ತೇರಾ ಏರಿ ಹಾವೇರ್ಯಾಗೇ ಗೌಡ್ರ ನಕ್ಕಾರೋ..

ಚಾ ಕುಡಿಕೆಂಡ ಗುದ್ಲೆಪ್ಪ ಹಳ್ಳಿಕೇರಿ ಸರ್ಕಲ್‌ದಾಗ ನಿಂತಕೆಂಡಿದ್ನಿ.. ಬಂದರಪಾ ಕುಣಕೊಂತ..

Team Udayavani, Jan 7, 2023, 5:35 AM IST

ತೇರಾ ಏರಿ ಹಾವೇರ್ಯಾಗೇ ಗೌಡ್ರ ನಕ್ಕಾರೋ..

ಹಾವೇರಿ: ಹಗ್ಗೋ ಮಾರಾಯ.. ಚಾ ಕುಡಿಕೆಂಡ ಗುದ್ಲೆಪ್ಪ ಹಳ್ಳಿಕೇರಿ ಸರ್ಕಲ್‌ದಾಗ ನಿಂತಕೆಂಡಿದ್ನಿ. ಬಂದರಪಾ ಕುಣಕೊಂತ ಮಂದಿ ಹೇಳ್ತನಿ ನಿಮಗ…, ಚೇ ಚೇ ಚೇ…ಚೇ.. ಹೆಂತ ಕುಣತೋಪಾ ಅದು. ಗುಗ್ಗಳ ಕೊಡಾ ಹೊತ್ತಾಗೂ ಇಷ್ಟ ಮಸ್ತ್ ಕುಣಿದುಲ್ಲ ಬಿಡ ಮತ್‌. ವೀರಗಾಸಿ ಸಾಂಬಾಳ ಹೊಡಿಯೋ ಸೌಂಡಿಗೆ ಸರ್ಕಲ್‌ ದಾಗಿನ ಮಂಡಕ್ಕಿ ಚುರಮರಿ ಅಂಗಡಿಯೊಳಗಿನ ಭಾಂಡೆ ಎಲ್ಲಾ ಎತ್ತ ಬೇಕಾದತ್ತ ಹೊಳ್ಯಡಿ ಬಿದ್ದು ಹೆಪ್ಪ ಮುರಿದ ಅಡಕಲ ಗಡಿಗಿ ಬಿದ್ದು ಸಪ್ಪಳಾದು ನೋಡ.

ಮೈಲಾರ ಗುಡ್ಡದಿಂದ ಬಂದಿದ್ದ ಪಟಗದ ಅಜ್ಜ ಹಣಿಗೆ ಚಲೋತ್ನಾಗೆ ಭಂಡಾರ ಇಬತ್ತಿ ಹೊಡಕೊಂಡಿದ್ದ. ಚಂದ್ರಕಾಳಿ ಸೀರಿ ಉಟ್ಟ ತನ್ನ ಹೆಂಡ್ತಿನ ಕೈ ಹಿಡಕೊಂಡ ಎಲ್ಲಿಗ ಕರ ಕೊಂಡ ಹೊಂಟಿದ್ನೋ ಗೊತ್ತಿಲ್ಲ. ಮುದ ಕಿನೂ ಒಂದಿಷ್ಟ ಶರೀಫ್‌ರ ಹೇಳಿದಾಂಗ ಗದ್ದಲದ ಹೂಲಗೂರ ಸಂತ್ಯಾಗ ನಿಂತಂಗ ನಿಂತಿದ್ಲು. ಅಷ್ಟೊತ್ತಿಗಂದ್ರ ಸಮ್ಮೇಳನಾ ಅಧ್ಯಕ್ಷರ ಮೆರವಣಿಗೆ ರಥಾ ಬಂತನೋಡ್ರಿ. ಎಪ್ಪಾ…ನೋಡಿದವ್ರಿಗೆ ಸಾವಿರದ ಶರಣು ಮಾಡಬೇಕು ಅನ್ನೋ ಖುಷಿ ಎದ್ಯಾಗ ಉಕ್ಕಿ ಹರಿಯುವಂಗಾತು. ಅಲ್ಲಿದ್ದವ್ರಗೆಲ್ಲಾ. ಏ ಯಾರೋ ಇಂವಾ ಅಂದ್ಲು ಮುದಕಿ. ಅಜ್ಜ ಮೀಸಿ ಕಯ್ನಾಡಸ್ಕೊಂತ, ಏ ಜನಮದ ಜೋಡಿ ಸಿನಿಮಾದಾಗಿನ ಹಾಡ ಬರದಾರಂತ ಇವ್ರು. ಅದಕ್ಕ ಮೆರವಣಿಗಿ ಮಾಡಾತಿರಬೇಕು ಅಂದ. ಬಾಜು ನಿಂತ ಗುದ್ಲೆಪ್ಪ ಹಳ್ಳಿಕೇರಿ ಕಾಲೇಜಿನ ಹುಡಗಿ ಕಿಸ ಕಿಸ ನಕ್ಕು. ಬರೇ ಅದೊಂದ ಸಿನಿಮಾ ಹಾಡಲ್ಲೋ ಯೆಜ್ಜಾ. ನಂಜುಂಡಿ ಕಲ್ಯಾಣದ ಒಳಗೆ ಸೇರಿದರೆ ಗುಂಡು ಹಾಡನು ಸೇರಿ ಅವ್ರ ನೂರಾರು ಸಿನಿಮಾ ಹಾಡ ಬರದಾರ ಅದಕ್ಕ ಹಾವೇರಿ ಸಾಹಿತ್ಯ ಸಮ್ಮೇಳನ ಅಧ್ಯಕ್ಷಗಿರಿ ಕೊಟ್ಟಾರ ಅವ್ರಗಿ ಅಂದ್ಲು.

ಅಜ್ಜನು ಥಟಕ್‌ ಹಾಕಿದ್ನ ಕಾಣತೈತಿ. ಒಳಗೆ ಸೇರಿದರೆ ಗುಂಡು ಶಬ್ದ ಕೇಳದವನ ಗಪ್‌ಚುಪ್‌ ಆದ್ನ. ಮೆರವಣಿಗಿ ಮುಂದ ಹೋಗಾ ಕತ್ತಿತ್ತು ಮುದಕಗ ಭೂಮಿ ತಾಯಾನೆ ನೀ ಇಷ್ಟಾ ಕಣೆ ಹಾಡು ನೆನಪಾಗಿರಬೇಕು. ಮೀಸ್ಯಾಗಿಂದನ ಒಂದ ನಗಿ ನಕ್ಕು ಸೊಂಟದ ಮ್ಯಾಲ ಕೈ ಇಟ್ಟು ನಿಂತಾ. ಮೆರವಣಿಗಿ ಖದರ್‌ ನೋಡಿ ಅಬಾಬಾ…ಅಲಾ..ಲಾ..ಅಂದಾ.

ಸಮ್ಮೇಳನ ಜಾಗಕ್ಕ ಬರತಿದ್ದಂಗ ಗೌಡರನ್ನ ಸ್ವಾಗತ ಮಾಡಿದವ್ರು ಕಂಬಳಿ ಹಾಸಿಕೆಂಡ ಕುಂತಿದ್ದ ಕುರುಬರ ರಾಯಪ್ಪ. ಅವನ ಪ್ರಶ್ನೆ ಏನಪಾ ಅಂದ್ರ ಅಲ್ರೋ ಈ ಗೌಡ್ರು ಭಾರಿ ಮಸ್ತ ಮಸ್ತ ಸಿನಿಮಾ ಹಾಡ ಬರದಾರಂತ. ಸಮ್ಮೇಳನದಾಗ ಏನಾರ ಹಾಡು ಸಿನಿಮಾ ತೋರಸ್ತಾರನ ಅನ್ನೊದು. ಬಾಜುಕ ನಿಂತಿದ್ದ ಹಾವೇರಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಲಿಂಗಯ್ಯ ಹಿರೇಮಠರು, ಎಪ್ಪಾ ಯಜ್ಜಾ ಸಿನಿಮಾ ತೋರಸು ಟೆಂಟ್‌ ಕಂಡಂಗ ಕಾಣಾತೈತೆನ ನಿನಗಿದು. ಅಲ್ಲಪಾ ಇದು ಕನ್ನಡದ ಜಾತ್ರಿ. ವರ್ಷಾ ನೀ ಹೆಂಗ ಗುಡ್ಡದ ಜಾತ್ರಿ ಮಾಡತಿಯಲ್ಲಾ ಹಂಗ ಕನ್ನಡ ಜಾತ್ರಿ ಇದು ಅಂತಾ ಸಮ್ಮೇಳನ ಸಮರ್ಥಿಸಿ ಕೊಳ್ಳ ದರಾಗ ಸಾಕಾಗಿ ಹೋಯಿತು. ಅಂದು ಗೌಡ್ರು ಉತ್ತರ ಕರ್ನಾಟಕದ ಖಡಕ್‌ ಮೆಣಸಿನಕಾಯಿ ಮಂದಿಯಂತಾ ಮಾತ ಕೇಳಿಸಿಕೊಳ್ಳದ್ದ ಚಲೋ ಆತು.

ಅಂತು ಇಂತು ಸಮ್ಮೇಳನ ವೇದಿಕಿ ಹತ್ತಿದ್ರು. ಆಹಾ ಏನರ ಖದರ್‌ ಅಂದ್ರಿ ಗೌಡರದು. ಮೊದ್ಲ ದೊಡ್ಡರಂಗ ಇರೋ ಗೌಡ್ರು.ಒಲುಮೆ ಸಿರಿ ಕಂಡಂಗಾತು. ಬಂದು ವೇದಿಕಿ ಮ್ಯಾಲ ಆಸೀನರಾಗತ್ತಿಂಗನ ಕನ್ನದ ಮನಸ್ಸುಗಳ ಚಪ್ಪಾಳಿ ಸದ್ದು ಮುಗಲ ಮುಟ್ಟತು. ರೂಪ ಎದೆಗೆ ನಾಟಿದಾಂಗಿತ್ತು. ಗೌಡ್ರ ಊರು ಯಾರು ಕೇಳಲಿಲ್ಲ.ಸೇರಿದ ಎಲ್ಲಾರೂ ನಮ್ಮೂರ ಮಂದಾರ ಹೂವೆ… ಅನ್ನೋಥರಾ ಗೌಡ್ರನ ಅವಚಗೊಂಡರು.ಗೌಡ್ರು ಕೇಳಿಸದೇ ಕಲ್ಲುಕ ಲ್ಲಿನ ಕನ್ನಡ ನುಡಿ ಅಂತಾ ಅಷ್ಟ ಬರದಿದ್ರು. ಆದ್ರ ಸಾಹಿತ್ಯ ಸಮ್ಮೇಳನ ನಡೆದ ಹಾವೇರಿ ಕರಿ ಮಣ್ಣಿನ ಕಣ ಕಣದಲ್ಲೂ ಕನ್ನಡ ನುಡಿ ಕೇಳ್ತ ನೋಡ್ರಿಪಾ. ಅಂತೂ ಕನ್ನಡದ ತೇರು ಏರಿದ ರಂಗೇಗೌಡ್ರು ಹಾವೇರ್ಯಾಗೆ ನಗು ನಗುತಾ ನಲಿದರು.

-ಡಾ|ಬಸವರಾಜ್‌ ಹೊಂಗಲ್‌

ಟಾಪ್ ನ್ಯೂಸ್

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.