ಸ್ವಲ್ಪ ಮಾಡರ್ನ್ ಆಗಿರಿ; ಯೋಗಿ ಧಿರಿಸಿನ ಬಗ್ಗೆ ಹುಸೇನ್ ದಳವಾಯಿ ಹೇಳಿಕೆ
ಹಿರಿಯ ಕಾಂಗ್ರೆಸ್ ನಾಯಕನ ಹೇಳಿಕೆ ವಿರುದ್ದ ಆಕ್ರೋಶ
Team Udayavani, Jan 5, 2023, 8:26 PM IST
ಮುಂಬೈ: ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಹುಸೇನ್ ದಳವಾಯಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ತಮ್ಮ ಕೇಸರಿ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ಆಧುನಿಕ ಬಟ್ಟೆಗಳನ್ನು ಧರಿಸಬೇಕು ಎಂದು ಹೇಳಿದ್ದಾರೆ.
“ಪ್ರತಿದಿನ ಧರ್ಮದ ಬಗ್ಗೆ ಮಾತನಾಡಬೇಡಿ, ಕೇಸರಿ ಬಟ್ಟೆಗಳನ್ನು ಧರಿಸಬೇಡಿ ಮತ್ತು ಸ್ವಲ್ಪ ಮಾಡರ್ನ್ ಆಗಿರಿ. ಆಧುನಿಕ ವಿಚಾರಗಳನ್ನು ಅಳವಡಿಸಿಕೊಳ್ಳಿ” ಎಂದು ಹೇಳಿ ದಳವಾಯಿ ಹಲವರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಮುಂದಿನ ತಿಂಗಳು ಲಕ್ನೋದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಮುನ್ನ ದೇಶೀಯ ಹೂಡಿಕೆದಾರರನ್ನು ಸೆಳೆಯಲು ಮುಂಬೈಗೆ ಎರಡು ದಿನಗಳ ಭೇಟಿ ನೀಡಿರುವ ಯುಪಿ ಸಿಎಂ ಬಗ್ಗೆ ತೀವ್ರವಾಗಿ ಟೀಕಿಸಿದ ಕಾಂಗ್ರೆಸ್ ನಾಯಕ, ಯೋಗಿ ಕೈಗಾರಿಕೆಗಳನ್ನು ಮಹಾರಾಷ್ಟ್ರದಿಂದ. ತೆಗೆದುಕೊಳ್ಳುವ ಬದಲು ತಮ್ಮದೇ ರಾಜ್ಯದಲ್ಲಿ ಹೊಸ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಹೇಳಿದ್ದರು.