ಕುಣಿಗಲ್ ಸ್ಟಡ್ ಫಾರ್ಮ್ ನಲ್ಲಿ ಹೆಜ್ಜೇನು ದಾಳಿ: ಕೋಟ್ಯಂತರ ರೂ ಬೆಲೆಯ 2 ಕುದುರೆ ಮೃತ್ಯು

ಐರ್ಲ್ಯಾಂಡ್ ಹಾಗೂ ಅಮೆರಿಕದ ಎರಡು ಗಂಡು ತಳಿ ಕುದುರೆ...ಏಕ ಕಾಲದಲ್ಲಿ ಎರಡು ಅಘಾತ

Team Udayavani, Jan 6, 2023, 7:16 PM IST

1-adadad

ಕುಣಿಗಲ್ : ಹೆಜ್ಜೇನು ದಾಳಿಗೆ ಕೋಟ್ಯಂತರ ರೂ. ಬೆಲೆ ಬಾಳುವ ಐರ್ಲ್ಯಾಂಡ್ ಹಾಗೂ ಅಮೆರಿಕದ ಎರಡು ಗಂಡು ತಳಿ ಕುದುರೆ ದಾರುಣವಾಗಿ ಕೊನೆಯುಸಿರೆಳೆದಿರುವ ಘಟನೆ ಕುಣಿಗಲ್ ಸ್ಟಡ್ ಫಾರಂನಲ್ಲಿ ನಡೆದಿದೆ.

ಐರ್ಲ್ಯಾಂಡ್ ದೇಶದ ಹತ್ತು ವರ್ಷದ ಸನಸ್ ಪರ್ ಅಕ್ಚಮ್ ಕುದುರೆ ಹಾಗೂ ಅಮೆರಿಕದ 15 ವರ್ಷದ ಏರ್ ಸಫೋರ್ಟ್ ದಾಳಿಗೆ ಸಿಲುಕಿದ ಗಂಡು ತಳಿಯ ಕುದುರೆಗಳಾಗಿವೆ.

ಎಂದಿನಂತೆ ಬುಧವಾರ ಏರ್ ಸಫೋರ್ಟ್, ಸನಸ್ ಪರ್ ಅಕ್ಚಮ್ ಈ ಎರಡು ಕುದುರೆಗಳನ್ನು ಸ್ಟಾಲಿನ್ ಪ್ಯಾಡಕ್‌ಗೆ ಮೇಯಲು ಬಿಡಲಾಗಿತ್ತು, ಆದರೆ ಮಧ್ಯಾಹ್ನ ಸುಮಾರು ಒಂದು ಗಂಟೆ ಸಮಯದಲ್ಲಿ ದಿಢೀರನೇ ಸಾವಿರಾರು ಹೆಜ್ಜೇನುಗಳು ಎರಡು ಕುದುರೆಗಳ ಮೇಲೆ ಏಕಾ ಏಕಿ ದಾಳಿ ಮಾಡಿದವು, ಜೇನು ಹುಳುಗಳ ದಾಳಿಗೆ ಎರಡು ಕುದುರೆಗಳು ಕಿರಿಚಿಕೊಂಡು ನೆಲಕ್ಕೆ ಬಿದ್ದು ಒದ್ದಾಡುತ್ತಿದ್ದವು ಇದನ್ನು ಗಮನಸಿದ ಇಲ್ಲಿನ ಕಾರ್ಮಿಕರು ವೈದ್ಯರಿಗೆ ಮಾಹಿತಿ ನೀಡಿದರು. ತತ್ ಕ್ಷಣ ಘಟನೆ ಸ್ಥಳಕ್ಕೆ ತೆರಳಿದ ವೈದ್ಯರ ತಂಡ ದಾಳಿಯಲ್ಲಿ ಗಾಯಗೊಂಡ ಕುದುರೆಗಳಿಗೆ ಸ್ಟಡ್ ಫಾರಂ ನಲ್ಲಿ ಚಿಕಿತ್ಸೆ ನೀಡಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ 10 ಗಂಟೆ ವೇಳೆಯಲ್ಲಿ ಸನಸ್ ಪರ್ ಅಕ್ಚಮ್ ಕೊನೆಯುಸಿರೆಳೆದರೆ ಏರ್ ಸಫೋರ್ಟ್ ಕುದುರೇ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದೆ.

ಕುದುರೆಗಳ ಸಾಧನೆ

ಅಮೆರಿಕದ ಏರ್ ಸಫೋರ್ಟ್ ಕುದುರೆಯು ವರ್ಜಿನಿಯಾ ಡರ್ಬಿಯಲ್ಲಿ ಭಾಗಿಯಾಗಿದೆ, ಪಿಲ್ಗ್ರಮಾ ಸ್ಟೇಕ್ಸ್, ಟ್ರಾನ್ಸ್ಲೇನಿಯಾ ಸ್ಟೇಕ್ಸ್, ಎರಡನೇ ಯುನೈಟೆಡ್ ನೇಷನ್ಸ್ ಸ್ಟೇಕ್ಸ್, ಮೂರನೇ ಅಮೇರಿಕನ್ ಟರ್ಫ್ ಸ್ಟೇಕ್ಸ್, ಎರಡನೇ ಹಿಲ್ ಪ್ರಿನ್ಸ್ ಸ್ಟೇಕ್ಸ್ ರೇಸಿನಲ್ಲಿ ಜಯಗಳಿಸಿ ಕೋಟ್ಯಾಂತರೂ ಸಂಪಾದಿಸಿದೆ ಎನ್ನಲಾಗಿದೆ, ಐರಲ್ಯಾಂಡ್ ದೇಶದ ಹತ್ತು ವರ್ಷದ ಸನಸ್ ಪರ್ ಅಕ್ಚಮ್ ಕುದುರೆ ಐದು ಸ್ಟಾರ್ ಕುದುರೇ ರೇಸ್‌ನಲ್ಲಿ ಮೂರು ಭಾರಿ ಜಯಭೇರಿ ಭಾರಿಸಿ ಲಾಭ ತಂದು ಕೊಟ್ಟಿದೆ.

ಕುದುರೆ ತಳಿ ಉತ್ಪಾದನೆ
ಕುದುರೆ ರೇಸಿನಲ್ಲಿ ಉತ್ತಮ ಸಾಧನೆ ಮಾಡಿರುವ ಈ ಎರಡು ಕುದುರೆಗಳನ್ನು ಅಮೆರಿಕ ಹಾಗೂ ಐರ್ಲ್ಯಾಂಡ್ ದೇಶಗಳಿಂದ ಕಳೆದ ಆರು ವರ್ಷದ ಹಿಂದೆ ಯುಆರ್‌ಬಿಬಿ ತಲಾ ಒಂದು ಕೋಟಿ ರೂಗಳಂತೆ ಎರಡು ಕೋಟಿ ರೂಗಳಿಗೆ ಖರೀದಿಸಿ ಈ ಬೀಜದ ತಳಿಯ ಕುದುರೆಗಳಿಂದ ಕುದುರೆ ಮರಿ ತಳಿಗಳನ್ನು ಉತ್ಪಾದಿಸಲಾಗುತ್ತಿತು ಎನ್ನಲಾಗಿದೆ.

ಈ ಕುದುರೆಗಳು ನೂರಾರು ಕುದುರೆ ಮರಿಗಳಿಗೆ ಜನ್ಮ ನೀಡಿವೆ, ಈ ಕುದುರೆ ಮರಿಗಳನ್ನು ಬೇರೆ ಬೇರೆ ರಾಜ್ಯಗಳು ಹಾಗೂ ದೇಶಗಳಿಂದ  ಬಂದು ಲಕ್ಷಾಂತರ ರೂಗೆ ಖರೀದಿ ಮಾಡಿ ರೇಸ್‌ಗೆ ಬಳಸಿಕೊಳ್ಳುತ್ತಿದ್ದಾರೆ.

ಸ್ಟಡ್‌ಫಾರಂಗೆ ಅಘಾತ
ಸರ್ಕಾರವು 30 ವರ್ಷಗಳ ಅವಧಿಗೆ ಯುಆರ್‌ಬಿಬಿಗೆ ಗುತ್ತಿಗೆ ನೀಡಿತ್ತು ಈ ಗುತ್ತಿಗೆ ಅವಧಿ ಕಳೆದ ಸೆಪ್ಟಂಬರ್‌ಗೆ ಮುಗಿದಿತ್ತಾದರೂ ಮತ್ತೆ ಯುಆರ್‌ಬಿಬಿ ಸ್ವಲ್ಪ ದಿವಸ ಕಾಲವಕಾಶ ತೆಗೆದುಕೊಂಡಿತ್ತು ಇದೇ ವೇಳೆ ಎರಡು ಬೀಜದ ತಳಿ ಕುದುರೆಗಳು ಹೆಜ್ಜೇನು ದಾಳಿಗೆ ತುತ್ತಾಗಿದ್ದು ಸ್ಟಡ್ ಫಾರಂಗೆ ಏಕ ಕಾಲದಲ್ಲಿ ಎರಡು ಅಘಾತಗಳು ಉಂಟಾಗಿದೆ.

ಇದೇ ಮೊದಲ ಘಟನೆ
ಟಿಪ್ಪು ಸುಲ್ತಾನ್ ಸುಮಾರು 260 ವರ್ಷಗಳ ಹಿಂದೆ ತನ್ನ ಕುದುರೆ ಸೈನ್ಯಕ್ಕೆ ಹುಲಿಯೂರುದುರ್ಗ, ಸಾವನದುರ್ಗ ಮತ್ತು ದೇವರಾಯನದುರ್ಗ ಈ ಮೂರು ಪ್ರದೇಶಗಳಿಗೆ ಕುಣಿಗಲ್ ಅನ್ನು ಪ್ರಮುಖ ಕೇಂದ್ರವಾಗಿಸಿಕೊಂಡು ಸೈನಿಕರಿಗೆ ಯುದ್ದದ ತರಬೇತಿ ಕುದುರೆ ಸಾಕಾಣಿಕೆ ಮತ್ತು ವಂಶಾಭಿವೃದ್ದಿಗಾಗಿ ಸ್ಟಡ್ ಫಾರಂ(ಕುದುರೆ ಗಾವಲ್) ಅನ್ನು ಇಲ್ಲಿ ಸ್ಥಾಪಿಸಿದ್ದ ಎನ್ನಲಾಗಿದ್ದು ಅಲ್ಲಿಂದ ಇಲ್ಲಿವರೆಗೂ ಯಾವುದೇ ತರಹ ಇಂತಹ ಘಟನೆಯಿಂದ ಕುದುರೆಗಳು ಮೃಪಟ್ಟಿರಲಿಲ್ಲ. ಇದೇ ಪ್ರಥಮ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.