ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿಗೆ ಜಗ್ಗಿ ವಾಸುದೇವ ಮಹಾಯೋಗಿಗಳನ್ನು ಆಹ್ವಾನಿಸಿದ ಶಾಸಕ ಮುನವಳ್ಳಿ
Team Udayavani, Jan 9, 2023, 10:16 AM IST
ಗಂಗಾವತಿ: ಐತಿಹಾಸಿಕ ಪ್ರಸಿದ್ಧ ರಾಮಾಯಣದ ಪ್ರಮುಖ ಸ್ಥಳವಾಗಿರುವ ಕಿಷ್ಕಿಂಧಾ ಅಂಜನಾದ್ರಿಗೆ ಆಗಮಿಸುವಂತೆ ಈಶ ಫೌಂಡೇಶನ್ ಪೂಜ್ಯ ಜಗ್ಗಿ ವಾಸುದೇವ ಮಹಾಯೋಗಿಗಳನ್ನು ಶಾಸಕ ಪರಣ್ಣ ಮುನವಳ್ಳಿ ಆಹ್ವಾನಿಸಿದರು.
ಹಿಂದೂಗಳ ಶಕ್ತಿ ಮತ್ತು ಪವಿತ್ರ ಭೂಮಿಯಾಗಿರುವ ಕಿಷ್ಕಿಂಧಾ ಅಂಜನಾದ್ರಿಗೆ ನಿತ್ಯವೂ ಸಾವಿರಾರು, ದೇಶ-ವಿದೇಶಗಳ ಭಕ್ತರು ಆಗಮಿಸುತ್ತಿದ್ದು, ಸರಕಾರ ಭಕ್ತರಿಗೆ ಮೂಲಸೌಕರ್ಯ ಕಲ್ಪಿಸಲು ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಯೋಜನೆ ರೂಪಿಸಿದ್ದು, ಈ ಕೆಲಸ ಕಾರ್ಯಗಳಿಗೆ ಮಾರ್ಗದರ್ಶನ ಮಾಡಲು ಮತ್ತು ಈ ಕ್ಷೇತ್ರಕ್ಕೆ ಇನ್ನಷ್ಟು ಕಳೆ ಬರುವಂತಾಗಲು ತಾವು ಭೇಟಿ ನೀಡುವಂತೆ ಮನವಿ ಮಾಡಿದರು.
ಜಗ್ಗಿ ವಾಸುದೇವ ಮಹಾಯೋಗಿಗಳು ಪ್ರತಿಕ್ರಿಯಿಸಿ ಸಮಯ ನೋಡಿಕೊಂಡು ಕಿಷ್ಕಿಂಧಾ ಅಂಜನಾದ್ರಿಗೆ ಆಗಮಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್ ಅಳಿಯ ಗೌರಾ ಬಸವರಾಜ, ಸಿಂಗನಾಳ ವಿರೂಪಾಕ್ಷಪ್ಪ, ಅಮರಜ್ಯೋತಿ ನರಸಪ್ಪ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ