ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬ್ಲಾಸ್ಟ್ ಬೆದರಿಕೆ ಪತ್ರ ಪ್ರಕರಣ; ಪೊಲೀಸ್ ತನಿಖೆ
ಧರ್ಮಸ್ಥಳ ಅಂಚೆ ಕಚೇರಿಯಿಂದ ಪತ್ರ ರವಾನೆ
Team Udayavani, Jan 7, 2023, 10:19 PM IST
ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಪೊಲೀಸ್ ಠಾಣೆಗೆ ಹೊಸ ವರ್ಷಕ್ಕೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಪತ್ರವನ್ನು ಕಳ್ಳನೋರ್ವ ಧರ್ಮಸ್ಥಳ ಪೊಲೀಸ್ ಠಾಣೆಗೆ ಒಳಪಟ್ಟ ಅಂಚೆ ಕಚೇರಿಯಿಂದ ಪತ್ರ ರವಾನಿಸಿದ್ದ ಎಂಬ ಮಾಹಿತಿ ಮೇರೆಗೆ ಚೆನ್ನೈ ಪೊಲೀಸರು ಧರ್ಮಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಸಿ ಬಾಂಬ್ ಪತ್ರ ಬರೆದ ಹೊಸಪೇಟೆ ಮೂಲದ ಹನಮಂತ (42)ನನ್ನು ಚೆನ್ನೈ ಪೊಲೀಸರು ಬಂಧಿಸಿದ್ದರು. ಈತ ಕಳೆದ ನವೆಂಬರ್ 11ರಂದು ಭಟ್ಕಳ ಶಹರ ಪೊಲೀಸ್ ಠಾಣೆಗೆ ಬಾಂಬ್ ಬ್ಲಾಸ್ಟ್ ಬೆದರಿಕೆ ಪತ್ರ ಕಳುಹಿಸಿದ್ದ. ಪತ್ರದಲ್ಲಿ ಚೆನ್ನೈ ಬಳಿಕದ ಟಾರ್ಗೆಟ್ ಎಂದು ಬರೆದಿದ್ದದಲ್ಲದೆ ಉರ್ದು ಭಾಷೆಯೂ ಇತ್ತು ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದಾಗ ತಮಿಳುನಾಡಿನಲ್ಲೂ ಇದೇ ಮಾದರಿ ಪತ್ರ ಸಂದೇಶ ಬಂದಿರುವುದು ತಿಳಿದುಬಂದಿದೆ.
ಅಂತರ್ರಾಜ್ಯ ಕಳ್ಳನಾಗಿರುವ ಈತ ಚೆನ್ನೈನಲ್ಲಿ ಕಳವುಗೈದ ಲ್ಯಾಪ್ಟಾಪ್ ಮಾರಾಟ ಮಾಡಿದ ವಿಚಾರದಲ್ಲಿ ಪೊಲೀಸರು ತನಿಖೆ ನಡೆಸುವ ವೇಳೆ ಈತನ ಬಗ್ಗೆ ಸುಳಿವು ಸಿಕ್ಕಿತ್ತು. ಬಂಧನದ ಬಳಿಕ ವಿಚಾರಣೆ ನಡೆಸಿದಾಗ ಈತ ನ. 29ರಂದು ಧರ್ಮಸ್ಥಳ ಗ್ರಾಮದ ಅಂಚೆ ಬಾಕ್ಸ್ನಲ್ಲಿ ತಮಿಳುನಾಡು ಪುಲಿಯಂತೋಪು ಹಾಗೂ ಭಟ್ಕಳ ಪೊಲೀಸರಿಗೆ ಬೆದರಿಕೆ ಪತ್ರ ಹಾಕಿದ್ದ ಎಂದು ತನಿಖೆಯಿಂದ ತಿಳಿದು ಬಂದಂತೆ ಚೆನ್ನೈ ಪೊಲೀಸರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳೀಯವಾಗಿ ಅಂಚೆ ಬಾಕ್ಸ್ ಪರಿಶೀಲನೆ ಸಹಿತ ಸುತ್ತಮುತ್ತ ಸಿಸಿ ಟಿವಿ ಫುಟೇಜ್ ಪರಿಶೀಲನೆ ಮಾಡಿದ್ದಾರೆ. ತನಿಖೆಗೆ ಪೂರಕ ಸಹಕಾರ ನೀಡುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆ ಉಪನಿರೀಕ್ಷಕ ಅನಿಲ್ ಕುಮಾರ್ ತಿಳಿಸಿದ್ದಾರೆ.
ಈತ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ ಸಹಿತ ಇತರೆಡೆ ಓಡಾಟ ನಡೆಸಿರುವ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !