸವನ್ನು ಅಂದೇ ಪೂರ್ಣಗೊಳಿಸಬೇಕು. ವ್ಯಸನಗಳಿಂದ ದೂರವಿದ್ದು, ಆರೋಗ್ಯ ಕಾಯ್ದುಕೊಂಡು ಮಾನವೀಯತೆ, ಸೇವಾ ಮನೋಭಾವನೆಯಿಂದ ಆರೋಗ್ಯ ಸೇವೆ ಮಾಡುವ ಮೂಲಕ ವಿದ್ಯಾರ್ಥಿಗಳು ತಮ್ಮ ಭವಿಷ್ಯ ಉಜ್ವಲ ಗೊಳಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಸಂಕನೂರ ಇನ್‌ಸ್ಟಿಟ್ಯೂಟ್‌ ಆಫ್‌ ನರ್ಸಿಂಗ್‌ ಸೈನ್ಸಸ್‌ ಕಾಲೇಜು ಸಂಸ್ಥಾಪಕ ಅಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಮಾತನಾಡಿ, ನೈಪುಣ್ಯತೆ, ಕೌಶಲ್ಯಯುಕ್ತ ನಸ್‌ ìಗಳ ಕೊರತೆ ಇದ್ದು, ಯುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ನರ್ಸಿಂಗ್‌ ಶಿಕ್ಷಣ ಹಾಗೂ ತರಬೇತಿ ನೀಡಿ ವೃತ್ತಿಗೆ ಸಜ್ಜುಗೊಳಿಸುವ ಉದ್ದೇಶ ಸಂಸ್ಥೆಯದ್ದಾಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ನಿತ್ಯ ಅಭ್ಯಾಸ ಮಾಡಿ ಬಿಎಸ್‌ಸಿ ನರ್ಸಿಂಗ್‌ ಪದವಿ ಪೂರ್ಣಗೊಳಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯರಾಗಿ ಮೊದಲ ಬಾರಿಗೆ ಆಯ್ಕೆಯಾದಾಗ ಪದವೀಧರರಿಗೆ ಉದ್ಯೋಗ ಮಾಹಿತಿ ಕೇಂದ್ರ ಆರಂಭಿಸಿ ತಮ್ಮ ಕ್ಷೇತ್ರದ ಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳಗಳನ್ನು ಮಾಡಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ. ನಸಿಂಗ್‌ ಕಾಲೇಜು ಕಟ್ಟಡ ಹಾಗೂ ಹಾಸ್ಟೆಲ್‌ಗ‌ಳ ನಿರ್ಮಾಣಕ್ಕೆ ಈಗಾಗಲೇ ಜಮೀನು ಖರೀದಿಸಲಾಗಿದೆ. ಅಲ್ಲಿ ನರ್ಸಿಂಗ್‌ ಕಾಲೇಜು ಸ್ಥಾಪಿಸಲಾಗುವುದು. ಪಾಠ ಬೋಧನೆ ಕೊಠಡಿ, ಅತ್ಯುತ್ತಮ ಗ್ರಂಥಾಲಯ, ನುರಿತ ಶಿಕ್ಷಕ ವರ್ಗವಿದ್ದು, ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಈಗಾಗಲೇ ಎರಡು ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಸಮಸ್ಯೆ ಎದುರಾದರೂ ವಿದ್ಯಾರ್ಥಿಗಳು ತಮ್ಮನ್ನು
ಸಂಪರ್ಕಿಸಬೇಕೆಂದು ಹೇಳಿದರು.

ಡಾ| ಸಂಜಯ ಪೀರಾಪೂರ ಮಾತನಾಡಿ, ನರ್ಸಿಂಗ್‌ ಶಿಕ್ಷಣದಲ್ಲಿ ನೈಪುಣ್ಯತೆ ನೀಡಲು ಕಾಲೇಜು ಸಜ್ಜುಗೊಂಡಿದ್ದು, ಇಲ್ಲಿ ನಾಲ್ಕು ವರ್ಷಗಳ ಕಾಲ ತರಬೇತಿ ಹೊಂದುವ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ ಎಂದರು.

ಡಾ|ಶ್ವೇತಾ ಸಂಕನೂರ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ, ದೂರದೃಷ್ಟಿಯ ಮೂಲಕ ನರ್ಸಿಂಗ್‌ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಪ್ರಾಚಾರ್ಯೆ ಮೀನಾಕ್ಷಿ ದೇವಾಂಗಮಠ ಮಾತನಾಡಿದರು. ಡಾ| ಪ್ರಕಾಶ ಸಂಕನೂರ, ಸುಭಾಸ ಸಂಕನೂರ, ಅಂದಪ್ಪ ಸಂಕನೂರ, ಡಾ| ಗುರುಪ್ರಸಾದ, ಎನ್‌.ವಿ. ಜೋಶಿ, ವಿ.ಎಂ. ಹಿರೇಮಠ ಬಿ.ವೈ. ಸೋಮಣ್ಣವರ, ಬಿ.ಎಲ್‌. ಚೌಹಾಣ್‌, ಜಗದೀಶ ನರಗುಂದ ಪಿ.ಬಿ. ಬಂಡಿ, ಡಾ|ಆದಿತ್ಯ ಗೋಡಕಿಂಡಿ, ಡಾ|ಸಂದೀಪ ಕವಳಿಕಾಯಿ, ಡಾ|ವಿದ್ಯಾ ಚಿಂತಾಮಣಿ, ಡಾ| ಸತ್ತರಖಾನ್‌, ಶಿಕ್ಷಕರ ಸಂಘಟನೆ ಅಧ್ಯಕ್ಷರು, ವಿವಿಧ ಕಾಲೇಜುಗಳ ಪ್ರಾಚಾರ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ವಿನ್ಸೆಂಟ್‌ ಪಾಟೀಲ ಸ್ವಾಗತಿಸಿದರು.

ಟಾಪ್ ನ್ಯೂಸ್

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.