ಕಣಜದ ಹುಳುಗಳು ದಾಳಿ: 10 ಮಂದಿ ಶಾಲಾ ವಿದ್ಯಾರ್ಥಿಗಳು, ಇಬ್ಬರು ಆಟೋ ಚಾಲಕರಿಗೆ ಗಾಯ


Team Udayavani, Jan 10, 2023, 12:26 AM IST

ಕಣಜದ ಹುಳುಗಳು ದಾಳಿ: 10 ಮಂದಿ ಶಾಲಾ ವಿದ್ಯಾರ್ಥಿಗಳು, ಇಬ್ಬರು ಆಟೋ ಚಾಲಕರಿಗೆ ಗಾಯ

ಕಾಸರಗೋಡು: ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಕಣಜದ ಹುಳುಗಳು ದಾಳಿ ನಡೆಸಿದ್ದು, ಹತ್ತು ಮಂದಿ ವಿದ್ಯಾರ್ಥಿಗಳು ಹಾಗು ಇಬ್ಬರು ಆಟೋ ಚಾಲಕರು ಗಾಯಗೊಂಡಿದ್ದಾರೆ.

ಚೆಮ್ನಾಡ್‌ ವೆಸ್ಟ್‌ ಜಿಎಲ್‌ಪಿ ಶಾಲೆಯ ಹತ್ತು ಮಂದಿ ವಿದ್ಯಾರ್ಥಿಗಳು ಎರಡು ಆಟೋ ರಿಕ್ಷಾಗಳಲ್ಲಿ ಪ್ರಯಾಣಿಸುತ್ತಿದ್ದಾಗ ದಾಳಿ ನಡೆದಿದೆ. ವಿದ್ಯಾರ್ಥಿಗಳಾದ ಅದಾನ್‌ ಅಬು (6), ಜೈನಬ (7), ಫಾತಿಮತ್‌ ಸುಹರಾ (6), ಅಹಮ್ಮದ್‌ ಜುಬೀರ್‌ (7), ಮೊಹಮ್ಮದ್‌ ರಿನಾದ್‌ (7), ಆಯಿಶ ನವೀರ (6), ಫಾತಿಮತ್‌ (7), ಆಯಿಷಾ (11), ಅಫ್ರಾನ್‌ ಅಹಮ್ಮದ್‌ (9), ಮೊಹಮ್ಮದ್‌ ರಾಹಿಲ್‌ (8), ಆಟೋ ರಿಕ್ಷಾ ಚಾಲಕರಾದ ಹಾರಿಸ್‌ (37) ಮತ್ತು ಹಕೀಂ(30) ಗಾಯಗೊಂಡಿದ್ದಾರೆ. ಅವರಿಗೆ ಕಾಸರಗೋಡು ಜನರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.

ರೈಲು ಢಿಕ್ಕಿ: ಕರಾವಳಿ ಠಾಣೆ ಸ್ರಾಂಕ್‌ ಸಾವು
ಉಪ್ಪಳ: ರೈಲು ಢಿಕ್ಕಿ ಹೊಡೆದು ಕುಂಬಳೆ ಕರಾವಳಿ ಠಾಣೆಯ ಸ್ರಾಂಕ್‌ ಸಾವಿಗೀಡಾಗಿದ್ದಾರೆ. ಆಲಪ್ಪುಳ ಚುಗಂ ಕುಪ್ಪಪುರಂ ಕೈನಕಾರಿ ಪಳ್ಳಿ ತುರುತ್ತಿ ಮುಲ್ಲಯಕ್ಕಲ್‌ ಆಲ ಪರಂಬಿಲ್‌ ಆನಂದ ಕೃಷ್ಣನ್‌ ಅವರ ಪುತ್ರ ಉಣ್ಣಿಕೃಷ್ಣನ್‌ (28) ಸಾವಿಗೀಡಾದವರು.

ಉಪ್ಪಳ ರೈಲು ನಿಲ್ದಾಣದಲ್ಲಿ ರೈಲಿನಿಂದ ಇಳಿದು ಮುಸೋಡಿಯಲ್ಲಿರುವ ಕರಾವಳಿ ಪೊಲೀಸ್‌ ಠಾಣೆಗೆ ರೈಲು ಹಳಿ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಮಂಗಳೂರು ಭಾಗದಿಂದ ಬರುತ್ತಿದ್ದ ರೈಲು ಢಿಕ್ಕಿ ಹೊಡೆದು ಸಾವು ಸಂಭವಿಸಿತು. ಅವರು ಕುಂಬಳೆ ಕರಾವಳಿ ಪೊಲೀಸ್‌ ಠಾಣೆಯ ಇಂಟರ್‌ಸೆಪ್ಟರ್‌ ಬೋಟ್‌ನ ಸ್ರಾಂಕ್‌ ಆಗಿದ್ದರು.

ರೈಲು ಢಿಕ್ಕಿ: ಅಪರಿಚಿತ ವ್ಯಕ್ತಿ ಸಾವು
ಕಾಸರಗೋಡು: ನಗರದ ಅಡ್ಕತ್ತಬೈಲ್‌ ಸಮೀಪದ ಚೀರುಂಬ ಕುದ್ರುನಲ್ಲಿ ರೈಲು ಢಿಕ್ಕಿ ಹೊಡೆದು ಸುಮಾರು 50 ವರ್ಷ ಪ್ರಾಯದ ವ್ಯಕ್ತಿಯೋರ್ವರು ಸಾವಿಗೀಡಾಗಿದ್ದಾರೆ. ನೇತ್ರಾವತಿ ಎಕ್ಸ್‌ಪ್ರೆಸ್‌ ರೈಲು ಢಿಕ್ಕಿ ಹೊಡೆದು ಸಾವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪ್ಪಳ: ನಿದ್ದೆಯಲ್ಲೇ ಮಹಿಳೆ ಸಾವು
ಉಪ್ಪಳ: ನಿದ್ದೆಯಲ್ಲೇ ಉಪ್ಪಳ ಬಪ್ಪಾಯಿತೊಟ್ಟಿ ನಿವಾಸಿ ಅಯೂಬ್‌ ಅವರ ಪತ್ನಿ ಸಬನಾ ಅಜ್ಮಿàನ್‌ (44) ಸಾವಿಗೀಡಾಗಿದ್ದಾರೆ. ಅವರು ಶನಿವಾರ ರಾತ್ರಿ ಊಟ ಮಾಡಿ ನಿದ್ದೆ ಮಾಡಿದ್ದರು. ಬೆಳಗ್ಗೆ ಹೊತ್ತು ಕಳೆದರೂ ಎದ್ದೇಳಲಿಲ್ಲ. ಮನೆಯವರು ಎಬ್ಬಿಸುವ ವೇಳೆ ಎಚ್ಚರಗೊಳ್ಳದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅದಾಗಲೇ ಅವರ ಸಾವು ಸಂಭವಿಸಿತ್ತು

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.