ಸಿಡ್ನಿ ಟೆಸ್ಟ್‌ ಪಂದ್ಯ: ಗೆಲುವಿನ ನಿರೀಕ್ಷೆಯಲ್ಲಿ ಆಸ್ಟ್ರೇಲಿಯ

ದಕ್ಷಿಣ ಆಫ್ರಿಕಾ ಆರು ವಿಕೆಟಿಗೆ 149

Team Udayavani, Jan 8, 2023, 12:07 AM IST

ಸಿಡ್ನಿ ಟೆಸ್ಟ್‌ ಪಂದ್ಯ: ಗೆಲುವಿನ ನಿರೀಕ್ಷೆಯಲ್ಲಿ ಆಸ್ಟ್ರೇಲಿಯ

ಸಿಡ್ನಿ: ಮಳೆಯಿಂದ ತೊಂದರೆಗೊಳಗಾದ ಸಿಡ್ನಿ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯ ಗೆಲುವು ಸಾಧಿಸುವ ನಿರೀಕ್ಷೆ ಇಟ್ಟುಕೊಂಡಿದೆ.

ಪಂದ್ಯದ ನಾಲ್ಕನೇ ದಿನದಾಟದಲ್ಲಿ ಪ್ಯಾಟ್‌ ಕಮಿನ್ಸ್‌ ಮತ್ತು ಜೋಶ್‌ ಹ್ಯಾಝಲ್‌ವುಡ್‌ ಬಿಗು ದಾಳಿ ಸಂಘಟಿಸಿದ್ದರಿಂದ ದಕ್ಷಿಣ ಆಫ್ರಿಕಾ ಕೇವಲ 149 ರನ್ನಿಗೆ 6 ವಿಕೆಟ್‌ ಕಳೆದುಕೊಂಡಿದೆ.

ತಂಡವಿನ್ನೂ ಫಾಲೋಆನ್‌ ಭೀತಿಯಿಂದ ಪಾರಾಗಿಲ್ಲ. ಇನ್ನೊಂದು ದಿನದ ಆಟ ಬಾಕಿ ಉಳಿದಿದ್ದು ದಕಿಣ ಆಫ್ರಿಕಾ ಸೋಲು ತಪ್ಪಿಸಲು ಪ್ರಯತ್ನಿಸಬೇಕಾಗಿದೆ.

ಭಾರೀ ಮಳೆಯಿಂದ ಮೂರನೇ ದಿನದಾಟ ಪೂರ್ತಿ ಸಹಿತ ನಾಲ್ಕು ಅವಧಿಯ ಆಟ ನಷ್ಟವಾಗಿದ್ದರೂ ಪ್ರವಾಸಿ ತಂಡಕ್ಕೆ ಫಾಲೋಆನ್‌ ಹೇರಿ ಗೆಲುವು ಸಾಧಿಸುವ ವಿಶ್ವಾಸವನ್ನು ಆಸ್ಟ್ರೇಲಿಯ ತಂಡ ಇಟ್ಟುಕೊಂಡಿದೆ. ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌ ನಲ್ಲಿ ಮುನ್ನಡೆ ಸಾಧಸಲು ಇನ್ನೂ 326 ರನ್‌ ಗಳಿಸಬೇಕಾಗಿದೆ. ಅಂತಿಮ ದಿನ 98 ಓವರ್‌ಗಳ ಆಟ ನಡೆಯಲಿದ್ದು ಮಳೆ ಬರುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ.

4ನೇ ದಿನದ ಅಂತಿಮ ಅವಧಿಯಲ್ಲಿ ಖಾಯ ಝಾಂಡೊ ಮತ್ತು ಕೈಲ್‌ ವೆರೆಯ್ನೆ ಅವರ ವಿಕೆಟ್‌ ಬಿದ್ದ ಕಾರಣ ದಕ್ಷಿಣ ಆಫ್ರಿಕಾ ಕುಸಿಯಿತು. ಈ ಎರಡು ವಿಕೆಟನ್ನು ಕಮಿನ್ಸ್‌ ಹಾರಿಸಿದ್ದರು. ಇದರಿಂದ ಆಸ್ಟ್ರೇಲಿಯದ ಗೆಲುವಿನ ಆಸೆ ಚಿಗುರೊಡೆದಿತ್ತು. ತಂಡವೀಗ ಸರಣಿ ಕ್ಲೀನ್‌ಸಿÌàಪ್‌ಗೆçಯುವ ಭರವಸೆಯಲ್ಲಿದ್ದು ಈ ಮೂಲಕ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲಿನಲ್ಲಿ ಸ್ಥಾನ ಪಡೆಯಲು ಹಾತೊರೆಯುತ್ತಿದೆ.

ನಾಲ್ಕನೇ ದಿನವೂ ಮಳೆ ತೊಂದರೆ ನೀಡಿದ ಬಳಿಕ ಕಮಿನ್ಸ್‌ ಮತ್ತು ಹ್ಯಾಝಲ್‌ವುಡ್‌ ಬಿಗು ದಾಳಿ ಸಂಘಟಿಸಿದ್ದರಿಂದ ದಕ್ಷಿಣ ಆಫ್ರಿಕಾ ರನ್‌ ಗಳಿಸಲು ಒದ್ದಾಡಿತು. ತೆಂಬಾ ಬವುಮ ಮತ್ತು ಖಾಯ ಝಾಂಡೊ ಮಾತ್ರ ದಿಟ್ಟ ಬ್ಯಾಟಿಂಗ್‌ ಪ್ರದರ್ಶಿಸಿದರು. ಕಮಿನ್ಸ್‌ 29 ರನ್ನಿಗೆ 3 ವಿಕೆಟ್‌ ಕಿತ್ತರೆ ಹ್ಯಾಝಲ್‌ವುಡ್‌ 29 ರನ್ನಿಗೆ 2 ವಿಕೆಟ್‌ ಉರುಳಿಸಿದರು.

ಖ್ವಾಜಾ ಅಜೇಯ 195
ಈ ಮೊದಲು ಆಸ್ಟ್ರೇಲಿಯ ನಾಯಕ ಕಮಿನ್ಸ್‌ ಅವರು ಆಸ್ಟ್ರೇಲಿಯದ ಮೊತ್ತ 4 ವಿಕೆಟಿಗೆ 475 ರನ್‌ ಇದ್ದಾಗ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿದ್ದರು. ಇದರಿಂದ 195 ರನ್‌ ಗಳಿಸಿ ಅಜೇಯರಾಗಿ ಉಳಿದಿದ್ದ ಉಸ್ಮಾನ್‌ ಖ್ವಾಜಾ ಅವರು ದ್ವಿಶತಕ ಪೂರ್ತಿಗೊಳಿಸುವ ಅವಕಾಶ ಕಳೆದುಕೊಂಡರು. ಇದು ಆಟಗಾರನೋರ್ವ 190 ಪ್ಲಸ್‌ ರನ್‌ ಗಳಿಸಿದ ವೇಳೆ ತಂಡದ ನಾಯಕರು ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡ ಮೂರನೇ ನಿದರ್ಶನವಾಗಿದೆ. ಈ ಮೊದಲು ಫ್ರ್ಯಾಂಕ್‌ ವೊರೆಲ್‌ ಮತ್ತು ಸಚಿನ್‌ ತೆಂಡುಲ್ಕರ್‌ 190 ಪ್ಲಸ್‌ ರನ್‌ ಗಳಿಸಿದ್ದ ವೇಳೆ ತಂಡದ ನಾಯಕರು ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿದ್ದರು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.