ಅಂಜುಶ್ರೀ ಸಾವು ಪ್ರಕರಣಕ್ಕೆ ತಿರುವು… ವಿಷ ಸೇವಿಸಿ ಆತ್ಮಹತ್ಯೆ?


Team Udayavani, Jan 10, 2023, 7:15 AM IST

ಅಂಜುಶ್ರೀ ಸಾವು ಪ್ರಕರಣಕ್ಕೆ ತಿರುವು… ವಿಷ ಸೇವಿಸಿ ಆತ್ಮಹತ್ಯೆ?

ಕಾಸರಗೋಡು : ಪೆರುಂಬಳ ಬೇನೂರು ನಿವಾಸಿ, ಮಂಜೇಶ್ವರ ಸರಕಾರಿ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಅಂಜುಶ್ರೀ ಪಾರ್ವತಿ (19) ಸಾವಿಗೆ ವಿಷ ಸೇವನೆ ಕಾರಣ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಕಂಡುಕೊಂಡಿದ್ದಾರೆ.

ಹೊಟೇಲ್‌ನಿಂದ ಆನ್‌ಲೈನ್‌ ಮೂಲಕ ತರಿಸಿದ ಆಹಾರ ಸೇವನೆಯಿಂದ ಆಕೆ ಮೃತಪಟ್ಟಿದ್ದಾಳೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ ತನ್ನ ಸ್ನೇಹಿತ ಬೆಂಡಿಚ್ಚಾಲ್‌ ಮಂಡಲಿಪಾರ ನಿವಾಸಿ ವಿಪಿನ್‌ ರಾಜ್‌ ಇತ್ತೀಚೆಗೆ ಅನಾರೋಗ್ಯದಿಂದ ನಿಧನಹೊಂದಿದ ಕಾರಣ ಮನನೊಂದು ವಿಷ ಸೇವಿಸಿರಬೇಕೆಂದು ಪೊಲೀಸರು ತಿಳಿಸಿದ್ದಾರೆ. ಅಂಜುಶ್ರೀ ಅವರ ಫೋನ್‌ನಲ್ಲಿ ವಿಪಿನ್‌ರಾಜ್‌ ಮಾಹಿತಿ ಲಭಿಸಿದೆ ಎನ್ನಲಾಗಿದೆ.

ಜ. 7ರಂದು ಘಟನೆ ಸಂಭವಿಸಿದ್ದು, ಬೇಕಲ ಡಿವೈಎಸ್‌ಪಿ ಸಿ.ಕೆ. ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಪೊಲೀಸರು ವಿದ್ಯಾರ್ಥಿನಿಯ ಮನೆಗೆ ತೆರಳಿ ಮನೆಯವರಿಂದ ಹಾಗೂ ಸಂಬಂಧಿಕರಿಂದ, ಗೆಳೆಯರಿಂದ ಹೇಳಿಕೆ ಸಂಗ್ರಹಿಸಿದ್ದಾರೆ. ಇದೇ ವೇಳೆ ಆಕೆ ಬರೆದಿಟ್ಟಿರುವುದೆಂದು ಸಂಶಯಿಸಿರುವ ಪತ್ರವೊಂದು ಲಭಿಸಿದ್ದು, ಈ ಬಗ್ಗೆಯೂ ತನಿಖೆ ನಡೆಯುತ್ತಿದೆ. ಫಾರೆನ್ಸಿಕ್‌ ಪರೀಕ್ಷೆಯ ವರದಿ ಇನ್ನೆರಡು ದಿನಗಳೊಳಗೆ ಲಭಿಸುವ ಸಾಧ್ಯತೆಯಿದ್ದು, ಆಕೆಯ ದೇಹ ಸೇರಿರುವ ವಿಷ ಯಾವುದೆಂದು ಬಳಿಕವಷ್ಟೇ ದೃಢಪಡಲಿದೆ.

ಕ್ಯಾನ್ಸರ್‌ನಿಂದ ಸ್ನೇಹಿತ ಸಾವು
ವಿಪಿನ್‌ ರಾಜ್‌ ಕ್ಯಾನ್ಸರ್‌ ಬಾಧಿಸಿ ಮೃತಪಟ್ಟಿದ್ದು, ಅದಾಗಿ 41ನೇ ದಿನ ಅಂಜುಶ್ರೀ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ಅವರಿಬ್ಬರ ಮನೆ ಸುಮಾರು 15 ಕಿ.ಮೀ. ಅಂತರದಲ್ಲಿದ್ದು, ಪರಿಚಯ ಹೇಗಾಯಿತು ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ವಿಪಿನ್‌ ರಾಜ್‌ ವಿದ್ಯಾನಗರದ ಐಟಿಐಯಲ್ಲಿ ಕಲಿತಿದ್ದು. ಈ ಸಂದರ್ಭದಲ್ಲಿ ಪರಿಚಯವಾಗಿರಬೇಕೆಂದು ಶಂಕಿಸಲಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.