ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಭೇಟಿ
Team Udayavani, Jan 9, 2023, 7:10 AM IST
ಬೆಳ್ತಂಗಡಿ : ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ನ್ಯಾಯಮೂರ್ತಿಗಳನ್ನು ದೇವಸ್ಥಾನದ ವ್ಯವಸ್ಥಾಪಕರಾದ ಪಾರ್ಶನಾಥ್ ಬರಮಾಡಿ ಕೊಂಡರು. ಲೋಕಾಯಕ್ತ ಎಸ್ಪಿಗಳಾದ ಲಕ್ಷ್ಮೀ ಗಣೇಶ್, ಸೈಮನ್, ಡಿವೈಎಸ್ಪಿ ಕಲಾವತಿ, ಚೆಲುವರಾಜ್, ಇನ್ಸ್ಪೆಕ್ಟರ್ ಅಮಾನುಲ್ಲ ಜತೆಗಿದ್ದರು.
ಇದನ್ನೂ ಓದಿ: ನುಡಿ ಜಾತ್ರೆಗೆ ಸಂಭ್ರಮದ ತೆರೆ; ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಅಚ್ಚುಕಟ್ಟು