ಮೂಡುಬಿದಿರೆ: ಫುಟ್‌ಪಾತ್‌ಗಿಲ್ಲ ಅವಕಾಶ; ಪಾದಚಾರಿಗಳಿಗೆ ಸಂಕಷ್ಟ

ಸೀಯಾಳ ಕೊಚ್ಚುವ ಬೊಡ್ಡೆ, ಕ್ಯಾಂಟೀನ್‌ ಬೋರ್ಡು ಎಲ್ಲವೂ ಅಡ್ಡಡ್ಡ ಇವೆ

Team Udayavani, Jan 6, 2023, 6:16 PM IST

ಮೂಡುಬಿದಿರೆ: ಫುಟ್‌ಪಾತ್‌ಗಿಲ್ಲ ಅವಕಾಶ; ಪಾದಚಾರಿಗಳಿಗೆ ಸಂಕಷ್ಟ

ಮೂಡುಬಿದಿರೆ: ಪುರಸಭೆಯ ವ್ಯಾಪ್ತಿಯಲ್ಲಿ ಅದರಲ್ಲೂ ಪೇಟೆ ಪರಿಸರದಲ್ಲಿ ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳೂ ಸಹಿತ ಇತರ ರಸ್ತೆಗಳ ಪಕ್ಕ ಪಾದಚಾರಿಗಳು ಓಡಾಡಲು ಪ್ರತ್ಯೇಕ ಫುಟ್‌ಪಾತ್‌ ಇಲ್ಲದಿರುವ ಕಾರಣ ಚರಂಡಿಯನ್ನೇ ಫುಟ್‌ಪಾತ್‌ ಎಂದು ಪರಿಗಣಿಸಿ ಹೆಜ್ಜೆಹಾಕಿದರೆ ಅಕ್ಷರಶಃ ಅಡಿಗಡಿಗೂ ಅಡ್ಡಿ ಆತಂಕಗಳ ಸರಮಾಲೆಯೇ ಗೋಚರಿಸುತ್ತಿದೆ.

ಪೇಟೆಯಿಂದ ಏಕಮುಖವಾಗಿ ಆಳ್ವಾಸ್‌ ಆಸ್ಪತ್ರೆ ರಸ್ತೆಯಲ್ಲಿ ಸಾಗಿ ಬಂದರೆ ಎರಡೂ ಕಡೆ ಚರಂಡಿಯಲ್ಲಿ ಅಲ್ಲಲ್ಲಿ ರಾಜಸ್ಥಾನಿ ಮಾತ್ರವಲ್ಲ ಲೋಕಲ್‌ ಮಂದಿಯೂ ತಮ್ಮ ವ್ಯಾಪಾರದ ಸಾಮಗ್ರಿಗಳನ್ನು ಚರಂಡಿಯ ಮೇಲೆಯೇ ರಾಶಿ ಹಾಕಿ ಪಾದಚಾರಿಗಳನ್ನು ಭರ್ರನೆ ಓಡಾಡುವ ವಾಹನಗಳ ಅಪಾಯಕ್ಕೆ ಸಿಲುಕಿಸಿಟ್ಟಂತಿದೆ.

ಕಲ್ಸಂಕ ಕಡೆಯಿಂದ ಪೇಟೆಗೆ ಬರುವ ಹಾದಿಯಲ್ಲಿ ಎಡಕ್ಕೆ ಇರುವ ಚರಂಡಿಯ ಮೇಲೆ ಸಿಮೆಂಟ್‌ ಹಾಕಿ ಮೆಟ್ಟಲು ಕಟ್ಟಿ ಪೈಂಟ್‌ ಮಾಡಲಾಗಿದೆ. ಬಲಕ್ಕೆ ಚರಂಡಿ ಮೇಲೆ ಹಾಲು, ತರಕಾರಿ, ಸೀಯಾಳ ಕೊಚ್ಚುವ ಬೊಡ್ಡೆ, ಕ್ಯಾಂಟೀನ್‌ ಬೋರ್ಡು ಎಲ್ಲವೂ ಅಡ್ಡಡ್ಡ ಇವೆ. ಚರಂಡಿ ಮೇಲೆ ಮೆಟ್ಟಲು ಕಟ್ಟಲಾಗಿದೆ. ಶಾಲೆ ಕಾಲೇಜು ಬಿಡುವ ವೇಳೆ ವಿದ್ಯಾರ್ಥಿಗಳು ಮಾರ್ಗದಲ್ಲಿ ಓಡಾಡುವ ವಾಹನಗಳು ಮೈಮೇಲೆ ಬರುತ್ತವೆಯೋ ಎಂದು ಹೆದರಿಕೊಂಡೇ ಸಾಗಬೇಕಾಗಿದೆ. ಬಹಳ  ಅಪಾಯಕಾರಿ. ಹಳೆ ಪೊಲೀಸ್‌ ಠಾಣೆಯ ಬಳಿ ಬಲಕ್ಕೆ ಒಂದು ಮನೆಯ ಜಗಲಿ ಬಂದಿದೆ, ಮುಂದೆ ಹೆಜ್ಜೆ ಹಾಕಿದಾಗ ಪಾಳು ಬಿದ್ದ ಮನೆಯ ಅವಶೇಷ ಚರಂಡಿ ಮೇಲೆಯೇ ಇದೆ.

ವಿಜಯನಗರದಲ್ಲಿ ರಸ್ತೆ ಬದಿಯ ಚರಂಡಿ ಮೇಲೆಯೇ ವಾಹನ, ವ್ಯಾಪಾರದ ಸರಕು ಇರಿಸಲಾಗಿದೆ. ಮಸೀದಿ ರಸ್ತೆಯಲ್ಲಿ ಒಂದು ಬದಿಯಲ್ಲಿ ಚರಂಡಿಯೇ ಇಲ್ಲ, ಅಲ್ಲಿ ನಡೆದು ಕೊಂಡುಹೋಗಲು ತ್ರಾಸವೋ ತ್ರಾಸ ವಾಗುತ್ತಿದೆ. ಕೃಷ್ಣ ಕಟ್ಟೆಯಿಂದ ಮಸೀದಿಯತ್ತ ಮತ್ತು ಮೇಲ್ಗಡೆ ಸಾಗುವ ರಸ್ತೆಯ ಬದಿಯ ಚರಂಡಿಯಲ್ಲಿ ದೂಡುಗಾಡಿಗಳು, ಆಂಗಡಿ ಸಾಮಗ್ರಿಗಳು ಪಾದಚಾರಿಗಳ ಓಡಾಟಕ್ಕೆ ಅಡ್ಡಿಯಾಗುತ್ತಿದೆ. ಇಷ್ಟು ವೆಚ್ಚದಲ್ಲಿ ರಸ್ತೆಯನ್ನು ಅಗಲ ಮಾಡಿದ್ದು ಇದಕ್ಕೇ ಯೇ ಎಂದು ಜನರಾಡಿಕೊಳ್ಳುವಂತಾಗಿದೆ.

ಬಸ್‌ನಿಲ್ದಾಣದ ನಿರ್ಗಮನ ಹಾದಿಯಲ್ಲಿ ಮಾರ್ಗದಿಂದಲೇ ಕಬ್ಬಿಣದ ಮೆಟ್ಟಲು ನಿರ್ಮಿಸಿ ಚರಂಡಿಯ ಮೇಲೆ ನಡೆದಾಡದಂತಾಗಿದೆ, ಮುಂದುವರಿದು ಎಡಕ್ಕೆ ತಿರುಗಿ ಮಸೀದಿ ರಸ್ತೆಗಿಳಿದರೆ ಅಲ್ಲೂ ಇದೇ ರೀತಿ ಮಹಡಿಗೆ ಮಾರ್ಗದಿಂದಲೇ ಕಬ್ಬಿಣದ ಮೆಟ್ಟಲು ವೆಲ್ಡ್‌ ಮಾಡಲಾಗಿದೆ.

*ಧನಂಜಯ ಮೂಡುಬಿದಿರೆ

ಟಾಪ್ ನ್ಯೂಸ್

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-wewqewqe

SSLC; ಆಳ್ವಾಸ್‌ ಮೂಡುಬಿದಿರೆಗೆ ಶೇ. 100 ಫಲಿತಾಂಶ : 51ಮಂದಿಗೆ 600ಕ್ಕೂ ಅಧಿಕ ಅಂಕ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Rahul Gandhi 3

BJP ಪಕ್ಷದಿಂದ ಸಂವಿಧಾನ ಬದಲು: ರಾಹುಲ್‌ ಗಾಂಧಿ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.